Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು


Team Udayavani, Apr 13, 2024, 12:49 PM IST

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

ಗದಗ: ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ‌. ಶ್ರೀರಾಮುಲು ಅವರು ನಗರದ ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಉಭಯ ಗುರುಗಳಾದ ಪಂಡಿತ ಪಂಚಾಕ್ಷರ ಗವಾಯಿಗಳು, ಪಂಡಿತ ಪುಟ್ಟರಾಜ ಗವಾಯಿಗಳ ಗದ್ದುಗೆಗೆ ದರ್ಶನಾಶೀರ್ವಾದ ಪಡೆದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ನಾಮಪತ್ರ ಸಲ್ಲಿಸಿ ಇಂದು ಪಂಡಿತ್ ಪುಟ್ಟರಾಜ ಗವಾಯಿಗಳು ಹಾಗೂ ಪಂಚಾಕ್ಷರಿ ಗವಾಯಿಗಳ ಗದ್ದುಗೆ ಆಶಿರ್ವಾದ ಪಡೆದಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ 28 ಸ್ಥಾನ ಗೆಲ್ಲುವ ಗುರಿ ನಮ್ಮದಾಗಿದೆ ಎಂದರು.

ರಾಜ್ಯ ಕಾಂಗ್ರೆಸ್ ಬಗ್ಗೆ ಜನ ಬಹಳಷ್ಟು ಬೇಸತ್ತಿದ್ದಾರೆ. ಜನರಲ್ಲಿರುವ ವಿಶ್ವಾಸವನ್ನು ಕಾಂಗ್ರೆಸ್ ಕಳೆದುಕೊಂಡಿದೆ. ನುಡಿದಂತೆ ನಡೆದುಕೊಳ್ಳುತ್ತಿಲ್ಲ. ಇನ್ನು ಮುಂದೆ ಏನೇ ಗ್ಯಾರಂಟಿ ಕೊಟ್ಟರೂ ಜನ ಒಪ್ಪಲ್ಲ. ಮೋದಿಯೇ ಪಕ್ಕಾ ಗ್ಯಾರಂಟಿ. ಮೋದಿಜಿ ಹಾಗೂ ಬಿ.ಎಸ್.ವೈ ಆಶಿರ್ವಾದದಿಂದ ಎಲ್ಲಾ ಕಡೆ ಬಿಜೆಪಿ ಗೆಲ್ಲುತ್ತೇವೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಒಬ್ಬ ವಿಶ್ವ ನಾಯಕ. ಮೋದಿ ಎಲ್ಲೇ ಹೋಗಲಿ ಅವರ ಹಿಂದೆ‌ ಜನ ಸಾಗರವೇ ಹರಿದು ಬರುತ್ತದೆ. ಸಿಎಂ ಸಿದ್ದರಾಮಯ್ಯ ಏನೇ ರಣತಂತ್ರ ರೂಪಿಸಿದರೂ ನಡೆಯುವುದಿಲ್ಲ ಎಂದರು.

ಕಾಂಗ್ರೆಸ್ ಒಕ್ಕೂಟ ಒಡೆದು ಹೋಗಿದೆ. ಕಾಂಗ್ರೆಸ್ ಎಲ್ಲಾ ಕಡೆ ಹರಿದು ಚಿಂದಿಯಾಗಿದೆ. ಕರ್ನಾಟಕದ ಜನರು ಮೋದಿ ಗೆಲ್ಲಿಸುವ ಮೈಂಡ್ ಸೆಟ್ ನಲ್ಲಿದ್ದಾರೆ. ಮೋದಿ ಎಂದರೆ ವಿಶ್ವಾಸ, ದೇಶದ ಸುಭದ್ರತೆ, ಶಕ್ತಿ. ಮೋದಿ ಹೇಳದೆ ಗ್ಯಾರಂಟಿಗಳನ್ನು ಕೊಡುತ್ತಾರೆ. ಕಾಂಗ್ರೆಸ್ ನವರು ಹೇಳಿಯೂ ಗ್ಯಾರಂಟಿ ಕೊಡುತ್ತಿಲ್ಲ ಎಂದು ಬಿ.ಶ್ರೀರಾಮುಲು ಹೇಳಿದರು.

