ಗದಗ: ನರೇಗಾದಡಿ ಸದ್ದು ಮಾಡಿದ ರೋಣ ತಾಲೂಕು ಪಂಚಾಯ್ತಿ


Team Udayavani, Jun 3, 2023, 5:30 PM IST

ಗದಗ: ನರೇಗಾದಡಿ ಸದ್ದು ಮಾಡಿದ ರೋಣ ತಾಲೂಕು ಪಂಚಾಯ್ತಿ

ಗದಗ: ಮಹಾತ್ಮ ಗಾಂಧಿ  ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(ನರೇಗಾ) ಯೋಜನೆಯ  2023-24ನೇ ಸಾಲಿನಲ್ಲಿ ಎರಡೇ ತಿಂಗಳಲ್ಲಿ ರೋಣ ತಾಲೂಕು ಪಂಚಾಯತಿ ನಿಗದಿತ ಗುರಿ ಸಾಧಿಸಿ ಮಾನವ ದಿನಗಳ ಸೃಜನೆ ಮಾಡುವ ಮೂಲಕ ರಾಜ್ಯದಲ್ಲೇ ಉತ್ತಮ ನರೇಗಾ ಕೆಲಸಗಳನ್ನು ಮಾಡಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

2023-24ರಲ್ಲಿ ವರ್ಷದಲ್ಲಿ ರೋಣ ತಾಲೂಕು  ಪಂಚಾಯತಿ 24 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ 6,43,733 ಮಾನವ ದಿನಗಳನ್ನು ಸೃಜಿಸುವ ಮೂಲಕ 1880.05 ಲಕ್ಷ ರೂ. ಆರ್ಥಿಕ ಪ್ರಗತಿ ಸಾಧನೆ ಮಾಡಿರುವುದು ಕೂಡ ರಾಜ್ಯ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ಪ್ರಶಂಸೆಗೆ ಪಾತ್ರವಾಗಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಚೀಟಿ ಹೊಂದಿರುವ
ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಕೆಲಸ ಪಡೆಯುವ ಹಕ್ಕು ನೀಡುವುದಷ್ಟೇ ಅಲ್ಲದೇ, ಸಾಕಷ್ಟು ರೈತರಿಗೆ ತಮ್ಮದೇ ಜಮೀನಿನಲ್ಲಿ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳನ್ನು ಉತ್ತೇಜಿಸುವ ಕೆಲಸಗಳನ್ನು ಮಾಡಿಕೊಂಡು ಅವರ ಜಮೀನಿನ ಉತ್ಪಾದಕತೆ ಹೆಚ್ಚಿಸಿ, ಕುಟುಂಬದ ಜೀವನೋಪಾಯ ಮಾರ್ಗಗಳನ್ನು ಬಲಪಡಿಸಲು ಸಹ ನರೇಗಾ ಯೋಜನೆ ಸಹಕಾರಿಯಾಗಿದೆ.

ರೋಣ ತಾಲೂಕಿನ 24 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ದನದ ಕೊಟ್ಟಿಗೆ, ಬಚ್ಚಲು  ಗುಂಡಿ, ಕೋಳಿ ಶೆಡ್‌, ಕುರಿ ಶೆಡ್‌, ಕೃಷಿ ಬಾವಿ, ಕೃಷಿ ಹೊಂಡ, ಕಲ್ಯಾಣಿಗಳ ಪುನಃಶ್ಚೇತನ, ಅರಣ್ಯೀಕರಣ ಸೇರಿದಂತೆ ಕಾಮಗಾರಿಗಳನ್ನು ಅನುಷ್ಠಾನಕ್ಕೆ ಕ್ರಿಯಾ ಯೋಜನೆ ಮಾಡಲಾಗಿದೆ.

