Gadag; ಎಲೆಕ್ಟ್ರೋಲ್ ಬಾಂಡ್ ವಿಷಯವಾಗಿ ಮೋದಿ ಶ್ವೇತ ಪತ್ರ ಹೊರಡಿಸಲಿ: ಎಚ್.ಕೆ ಪಾಟೀಲ


Team Udayavani, Mar 30, 2024, 4:05 PM IST

Gadag; ಎಲೆಕ್ಟ್ರೋಲ್ ಬಾಂಡ್ ವಿಷಯವಾಗಿ ಮೋದಿ ಶ್ವೇತ ಪತ್ರ ಹೊರಡಿಸಲಿ: ಎಚ್.ಕೆ ಪಾಟೀಲ

ಗದಗ: ಚುನಾವಣೆಗೆ ಮುನ್ನ ನರೇಂದ್ರ ಮೋದಿ ಶ್ವೇತ ಪತ್ರ ಹೊರಡಿಸಲಿ. ಎಲೆಕ್ಟ್ರೋಲ್ ಬಾಂಡ್ ಶೋಷಣೆ ಬಗ್ಗೆ ಜನ ತಿಳಿದುಕೊಳ್ಳಲು ಬಯಸಿದ್ದಾರೆ. ಇಲೆಕ್ಷನ್ ಕಮಿಷನ್ ಗೂ ಆಗ್ರಹ ಮಾಡುತ್ತೇನೆ. ಅಭ್ಯರ್ಥಿಗಳ ಬಗ್ಗೆ ಮಾಹಿತಿ ಕೇಳುತ್ತೀರಿ. ಎಲೆಕ್ಟ್ರೋಲ್ ಬಾಂಡ್ ವಿಷಯವಾಗಿ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿಬೇಕು ಎಂದು ಸಚಿವ ಎಚ್ ಕೆ ಪಾಟೀಲ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲೆಕ್ಟ್ರೋಲ್ ಬಾಂಡ್ ವಿಷಯದಲ್ಲಿ ಕೇಂದ್ರ ಸರ್ಕಾರ ಡೊನೇಷನ್ ಅಲ್ಲ ಸುಲಿಗೆ ಮಾಡಿದೆ. ಅಧಿಕೃತವಾಗಿಯೇ ಇಷ್ಟು ಸುಲಿಗೆ ನಡೆದಿದೆ ಎಂದರೆ ಖಾಸಗಿಯಾಗಿ, ಕಪ್ಪು ಹಣ ಎಷ್ಟು ಪಡೆದಿರಬಹುದು.? ದೊಡ್ಡ ಕುಳಗಳು ಎಲೆಕ್ಟ್ರೋಲ್ ಬಾಂಡ್ ನಲ್ಲಿ ಹಣ ನೀಡಿವೆ. ಹಣ ಪಡೆದ ಮೇಲೆ, ಪಕ್ಷ ಸೇರಿದ ಮೇಲೆ ಇಡಿ ವಿಚಾರಣೆ ಹಿಂಪಡೆದಿದ್ದನ್ನು ನೋಡಿದ್ದೇವೆ. ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮಾಡುವುದಲ್ಲದೆ ಸುಲಿಗೆ ಮಾಡಿದೆ. ರಾಷ್ಟ್ರ ರಾಜಕಾರಣದಲ್ಲಿ ಇದೇ ಮೊದಲು ಸುಲಿಗೆ, ಶೋಷಣೆ ಮಾಡಿ ಹಣ ಪಡೆಯಲಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಅತ್ಯಂತ ದೊಡ್ಡ ಸ್ಕ್ಯಾಮ್ ಬಿಜೆಪಿ ಮಾಡಿದೆ ಎಂದು ಆರೋಪಿಸಿದರು.

