ಗದಗ: ಮಾರುಕಟ್ಟೆಗೆ ಲಗ್ಗೆಯಿಟ್ಟ ಹಣ್ಣುಗಳ ರಾಜ- ದರದಲ್ಲಿ ವ್ಯತ್ಯಾಸ


Team Udayavani, Mar 26, 2024, 5:43 PM IST

ಗದಗ: ಮಾರುಕಟ್ಟೆಗೆ ಲಗ್ಗೆಯಿಟ್ಟ ಹಣ್ಣುಗಳ ರಾಜ- ದರದಲ್ಲಿ ವ್ಯತ್ಯಾಸ

ಉದಯವಾಣಿ ಸಮಾಚಾರ
ಗದಗ: ಜಿಲ್ಲೆಯಲ್ಲಿ ಎಲ್ಲೆಡೆ ಮಾವಿನ ಸುಗ್ಗಿ ಆರಂಭವಾಗಿದೆ. ಆಫೂಸ್‌, ಸಿಂಧೂರ ತಳಿಗಳ ಮಾವಿನ ಹಣ್ಣುಗಳ ಜತೆಗೆ ವಿವಿಧ ಮಾವಿನ ಹಣ್ಣು ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. ಭರಪೂರ ಮಾರಾಟವಾಗುತ್ತಿದೆ.

ಜನರ ಬಾಯಿ ಸಿಹಿ ಮಾಡಲು ಮದರಪಲ್ಲಿ, ಅಂಕೋಲಾ ಕಲ್ಮಿ, ಕಲ್ಮಿ, ಆಫೂಸ್‌, ಸಿಂಧೂರ ಹಣ್ಣುಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಇನ್ನು ವಿವಿಧ ತಳಿಯ ಹಣ್ಣುಗಳು ಆಗಮಿಸುತ್ತಿವೆ. ಜಿಲ್ಲೆಯ ಗದಗ, ರೋಣ, ಮುಂಡರಗಿ ತಾಲೂಕುಗಳ ಕೆಲ ಕಡೆಗಳಲ್ಲಿ ರತ್ನಗಿರಿ, ಆಫೂಸ್‌, ಮಲ್ಲಿಕಾ, ಅಲ್ಫಾನ್ಸೋ ಮಾವು ಹೆಚ್ಚಿನ ಕ್ಷೇತ್ರದಲ್ಲಿ ಬೆಳೆಯುತ್ತಿದ್ದಾರೆ. ತೋತಾಪುರಿ(ಗೋವಾ), ನೀಲಂ ತಳಿ ಮಾವುಗಳನ್ನು ಕೂಡ ಕೆಲ ರೈತರು ಬೆಳೆದಿದ್ದಾರೆ. ಉತ್ತಮ ಬೆಲೆಗೆ ಮಾರಾಟ ಮಾಡುತ್ತಿದ್ದು, ಹೆಚ್ಚಿನ ಆದಾಯ ನಿರೀಕ್ಷಿಸಲಾಗಿದೆ. ಕಳೆದ ಬಾರಿಗಿಂತ ಈ ಬಾರಿ ಮಾವಿನ ಇಳುವರಿ ಕುಂಠಿತಗೊಂಡಿದ್ದರಿಂದ ದರದಲ್ಲಿ ವ್ಯತ್ಯಾಸವಾಗಿದೆ.

ಮಾವು ಉತ್ಪಾದನೆಯಲ್ಲಿ ಕುಂಠಿತ: ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 1,025 ಹೆಕ್ಟೇರ್‌ ಪ್ರದೇಶದಲ್ಲಿ 3,007 ಟನ್‌, 2021-22ನೇ ಸಾಲಿನಲ್ಲಿ 1,116.80 ಹೆಕ್ಟೇರ್‌ನಲ್ಲಿ 9,726.72 ಟನ್‌, 2022-23ನೇ ಸಾಲಿನಲ್ಲಿ 1,139 ಹೆಕ್ಟೇರ್‌ ಪ್ರದೇಶದಲ್ಲಿ 4,500 ಟನ್‌ ಉತ್ಪಾದನೆಯಾಗಿತ್ತು. ಪ್ರಸಕ್ತ ಸಾಲಿನಲ್ಲಿ ಮಾವು ಇಳುವರಿಯಲ್ಲಿ ಕುಂಠಿತವಾಗಿದ್ದು, 3,000 ಟನ್‌ ನಿರೀಕ್ಷಿಸಲಾಗಿದೆ.

ಹಣ್ಣುಗಳ ದರ: ಆಂಧ್ರ ಮದರಪಲ್ಲಿ ಕೆಜಿಗೆ 250-300 ರೂ., ಅಂಕೋಲಾ ಕಲ್ಮಿ ಕೆಜಿಗೆ 300-400 ರೂ., ಕಲ್ಮಿ ಕೆಜಿಗೆ 350ರಿಂದ 400 ರೂ., ಆಫೂಸ್‌ ಕೆಜಿಗೆ 300ರಿಂದ 1,110 ರೂ. ಮಾರಾಟವಾಗುತ್ತಿದೆ.