ಸಮಗ್ರ ಶಾಲಾ ಅಭಿವೃದ್ಧಿಗಾಗಿ ಶಾಲಾ ಕಾಂಪೌಂಡ್‌, ಪೌಷ್ಟಿಕ ಕೈತೋಟ, ದಾಸೋಹ ಭವನ, ಆಟದ ಮೈದಾನ, ಶೌಚಾಲಯವನ್ನು ಈ ಯೋಜನೆಯಡಿ ಮಾಡಿಕೊಂಡಿದ್ದಾರೆ. ಜಲ ಸಂರಕ್ಷಣೆ ಕಾಮಗಾರಿಗಳು ಸೇರಿದಂತೆ ಮಣ್ಣಿನ ಸವಕಳಿ ತಡೆಗಟ್ಟಿ ಅಂತರ್ಜಲ ಮಟ್ಟ ಹೆಚ್ಚಿಸಲು ಚೆಕ್‌ ಡ್ಯಾಂ, ನೀರು ಕಾಲುವೆ, ಇಂಗು ಗುಂಡಿಗಳನ್ನು ಮಾಡಲಾಗುತ್ತಿದೆ. ಸರ್ಕಾರದ ಯೋಜನೆಯಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಮೃತ ಸರೋವರಕ್ಕೆ ಆಯ್ಕೆಯಾದ ಸರೋವರಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ರೋಣ ತಾಲೂಕಿನ ಆರ್ಥಿಕ ವರ್ಷ ಮಾನವ ದಿನ ಸೃಜನೆ
2019-20ನೇ ಸಾಲಿನಲ್ಲಿ 8,85,737
2020-21ನೇ ಸಾಲಿನಲ್ಲಿ 6,11,574
2021-22ನೇ ಸಾಲಿನಲ್ಲಿ 9,29,521
2022-23ನೇ ಸಾಲಿನಲ್ಲಿ 4,98,878
2023-24ನೇ ಸಾಲಿನಲ್ಲಿ ಈವರೆಗೆ 6,43,733 ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ಸಾಧನೆ ಮಾಡಿದೆ.

ನರೇಗಾ ಯೋಜನೆಯ ಅರ್ಹ ಫಲಾನುಭವಿಗಳು
ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಬಡತನ ರೇಖೆ ಕೆಳಮಟ್ಟದಲ್ಲಿ ಇರುವ ಇತರೆ ಕುಟುಂಬಗಳು ಸ್ತ್ರೀ ಪ್ರಧಾನ ಕುಟುಂಬಗಳು
ಭೂ-ಸುಧಾರಣಾ ಫಲಾನುಭವಿಗಳು ಇಂದಿರಾ ಆವಾಸ್‌ ಯೋಜನೆಯ ಫಲಾನುಭವಿಗಳು ಅರಣ್ಯ ಹಕ್ಕು ಕಾಯ್ದೆಯ ಫಲಾನುಭವಿಗಳು ವಿಕಲಚೇತನ ಪ್ರಧಾನ ಕುಟುಂಬಗಳು ಬುಡಕಟ್ಟು ಹಾಗೂ ಅಲೆಮಾರಿ ಜನಗಳು ಸಣ್ಣ ಮತ್ತು ಅತೀ ಸಣ್ಣ ರೈತರು.

ಗ್ರಾಮೀಣ ಭಾಗದ ಕೂಲಿಕಾರರಿಗೆ ನರೇಗಾ ಯೋಜನೆಯಡಿ ಪ್ರತಿದಿನ ಹೆಣ್ಣು ಮತ್ತು ಗಂಡಿಗೆ ಸಮಾನವಾಗಿ 316 ರೂ. ಕೂಲಿ
ನೀಡಲಾಗುತ್ತಿದೆ. 2023-24ರಲ್ಲಿ ಎರಡೇ ತಿಂಗಳಲ್ಲಿ ರೋಣ ತಾಪಂ ನಿಗದಿತ ಗುರಿ ಸಾ ಧಿಸಿದ್ದು ಶ್ಲಾಘನೀಯ. ರೋಣ ನರೇಗಾ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.
ಡಾ| ಸುಶೀಲಾ ಬಿ., ಜಿಪಂ ಸಿಇಒ, ಗದಗ