ತೆರಿಗೆ ಪಾವತಿಸುವಂತೆ ಕಾಂಗ್ರೆಸ್ ಗೆ ಐಟಿ ನೋಟಿಸ್ ವಿಷಯಕ್ಕೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರದ ಅಂಗ ಸಂಸ್ಥೆಗಳ ಮೂಲಕ ಭಯ ಹುಟ್ಟಿಸುವ ಪ್ರಯತ್ನ ಮಾಡುತ್ತಿದೆ. ನೋಟಿಸ್ ಕೊಡಬೇಡಿ ಅನ್ನಲ್ಲ. ಆದರೆ ಮೂವತ್ತು ವರ್ಷದ ಹಿಂದಿನದ್ದಕ್ಕೆ ಈಗ ನೋಟಿಸ್ ಕೊಡುತ್ತೀರಿ. ಕೋಡ್ ಆಫ್ ಕಂಡೆಕ್ಟ್ ಬಂದಮೇಲೆ ನೋಟಿಸ್ ಕೊಡುತ್ತೀರಿ. ಕಾಂಗ್ರೆಸ್ ಸಂಘಟನೆಯನ್ನು ಅಂಜಿಸುವ ಕೆಲಸ ಮಾಡಲಾಗುತ್ತಿದೆ. ಇದಕ್ಕೆ ತಕ್ಕ ಉತ್ತರವನ್ನು ಜನರು ಕೊಡುತ್ತಾರೆ. 1800 ಕೋಟಿ ರೂಪಾಯಿ ಬಾಕಿ ನೋಟಿಸ್ ನೀಡಿದೆ‌. 10 ವರ್ಷ ಇತ್ತು ನೋಟಿಸ್ ಕೊಡಬಹುದಿತ್ತು. ನೋಟಿಸ್ ಕೊಟ್ಟು ಅಂಜಿಸುವ ಪ್ರಯತ್ನ ಮಾಡುತ್ತಿದ್ದೀರಿ ಎಂದರು.

ಬಸವರಾಜ್ ಬೊಮ್ಮಾಯಿಗೆ ಪೈಲ್ವಾನ್ ದಾವಣಗೆರೆ ಚಾರ್ಲಿ ಎಂದಿದ್ದ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದಾರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದ ಸಚಿವ ಎಚ್ ಕೆ ಪಾಟೀಲ್, ಹಿರಿಯ – ಕಿರಿಯ ಪೈಲ್ವಾನ್ ಹೋಲಿಕೆ ಮಾಡಿದ್ದೆ. ಆದರೆ ಅದನ್ನ ಕೆಲವರು ತಪ್ಪು ಗ್ರಹಿಕೆ ಮಾಡಿಕೊಂಡಿದ್ದಾರೆ. ಬೊಮ್ಮಾಯಿ ಅವರೂ ತಪ್ಪು ಅರ್ಥೈಸಿಕೊಂಡಿದ್ದಾರೆ ಎಂದರು.

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಗೌತಮ್ ಹೆಸರನ್ನು ನಿರ್ಣಯಿಸಿದೆ. 28 ಸ್ಥಾನಕ್ಕೆ ಅಭ್ಯರ್ಥಿಗಳನ್ನು ಫೈನಲ್ ಮಾಡಿದ್ದೇವೆ. ನಾಮಪತ್ರ ಸಲ್ಲಿಸಲು ಇನ್ನೇನು ತಯಾರಿ ಮಾಡಲಾಗುತ್ತದೆ. ಕೋಲಾರದಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದರು.

ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಏಜೆಂಟ್ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸ್ವಾಮಿಗಳ ಬಗ್ಗೆ ಲಘುವಾಗಿ ಮಾತನಾಡಿದನ್ನು ಸಮಾಜ ಸಹಿಸಲ್ಲ. ಅವರ ನಿಲುವಿನ ಬಗ್ಗೆ ಟೀಕೆ ಮಾಡುವುದಿದ್ದರೆ ಮಾಡಿ. ಆದರೆ ಪಕ್ಷದ ಏಜೆಂಟ್ ಎಂದು ಗೂಬೆ ಕೂರಿಸುವುದು ಕೆಳಮಟ್ಟದ ಕೆಲಸ. ಸ್ವಾಮಿಗಳ ನಿಲುವಿನ ಬಗ್ಗೆ ಚರ್ಚೆಯಾಗಲಿ. ಸ್ವಾಮಿಗಳು ಪಕ್ಷದ ಜೊತೆಗೆ ಯಾವುದೇ ಸಂಬಂಧ ಇಟ್ಟುಕೊಂಡಿಲ್ಲ. ಸ್ವಾಮಿಗಳು ನಮ್ಮ ಕಡೆ ಇದ್ದಾರೆ ಎನ್ನುವ ಬಿಜೆಪಿ ಸುಳ್ಳು ಬಹಿರಂಗವಾಗಿದೆ. ಯಾರು ಬಿಜೆಪಿಗೆ ಹೊಂದಿಕೊಳ್ಳುವುದಿಲ್ಲ ಅವರಿಗೆ ಕಟುವಾಗಿ ನಿಂದಿಸುತ್ತಾರೆ ಎಂದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.