ಹೂವಿನಂಚಿನಲ್ಲೇ ಉದುರಿದ ಮಾವು: ಮಾವು ಹೂವು ಬಿಡುವ ಅವಧಿಯಲ್ಲಿ ಉತ್ತಮ ವಾತಾವರಣವಿದ್ದ ಕಾರಣ ಹೆಚ್ಚಿನ ಪ್ರಮಾಣದಲ್ಲಿ ಹೂವು ಬಿಟ್ಟಿತ್ತು. ಅದೇ ಸಮಯಕ್ಕೆ ಬೂದು ರೋಗ, ಚಿಕ್ಕೆ ರೋಗ, ರಸ ಹೀರುವ ಕೀಟಗಳ ಬಾಯಿಯಿಂದ ಹೂವು, ಮಿಡಿಕಾಯಿ ಹಂತದಲ್ಲೇ ಸಾಕಷ್ಟು ಪ್ರಮಾಣದಲ್ಲಿ ಉದುರಿದ್ದರಿಂದ ಮಾವಿನ ಇಳುವರಿಯಲ್ಲಿ ಕುಂಠಿತಗೊಂಡು ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನುತ್ತಾರೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು

ಬೇಸಿಗೆಯಲ್ಲಿ ಮಾವಿನ ಹಣ್ಣಿಗೆ ಬೇಡಿಕೆ ಇರುವುದು ಸಹಜ. ಈ ಬಾರಿ ಮಾವಿನ ಹಣ್ಣಿನ ಬೆಲೆ ಹೆಚ್ಚಳವಾಗಿದೆ. ಆದರೂ ಮಾವಿನ ಹಣ್ಣು ತಿನ್ನಬೇಕೆಂಬ ಆಸೆಯಿಂದ ಚೌಕಾಸಿ ಮಾಡಿ ಹಣ್ಣು ಖರೀದಿಸಿದ್ದೇವೆ.
*ಸಚಿನ್‌ ಹೊಸಮನಿ, ಗ್ರಾಹಕ.

ಪ್ರಸಕ್ತ ಸಾಲಿನಲ್ಲಿ ಮಾವು ಇಳುವರಿ ಕುಂಠಿತಗೊಂಡಿದ್ದು, ಕೆಲವೇ ಕೆಲವು ತಳಿಗಳು ಆಗಮಿಸಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಿಲ್ಲೆಯಲ್ಲಿ ಬೆಳೆದ ಮಾವಿನ ಹಣ್ಣುಗಳ ಗಾತ್ರ ಸ್ವಲ್ಪ ಚಿಕ್ಕದಾಗಿವೆ. ಆದರೂ ಮಾವಿನ ಹಣ್ಣಿಗೆ ಬೇಡಿಕೆ ಇದ್ದು, ಬೆಲೆ ಏರಿಕೆಯಿದ್ದರೂ ಉತ್ತಮ ವ್ಯಾಪಾರವಾಗುತ್ತಿದೆ.
*ಮೆಹಬೂಬ್‌ ಕಾತರಕಿ,
ಮಾವಿನ ಹಣ್ಣಿನ ವ್ಯಾಪಾರಿ.

ಆರಂಭದಲ್ಲಿ ಬಂಪರ್‌ ಇಳುವರಿ ನಿರೀಕ್ಷೆ ಮಾಡಲಾಗಿತ್ತು. ಆದರೆ ಮಳೆ ಅಭಾವ, ವಾತಾವರಣದಲ್ಲಿ ತೇವಾಂಶ ಕೊರತೆ ಹಾಗೂ ರಸ ಹೀರುವ ಕೀಟಗಳ ಪ್ರಮಾಣ ಹೆಚ್ಚಿದ್ದರಿಂದ ಇಳುವರಿ ಕುಂಠಿತಗೊಂಡಿದೆ. ಮಾವಿನ ಗಿಡಗಳು ಕಾಳು ಕಟ್ಟಿದ ಸಂದರ್ಭ ಮಳೆಯಾಗಿದ್ದರೆ ನಾವು ಅಂದುಕೊಂಡ ಇಳುವರಿ ನಿರೀಕ್ಷಿಸಬಹುದಿತ್ತು. ಆದರೆ ಹೂವು, ಮಿಡಿಕಾಯಿ ಹಂತದಲ್ಲಿ ಉದುರುತ್ತಿರುವುದರಿಂದ ರೈತರ ನಿರೀಕ್ಷೆ ಹುಸಿಯಾಗಿದೆ.
*ಶಶಿಕಾಂತ ಕೋಟಿಮನಿ,
ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ.

*ಅರುಣಕುಮಾರ ಹಿರೇಮಮಠ

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.