ಮೊದಲ ದಿನದಿಂದಲೇ ರೋಣ ತಾಲೂಕಿನ ನರೇಗಾ ಸಿಬ್ಬಂದಿ ಆರ್ಥಿಕ ವರ್ಷದಲ್ಲಿ ಉತ್ತಮ ಪ್ರಗತಿ ಸಾಧಿಸುವ ಗುರಿ ಹೊಂದಿದ್ದರು. ಹಾಗಾಗಿ, ಅವರು ಬೇಗ ಗುರಿ ಸಾಧಿಸಿದ್ದಾರೆ.
ಬಸವರಾಜ ಅಡವಿಮಠ,
ಉಪ-ಕಾರ್ಯದರ್ಶಿ, ಜಿಪಂ, ಗದಗ

*ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

1-sasadas

Karwar; ರಾ.ಹೆ.66 ರ ಟನಲ್ ನಲ್ಲಿ ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ದಿನವಿಡೀ ಪ್ರತಿಭಟನೆ

1-asdasdas

Belagavi;ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ: ಪೂರಕ ವಾತಾವರಣ

upendra

Cauvery ಮತ್ತು ನಂಬಿಕೆ… ಜನಪ್ರತಿನಿಧಿಗಳ ಮೇಲೆ ನಮಗೇ ನಂಬಿಕೆ ಇಲ್ಲವೇ?

1-sadasd

World Cup; ಲೆಗ್ ಸ್ಪಿನ್ನರ್ ಚಾಹಲ್ ರನ್ನು ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಬಸ್-ಕಾರು ನಡುವೆ ಅಪಘಾತ: ಇಬ್ಬರು ಸಾವು

Gadag; ಬಸ್-ಕಾರು ನಡುವೆ ಅಪಘಾತ: ಇಬ್ಬರು ಸಾವು

Gadag: ಡಾ| ಪಂ| ಪುಟರಾಜ ಕವಿ ಗವಾಯಿ 13ನೇ ಪುಣ್ಯ ಸ್ಮರಣೋತ್ಮವ

Gadag: ಡಾ| ಪಂ| ಪುಟರಾಜ ಕವಿ ಗವಾಯಿ 13ನೇ ಪುಣ್ಯ ಸ್ಮರಣೋತ್ಮವ

Gadag; ಪಂಡಿತ ಪುಟ್ಟರಾಜ ಗವಾಯಿಗಳ 13ನೇ ಪುಣ್ಯಸ್ಮರಣೋತ್ಸವ

Gadag; ಪಂಡಿತ ಪುಟ್ಟರಾಜ ಗವಾಯಿಗಳ 13ನೇ ಪುಣ್ಯಸ್ಮರಣೋತ್ಸವ

Gadaga:ಕ್ರೀಡೆಯಲ್ಲಿ ಸೋಲೇ ಗೆಲುವಿನ ಮೆಟ್ಟಿಲು: ಉಷಾ

Gadaga:ಕ್ರೀಡೆಯಲ್ಲಿ ಸೋಲೇ ಗೆಲುವಿನ ಮೆಟ್ಟಿಲು: ಉಷಾ

Gadaga: ಮಾನವನ ಬಾಳಿಗೆ ಬೆಳಕು ನೀಡುತ್ತೆ ಶಿಕ್ಷಣ

Gadaga: ಮಾನವನ ಬಾಳಿಗೆ ಬೆಳಕು ನೀಡುತ್ತೆ ಶಿಕ್ಷಣ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

1-sasadas

Karwar; ರಾ.ಹೆ.66 ರ ಟನಲ್ ನಲ್ಲಿ ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ದಿನವಿಡೀ ಪ್ರತಿಭಟನೆ

1-asdasdas

Belagavi;ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ: ಪೂರಕ ವಾತಾವರಣ

upendra

Cauvery ಮತ್ತು ನಂಬಿಕೆ… ಜನಪ್ರತಿನಿಧಿಗಳ ಮೇಲೆ ನಮಗೇ ನಂಬಿಕೆ ಇಲ್ಲವೇ?

Katapadi: ಕೊರಗಜ್ಜನಿಗೆ ಲಾರಿ, ಟೆಂಪೋ ಮಾಲಕರ ಮೊರೆ

Katapadi: ಕೊರಗಜ್ಜನಿಗೆ ಲಾರಿ, ಟೆಂಪೋ ಮಾಲಕರ ಮೊರೆ

1-sadasd

World Cup; ಲೆಗ್ ಸ್ಪಿನ್ನರ್ ಚಾಹಲ್ ರನ್ನು ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.