ಮೀಸಲಾತಿಯಿಂದ ಕೆಲವರಿಗೆ ಬರಸಿಡಿಲು

ಜಿಲ್ಲೆಯ 24 ಜಿಪಂ ಕ್ಷೇತ್ರಗಳ ಪೈಕಿ ಬಹುತೇಕ ಕಡೆ ಮೀಸಲಾತಿ ಬದಲು­ಪುನರಾಯ್ಕೆ ಆಸೆಗೆ ಎಳ್ಳು ನೀರು

Team Udayavani, Jul 4, 2021, 9:07 PM IST

969446565555656

ವೀರೇಂದ್ರ ನಾಗಲದಿನ್ನಿ

ಗದಗ: ಮುಂಬರುವ ಜಿಪಂ ಚುನಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಜಿಪಂ ಕ್ಷೇತ್ರಗಳ ಮೀಸಲಾತಿಯಿಂದ ಜಿಪಂ ಮಾಜಿ ಸದಸ್ಯರು, ಅಧ್ಯಕ್ಷ, ಉಪಾಧ್ಯಕ್ಷರಿಗೆ ಬರಸಿಡಿಲು ಬಡಿದಂತಾಗಿದೆ.

ಜಿಲ್ಲೆಯ 24 ಕ್ಷೇತ್ರಗಳ ಪೈಕಿ ಬಹುತೇಕ ಕ್ಷೇತ್ರಗಳ ಮೀಸಲಾತಿ ಬದಲಾವಣೆಯಾಗಿದ್ದು, ಬಹುತೇಕರು ಜಿಪಂಗೆ ಪುನರಾಯ್ಕೆ ಆಸೆಯನ್ನೇ ಕೈಬಿಡುವಂತಾಗಿದ್ದರೆ, ಇನ್ನಿತರರು ಕ್ಷೇತ್ರ ಹುಡುಕಾಡುವಂತಾಗಿದೆ. ಮೀಸಲಾತಿ ಸಂಕಟ: ಶತಾಯಗತಾಯ ಈ ಬಾರಿ ಜಿಪಂ ಪ್ರವೇಶಿಸಬೇ ಕೆಂದು ಕನಸು ಕಂಡವರಿಗೆ ಮೀಸಲಾತಿ ಸಂಕಟ ಎದುರಾಗಿದೆ.

ಗದಗ ಜಿಪಂ ವ್ಯಾಪ್ತಿಯ ಒಟ್ಟು 24 ಕ್ಷೇತ್ರಗಳಲ್ಲಿ 13 ಕ್ಷೇತ್ರಗಳು ಮಹಿಳೆಯರಿಗೆ ಮೀಸಲಾಗಿವೆ. ಜತೆಗೆ ಸಾಮಾನ್ಯ 12 ಸ್ಥಾನಗಳಲ್ಲಿ 6 ಕ್ಷೇತ್ರಗಳು ಮಹಿಳೆಯರ ಪಾಲಾಗಿವೆ. ಅನುಸೂಚಿತ ಜಾತಿಗೆ ಒಟ್ಟು 4 ಕ್ಷೇತ್ರಗಳು ಲಭ್ಯವಾಗಿದ್ದು, ಅದರಲ್ಲಿ 3 ಕ್ಷೇತ್ರಗಳು ಮಹಿಳೆಯರಿಗೆ ಮೀಸಲಾಗಿವೆ. ಅನುಸೂಚಿತ ಪಂಗಡದ 2 ಕ್ಷೇತ್ರಗಳಲ್ಲಿ 1ಮಹಿಳಾ ಮೀಸಲಾಗಿದೆ. ಹಿಂದುಳಿದ ವರ್ಗ “ಅ’ ಸಮುದಾಯದವರಿಗೆ 5 ಕ್ಷೇತ್ರಗಳಲ್ಲಿ 2 ಮಹಿಳೆಯರಿಗೆ ಲಭಿಸಿವೆ. ಹಿಂದುಳಿದ ವರ್ಗ “ಬ’ ಕ್ಕೆ ಸಿಕ್ಕಿರುವ ಒಂದೇ ಒಂದು ಕ್ಷೇತ್ರ ಮಹಿಳೆಗೆ ಮೀಸಲಾಗಿದೆ.

