ಗದಗ: ನರೇಗಾದಡಿ ಸದ್ದು ಮಾಡಿದ ರೋಣ ತಾಲೂಕು ಪಂಚಾಯ್ತಿ


Team Udayavani, Jun 3, 2023, 5:30 PM IST

ಗದಗ: ನರೇಗಾದಡಿ ಸದ್ದು ಮಾಡಿದ ರೋಣ ತಾಲೂಕು ಪಂಚಾಯ್ತಿ

ಗದಗ: ಮಹಾತ್ಮ ಗಾಂಧಿ  ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(ನರೇಗಾ) ಯೋಜನೆಯ  2023-24ನೇ ಸಾಲಿನಲ್ಲಿ ಎರಡೇ ತಿಂಗಳಲ್ಲಿ ರೋಣ ತಾಲೂಕು ಪಂಚಾಯತಿ ನಿಗದಿತ ಗುರಿ ಸಾಧಿಸಿ ಮಾನವ ದಿನಗಳ ಸೃಜನೆ ಮಾಡುವ ಮೂಲಕ ರಾಜ್ಯದಲ್ಲೇ ಉತ್ತಮ ನರೇಗಾ ಕೆಲಸಗಳನ್ನು ಮಾಡಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

2023-24ರಲ್ಲಿ ವರ್ಷದಲ್ಲಿ ರೋಣ ತಾಲೂಕು  ಪಂಚಾಯತಿ 24 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ 6,43,733 ಮಾನವ ದಿನಗಳನ್ನು ಸೃಜಿಸುವ ಮೂಲಕ 1880.05 ಲಕ್ಷ ರೂ. ಆರ್ಥಿಕ ಪ್ರಗತಿ ಸಾಧನೆ ಮಾಡಿರುವುದು ಕೂಡ ರಾಜ್ಯ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ಪ್ರಶಂಸೆಗೆ ಪಾತ್ರವಾಗಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಚೀಟಿ ಹೊಂದಿರುವ
ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಕೆಲಸ ಪಡೆಯುವ ಹಕ್ಕು ನೀಡುವುದಷ್ಟೇ ಅಲ್ಲದೇ, ಸಾಕಷ್ಟು ರೈತರಿಗೆ ತಮ್ಮದೇ ಜಮೀನಿನಲ್ಲಿ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳನ್ನು ಉತ್ತೇಜಿಸುವ ಕೆಲಸಗಳನ್ನು ಮಾಡಿಕೊಂಡು ಅವರ ಜಮೀನಿನ ಉತ್ಪಾದಕತೆ ಹೆಚ್ಚಿಸಿ, ಕುಟುಂಬದ ಜೀವನೋಪಾಯ ಮಾರ್ಗಗಳನ್ನು ಬಲಪಡಿಸಲು ಸಹ ನರೇಗಾ ಯೋಜನೆ ಸಹಕಾರಿಯಾಗಿದೆ.

ರೋಣ ತಾಲೂಕಿನ 24 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ದನದ ಕೊಟ್ಟಿಗೆ, ಬಚ್ಚಲು  ಗುಂಡಿ, ಕೋಳಿ ಶೆಡ್‌, ಕುರಿ ಶೆಡ್‌, ಕೃಷಿ ಬಾವಿ, ಕೃಷಿ ಹೊಂಡ, ಕಲ್ಯಾಣಿಗಳ ಪುನಃಶ್ಚೇತನ, ಅರಣ್ಯೀಕರಣ ಸೇರಿದಂತೆ ಕಾಮಗಾರಿಗಳನ್ನು ಅನುಷ್ಠಾನಕ್ಕೆ ಕ್ರಿಯಾ ಯೋಜನೆ ಮಾಡಲಾಗಿದೆ.

