Gadag; ದನಗಳ ಮೈ ತೊಳೆಯಲು ಹೋದ ಇಬ್ಬರು ಬಾಲಕರು ನೀರು ಪಾಲು
Team Udayavani, Aug 15, 2023, 6:31 PM IST
ಗದಗ: ದನಗಳ ಮೈ ತೊಳೆಯಲು ತೆರಳಿದ್ದ ಇಬ್ಬರು ಬಾಲಕರು ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದು, ಮತ್ತಿಬ್ಬರನ್ನು ರಕ್ಷಣೆ ಮಾಡಿರುವ ಘಟನೆ ನಗರದ ಹೊರವಲಯದ ರೆಹಮತ್ ನಗರದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ರೆಹಮತ್ ನಗರದ ನಿವಾಸಿಗಳಾದ ಮಹಮ್ಮದ್ ಅಮನ್ ಹುಬ್ಬಳ್ಳಿ (12), ಸಂತೋಷ ಕುಂಬಾರ್ (14) ಮೃತಪಟ್ಟಿದ್ದಾರೆ. ಮಹಮ್ಮದ್ ಆದಿಲ್ ಹುಬ್ಬಳ್ಳಿ (14), ಮಹಿಳೆ ಶಾಹೀನ್ ಹುಬ್ಬಳ್ಳಿ (30) ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಗರದ ರಹಮತ್ ನಗರದ ಬಳಿಯ ರೈಲ್ವೆ ಹಳಿಯ ಪಕ್ಕದಲ್ಲಿ ಇರುವ ಹೊಂಡದಲ್ಲಿ ಮಹಿಳೆ ಹಾಗೂ ಮೂವರು ಬಾಲಕರು ನೀರಿನ ಹೊಂಡದ ಬಳಿ ಹೋದಾಗ ಇಬ್ಬರು ಬಾಲಕರು ಕಾಲು ಜಾರಿ ನೀರಲ್ಲಿ ಬಿದ್ದಿದ್ದಾರೆ. ರಕ್ಷಣೆಗೆ ಹೋಗಿದ್ದ ಮಹಿಳೆ ಹಾಗೂ ಮತ್ತೊಬ್ಬ ಬಾಲಕನೂ ನೀರಲ್ಲಿ ಮುಳುಗಿದ್ದಾರೆ.
ಇದನ್ನೂ ಓದಿ:Kumta; ಧ್ವಜಾರೋಹಣಕ್ಕೆಂದು ಹೋಗುತ್ತಿದ್ದ ಶಿಕ್ಷಕ ರಸ್ತೆ ಅಪಘಾತದಲ್ಲಿ ನಿಧನ
ನೀರಲ್ಲಿ ಮುಳುಗುತ್ತಿದ್ದವರ ಚೀರಾಟ- ಕೂಗಾಟ ಕೇಳಿದ ರಾಜ್ಸಿಂಗ್ ಎಂಬ ವ್ಯಕ್ತಿ ಮಹಿಳೆ ಹಾಗೂ ಓರ್ವ ಬಾಲಕನನ್ನು ರಕ್ಷಣೆ ಮಾಡಿದ್ದಾನೆ. ಆದರೆ, ಉಳಿದ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿದು ಶಹರ ಪೊಲೀಸ್ ಠಾಣೆಯ ಸಿಪಿಐ ಡಿ.ಬಿ. ಪಾಟೀಲ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ನೀರುಪಾಲಾದ ಇಬ್ಬರ ಬಾಲಕರ ಶೋಧ ಕಾರ್ಯ ನಡೆಸಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಎಸ್ಪಿ ಬಿ.ಎಸ್. ನೇಮಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