ದಿಂಗಾಲೇಶ್ವರ ಶ್ರೀಗಳು ಧಾರವಾಡದಿಂದ ಲೋಕಸಭಾ ಚುನಾವಣೆ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶ್ರೀರಾಮುಲು ದಿಂಗಾಲೇಶ್ವರ ಶ್ರೀಗಳು ನಮಗೆ ಗುರುಗಳು. ನಮಗೆಲ್ಲಾ ಮಾರ್ಗದರ್ಶನ, ಸಂಸ್ಕಾರ ಕೊಟ್ಟಿದಾರೆ. ಶ್ರೀಗಳ ಬಗ್ಗೆ ನಮಗೆ ಗೌರವವಿದೆ. ಧರ್ಮಕ್ಕಾಗಿ ನಿಲ್ಲುವ ವ್ಯಕ್ತಿ ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆ ಸ್ಪರ್ಧಿಸಬೇಕೆ – ಬೇಡವೇ ಎಂಬ ವಿಚಾರವನ್ನು ಹಿರಿಯರು, ಶ್ರೀಗಳ ಜೊತೆ ಚರ್ಚೆ ಮಾಡಬೇಕು ಎಂದು ಹೇಳಿದರು.

ಶ್ರೀಗಳಿಗೆ ಸ್ಪರ್ಧೆ ಮಾಡಬೇಡಿ ಎಂದು ಹೇಳುವಷ್ಟು ದೊಡ್ಡವ ನಾನಲ್ಲ. ಅವರು ಸ್ಪರ್ಧೆಯ ವಿಚಾರಕ್ಕೆ ಸಮುದಾಯ, ಹಿರಿಯರು, ಅನೇಕ ಶ್ರೀಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ. ಈ ಬಗ್ಗೆ ಬಿ.ಎಸ್.ವೈ, ಪ್ರಹ್ಲಾದ್ ಜೋಷಿ, ಅನೇಕರು ಮಾತುಕತೆ ನಡೆಸಿದ್ದಾರೆ. ಗದಗ ಸೌಹಾರ್ದತೆ ಜಿಲ್ಲೆಯು ಜಾತಿ, ಧರ್ಮ, ಮತ, ಪಂಥ ಒಂದುಗೂಡಿಸಿದ ಫಕೀರೇಶ್ವರ ಮಠ. ಅಂತಹ ಮಠದ ದಿಂಗಾಲೇಶ್ವರ ಶ್ರೀಗಳು ಧರ್ಮಕ್ಕಾಗಿ ಜಯವಾಗಲಿ ಎನ್ನುತ್ತಾರೆ. ಎಲ್ಲರನ್ನೂ ಒಂದು ಗೂಡಿಸಿಕೊಂಡು ಹೋಗ್ತಾರೆ ಎಂಬ ವಿಶ್ವಾಸವಿದ್ದು, ಚುನಾವಣೆಯಿಂದ ಹಿಂದೆ ಸರಿಯಬಹುದು ಎಂಬ ಆತ್ಮವಿಶ್ವಾಸವಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag

ಕಳಸಾ-ಬಂಡೂರಿ: ಮಹದಾಯಿ ಜಾರಿಗೆ ಕರವೇ ಪಾದಯಾತ್ರೆ ಆರಂಭ

cyber crime

Cybercrime; ಚಾಲ್ತಿ ಖಾತೆ ತೆರೆದು ಕೋಟ್ಯಂತರ ರೂ.ವರ್ಗಾವಣೆ: ಇಬ್ಬರ ಬಂಧನ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

7-mundaragi

ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.