ಸಮಗ್ರ ಶಾಲಾ ಅಭಿವೃದ್ಧಿಗಾಗಿ ಶಾಲಾ ಕಾಂಪೌಂಡ್‌, ಪೌಷ್ಟಿಕ ಕೈತೋಟ, ದಾಸೋಹ ಭವನ, ಆಟದ ಮೈದಾನ, ಶೌಚಾಲಯವನ್ನು ಈ ಯೋಜನೆಯಡಿ ಮಾಡಿಕೊಂಡಿದ್ದಾರೆ. ಜಲ ಸಂರಕ್ಷಣೆ ಕಾಮಗಾರಿಗಳು ಸೇರಿದಂತೆ ಮಣ್ಣಿನ ಸವಕಳಿ ತಡೆಗಟ್ಟಿ ಅಂತರ್ಜಲ ಮಟ್ಟ ಹೆಚ್ಚಿಸಲು ಚೆಕ್‌ ಡ್ಯಾಂ, ನೀರು ಕಾಲುವೆ, ಇಂಗು ಗುಂಡಿಗಳನ್ನು ಮಾಡಲಾಗುತ್ತಿದೆ. ಸರ್ಕಾರದ ಯೋಜನೆಯಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಮೃತ ಸರೋವರಕ್ಕೆ ಆಯ್ಕೆಯಾದ ಸರೋವರಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ರೋಣ ತಾಲೂಕಿನ ಆರ್ಥಿಕ ವರ್ಷ ಮಾನವ ದಿನ ಸೃಜನೆ
2019-20ನೇ ಸಾಲಿನಲ್ಲಿ 8,85,737
2020-21ನೇ ಸಾಲಿನಲ್ಲಿ 6,11,574
2021-22ನೇ ಸಾಲಿನಲ್ಲಿ 9,29,521
2022-23ನೇ ಸಾಲಿನಲ್ಲಿ 4,98,878
2023-24ನೇ ಸಾಲಿನಲ್ಲಿ ಈವರೆಗೆ 6,43,733 ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ಸಾಧನೆ ಮಾಡಿದೆ.

ನರೇಗಾ ಯೋಜನೆಯ ಅರ್ಹ ಫಲಾನುಭವಿಗಳು
ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಬಡತನ ರೇಖೆ ಕೆಳಮಟ್ಟದಲ್ಲಿ ಇರುವ ಇತರೆ ಕುಟುಂಬಗಳು ಸ್ತ್ರೀ ಪ್ರಧಾನ ಕುಟುಂಬಗಳು
ಭೂ-ಸುಧಾರಣಾ ಫಲಾನುಭವಿಗಳು ಇಂದಿರಾ ಆವಾಸ್‌ ಯೋಜನೆಯ ಫಲಾನುಭವಿಗಳು ಅರಣ್ಯ ಹಕ್ಕು ಕಾಯ್ದೆಯ ಫಲಾನುಭವಿಗಳು ವಿಕಲಚೇತನ ಪ್ರಧಾನ ಕುಟುಂಬಗಳು ಬುಡಕಟ್ಟು ಹಾಗೂ ಅಲೆಮಾರಿ ಜನಗಳು ಸಣ್ಣ ಮತ್ತು ಅತೀ ಸಣ್ಣ ರೈತರು.

ಗ್ರಾಮೀಣ ಭಾಗದ ಕೂಲಿಕಾರರಿಗೆ ನರೇಗಾ ಯೋಜನೆಯಡಿ ಪ್ರತಿದಿನ ಹೆಣ್ಣು ಮತ್ತು ಗಂಡಿಗೆ ಸಮಾನವಾಗಿ 316 ರೂ. ಕೂಲಿ
ನೀಡಲಾಗುತ್ತಿದೆ. 2023-24ರಲ್ಲಿ ಎರಡೇ ತಿಂಗಳಲ್ಲಿ ರೋಣ ತಾಪಂ ನಿಗದಿತ ಗುರಿ ಸಾ ಧಿಸಿದ್ದು ಶ್ಲಾಘನೀಯ. ರೋಣ ನರೇಗಾ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.
ಡಾ| ಸುಶೀಲಾ ಬಿ., ಜಿಪಂ ಸಿಇಒ, ಗದಗ

ಮೊದಲ ದಿನದಿಂದಲೇ ರೋಣ ತಾಲೂಕಿನ ನರೇಗಾ ಸಿಬ್ಬಂದಿ ಆರ್ಥಿಕ ವರ್ಷದಲ್ಲಿ ಉತ್ತಮ ಪ್ರಗತಿ ಸಾಧಿಸುವ ಗುರಿ ಹೊಂದಿದ್ದರು. ಹಾಗಾಗಿ, ಅವರು ಬೇಗ ಗುರಿ ಸಾಧಿಸಿದ್ದಾರೆ.
ಬಸವರಾಜ ಅಡವಿಮಠ,
ಉಪ-ಕಾರ್ಯದರ್ಶಿ, ಜಿಪಂ, ಗದಗ

*ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.