Gadag: ಬೀದಿ ಬದಿ ವ್ಯಾಪಾರಸ್ಥರಿಗೆ ಹೈಟೆಕ್ ತಳ್ಳು ಗಾಡಿ ಭಾಗ್ಯ
ಕೋಲ್ಡ್ ಸ್ಟೋರೇಜ್ ಘಟಕ ನಿರ್ಮಾಣ ಮಾಡಲಾಗುವುದು
Team Udayavani, Nov 20, 2023, 3:12 PM IST
ಗದಗ: ಬೀದಿ ಬದಿ ವ್ಯಾಪಾಸ್ಥರು ಸ್ವಾಭಿಮಾನದಿಂದ ತಮ್ಮ ಬದುಕು ಸಾಗಿಸಲು ಅನುಕೂಲವಾಗುವಂತೆ ಹೈಟೆಕ್ ತಳ್ಳು ಗಾಡಿಗಳನ್ನು ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನಗರದ ಕೆ.ಎಚ್. ಪಾಟೀಲ ವೃತ್ತದಲ್ಲಿ ಬೀದಿ ಬದಿ ವ್ಯಾಪರಸ್ಥರಿಗೆ ಹೈಟೆಕ್ ತಳ್ಳು ಗಾಡಿಗಳನ್ನು ವಿತರಿಸಿ ಅವರು ಮಾತನಾಡಿದರು.
ಶತಮಾನಗಳಿಂದ ಸಮಾಜದಲ್ಲಿ ಬಡಜನರನ್ನು ಅಸೂಯೆ ಭಾವನೆಯಿಂದ ನೋಡಲಾಗುತ್ತಿತ್ತು. ಇಂದಿರಾ ಗಾಂಧಿ ಅವರು ಬಡಜನರನ್ನು ಸ್ವಾಭಿಮಾನಿಗಳನ್ನಾಗಿಸುವ ದಿಸೆಯಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತದಂತಹ ಧೀಮಂತ ಮಹಿಳೆ. ಅವರ ಜನ್ಮದಿನವಾದ ಇಂದು ಬೀದಿ ಬದಿ ವ್ಯಾಪಾರಸ್ಥರಿಗೆ ಹೈಟೆಕ್ ತಳ್ಳು ಗಾಡಿಗಳನ್ನು ವಿತರಿಸುತ್ತಿರುವುದು ಅತ್ಯಂತ ಸಂತಸದ ಸಂಗತಿ ಎಂದು ಹೇಳಿದರು.
ಬೀದಿ ಬದಿ ವ್ಯಾಪಾರಸ್ಥರಿಗೆ ಸರ್ಕಾರದ ಸೌಲಭ್ಯಗಳನ್ನು ವಿತರಿಸುವಲ್ಲಿ ಜಿಲ್ಲೆ ಒಂದು ಹೆಜ್ಜೆ ಮುಂದೆ ಇದೆ. ಆದ್ದರಿಂದ, ಇದರ
ಸಂಪೂರ್ಣ ಸದುಪಯೋಗಪಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗುವಂತೆ ತಿಳಿಸಿದರು. ಇಂದು ನಗರದ 145 ಬೀದಿ ಬದಿ ವ್ಯಾಪಾರಸ್ಥರಿಗೆ ಹೈಟೆಕ್ ತಳ್ಳು ಗಾಡಿಗಳನ್ನು ವಿತರಿಸಲಾಗಿದ್ದು, ಬಾಕಿ ಫಲಾನುಭವಿಗಳಿಗೆ ಬರುವ ಜನವರಿ ಅಂತ್ಯದೊಳಗಾಗಿ ವಿತರಿಸಲಾಗುವುದು ಎಂದು ತಿಳಿಸಿದರು.
ಇದರ ಜೊತೆಗೆ ಬೀದಿ ಬದಿ ವ್ಯಾಪಾರಸ್ಥರ ಅನುಕೂಲಕ್ಕಾಗಿ ನಗರದಲ್ಲಿ ಕೋಲ್ಡ್ ಸ್ಟೋರೇಜ್ ಘಟಕ ನಿರ್ಮಾಣಕ್ಕೆ ಸಂಬಂಧಿಸಿದ
ಮನವಿಗೆ ಸ್ಪಂದಿಸಿ, ಜನವರಿ 19ರೊಳಗಾಗಿ ಕೋಲ್ಡ್ ಸ್ಟೋರೇಜ್ ಘಟಕ ನಿರ್ಮಾಣ ಮಾಡಲಾಗುವುದು ಎಂದು ಸಚಿವರು ಬೀದಿ ಬದಿ ವ್ಯಾಪಾರಸ್ಥರಿಗೆ ಭರವಸೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಮೇಶ ವಟಗಲ್, ಮಾಜಿ ಶಾಸಕ ಡಿ.ಆರ್. ಪಾಟೀಲ, ನಗರಸಭೆ ಸದಸ್ಯರು, ಗದಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ವಿವಿಧೋದ್ದೇಶಗಳ ಸಂಘದ ಪದಾಧಿಕಾರಿಗಳು, ಗಣ್ಯರು, ಸಾರ್ವಜನಿಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !