Gadag: ಕಸಾಪದಿಂದ ಡಾ| ಶಿವರಾಮ ಕಾರಂತ ಸ್ಮರಣೆ
ಆಲೋಚನಾ ಕ್ರಮ ಓದುಗರಲ್ಲಿ ಬೆರಗು ಹುಟ್ಟಿಸುತ್ತದೆ.
Team Udayavani, Oct 17, 2023, 4:44 PM IST
ಗದಗ: ಕಾದಂಬರಿಕಾರ, ಪರಿಸರವಾದಿ, ಪ್ರಗತಿಶೀಲ ಚಿಂತಕ, ಯಕ್ಷಗಾನತಜ್ಞ, ಸ್ವಾತಂತ್ರ್ಯ ಹೋರಾಟಗಾರ, ಚಿತ್ರ ನಿರ್ದೇಶಕ ಹೀಗೆ ಹತ್ತು ಹಲವು ಕ್ಷೇತ್ರಗಳ ಮೂಲಕ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮೇರು ಸಾಹಿತಿ ಡಾ| ಶಿವರಾಮ ಕಾರಂತ ಅವರು ಕನ್ನಡ ಸಾಹಿತ್ಯ ಸಂವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕೃತಿ ಮೂಕಜ್ಜಿಯ ಕನಸುಗಳು ಪ್ರಸ್ತುಪ ದಿನಮಾನದ ಸಾಮಾಜಿಕ ವ್ಯವಸ್ಥೆಯನ್ನು ಬಿಂಬಿಸುತ್ತದೆ ಎಂದು ಉಪನ್ಯಾಸಕ ಬಿ.ಸಿ. ಹನಮಂತಗೌಡ್ರ ಹೇಳಿದರು.
ನಗರದ ತೋಂಟದ ಸಿದ್ಧಲಿಂಗ ಶ್ರೀಗಳ ಕನ್ನಡ ಭವನದ ಕಸಾಪ ಕಾರ್ಯಾಲಯ ಜ್ಞಾನಪೀಠ ಪುರಸ್ಕೃತ ಡಾ| ಶಿವರಾಮ ಕಾರಂತ ಅವರ ಜನ್ಮದಿನದ ಅಂಗವಾಗಿ ಮೂಕಜ್ಜಿಯ ಕನಸುಗಳು ಕೃತಿ ಪರಿಚಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಾಲ್ಯದಲ್ಲಿಯೇ ವೈಧವ್ಯವನ್ನು ಅನುಭವಿಸಿದ ಮೂಕಾಂಬಿಕೆ ಮೂಕಜ್ಜಿಯಾಗಿರುವುದು ಇತಿಹಾಸ. ಪರಂಪರೆಯ ಕೊಂಡಿಯಾಗಿ, ಬದುಕಿನ ಬವಣೆಗಳಿಗೆ ಪರಿಹಾರವಾಗಿ, ಸಮತೂಕದ ಜೀವನ ನಡೆಸುವ ದಿಸೆಯಲ್ಲಿ ಸಮಾಜದ ಜನರಿಗೆ ಮಾರ್ಗದರ್ಶಕಳಾಗಿ ಕಾಣುವುದರ ಜೊತೆಗೆ ಪೌರಾಣಿಕ ಸಂಗತಿಗಳನ್ನು ಪ್ರಶ್ನೆ ಮಾಡುವ ಮೂಲಕ ಯುವಕರನ್ನು ಚಿಂತನೆಗೆ ಹಚ್ಚುವ ಅವಳ ಆಲೋಚನಾ ಕ್ರಮ ಓದುಗರಲ್ಲಿ ಬೆರಗು ಹುಟ್ಟಿಸುತ್ತದೆ. ಡಾ| ಶಿವರಾಂತ ಕಾರಂತರು ಈ ಕೃತಿ ಮೂಲಕ ಸಮಾಜದ ವಿವಿಧ ಸ್ತರಗಳನ್ನು ಪರಿಚಯಿಸುವಲ್ಲಿ ಯಶಸ್ವಿಯಾಗಿದ್ದಾರೆ ಹೇಳಿದರು.
ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಸಾರಸ್ವತ ಲೋಕಕ್ಕೆ ಅತ್ಯಮೂಲ್ಯವಾದ ಕೃತಿಗಳನ್ನು ನೀಡಿದ ಡಾ| ಕಾರಂತರು ಕಡಲ ತೀರದ ಭಾರ್ಗವರೆಂದು ಪ್ರಸಿದ್ದರು. ಬಹು ಆಯಾಮಗಳಲ್ಲಿ ತೆರೆದುಕೊಂಡು ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕವನ್ನು ಬೆಳಗಿದರೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಡಾ| ಜಿ.ಬಿ. ಪಾಟೀಲ, ಡಾ| ಅರ್ಜುನ ಗೊಳಸಂಗಿ, ಬಿ.ಎಫ್. ಚೇಗರಡ್ಡಿ, ಕೆ.ಎಚ್. ಬೇಲೂರ, ಶಶಿಕಾಂತ ಕೊರ್ಲಹಳ್ಳಿ, ಎಸ್.ಜೆ. ಪಾಟೀಲ, ಸಿ.ಕೆ.ಎಚ್. ಕಡಣಿಶಾಸ್ತ್ರಿ, ಡಾ| ರಾಜೆಂದ್ರ ಗಡಾದ, ಬಿ.ಎಸ್. ಹಿಂಡಿ, ಎಂ.ಎಚ್. ಸವದತ್ತಿ, ರತ್ನಕ್ಕ ಪಾಟೀಲ ಸೇರಿದಂತೆ ಅನೇಕರು ಇದ್ದರು. ಎಸ್. ಎಂ. ಕಾತರಕಿ ಸ್ವಾಗತಿಸಿದರು. ಶಿವಾನಂದ ಗಿಡ್ನಂದಿ ನಿರೂಪಿಸಿದರು. ಕಿಶೋರಬಾಬು ನಾಗರಕಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್