ಕ್ಷೇತ್ರ ಹುಡುಕುವ ಅನಿವಾರ್ಯತೆ: 2016-2021ರ ಜಿಪಂ ಅಧಿ ಕಾರ ಅವ ಧಿಯಲ್ಲಿ ಬಹುಮತ ಪಡೆದಿದ್ದ ಕಾಂಗ್ರೆಸ್‌ ಪಕ್ಷದಿಂದ ಐವರು ಜಿಪಂ ಅಧ್ಯಕ್ಷ-ಉಪಾಧ್ಯಕ್ಷರಾಗಿದ್ದರು. ವಾಸಣ್ಣ ಕುರಡಗಿ, ಎಸ್‌.ಪಿ.ಬಳಿಗಾರ, ಸಿದ್ದು ಪಾಟೀಲ, ರಾಜೂಗೌಡ ಕೆಂಚನಗೌಡ್ರ, ಈರಪ್ಪ ಈಶ್ವರಪ್ಪ ನಾಡಗೌಡ್ರ ಅವರು ಅಧ್ಯಕ್ಷರಾಗಿದ್ದರು. ಇದೇ ಅವಧಿ ಯಲ್ಲಿ ಕ್ರಮವಾಗಿ ರೂಪಾ ಅಂಗಡಿ, ಶಕುಂತಲಾ ರವೀಂದ್ರ ಮೂಲಿಮನಿ, ಮಲ್ಲವ್ವ ಬಿಚ್ಚಾರ, ಮಂಜಳಾ ಹುಲ್ಲಣ್ಣವರ ಅವರು ಉಪಾಧ್ಯಕ್ಷರಾಗಿದ್ದರು. ಅದರೊಂದಿಗೆ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರು, ವಿಪಕ್ಷ ಸ್ಥಾನದಲ್ಲಿ ಗುರುತಿಸಿಕೊಂಡಿದ್ದವರಿಗೂ ಕ್ಷೇತ್ರ ಕೈತಪ್ಪಿದಂತಾಗಿದೆ. ಹೀಗಾಗಿ ಕೆಲವರು ತಮಗೆ ಅನುಕೂಲಕರವಾದ ಕ್ಷೇತ್ರಗಳತ್ತ ಪಲಾಯನ ಬಯಸಿದ್ದಾರೆ. ಇನ್ನು ಕೆಲವರು ಮಹಿಳಾ ಮೀಸಲಾತಿಯ ತಮ್ಮ ಕ್ಷೇತ್ರಗಳಿಗೆ ಕುಟುಂಬದ ಮಹಿಳಾ ಸದಸ್ಯರನ್ನು ಚುನಾವಣಾ ಅಖಾಡಕ್ಕಿಳಿಸಲು ಚಿಂತನೆ ಆರಂಭಿಸಿದ್ದಾರೆ. ಈ ಬಗ್ಗೆ ಕುಟುಂಬಸ್ಥರೊಂದಿಗೆ ಚರ್ಚೆಗಳು ಬಿರುಸಾಗಿ ಸಾಗಿವೆ ಎಂದೇ ಹೇಳಲಾಗಿದೆ.

ಮೀಸಲು ತಂದ ಅದೃಷ್ಟ: ಈ ಬಾರಿ ಜಿಪಂ ಚುನಾವಣೆಗೆ ಉದ್ದೇಶಿತ ಕರಡು ಮೀಸಲಾತಿ ಕೆಲವರ ಪಾಲಿಗೆ ಅದೃಷ್ಟ ಮತ್ತೂಮ್ಮೆ ಮನೆ ಬಾಗಿಲಿಗೆ ಬಂದಂತಾಗಿದೆ. ಕಳೆದ ಬಾರಿ ಹಿಂದುಳಿದ “ಬ’ ವರ್ಗಕ್ಕೆ ಮೀಸಲಾಗಿದ್ದ ಶಿಗ್ಲಿ ಜಿಪಂ ಕ್ಷೇತ್ರ ಈ ಬಾರಿ “ಸಾಮಾನ್ಯ’ವಾಗಿದೆ. ಹೆಬ್ಟಾಳ ಸಾಮಾನ್ಯ ಕ್ಷೇತ್ರ ಈಗ ಇಟಗಿ(ಹೆಬ್ಟಾಳ) ಸಾಮಾನ್ಯ ಕ್ಷೇತ್ರವಾಗಿದೆ. ಕಳೆದ ಬಾರಿ ಸಾಮಾನ್ಯ ಮಹಿಳೆಯಾಗಿದ್ದ ಬೆಳ್ಳಟ್ಟಿ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಇದು ಆಯಾ ಕ್ಷೇತ್ರದ ಪ್ರತಿನಿಧಿಗಳಿಗೆ ಅನುಕೂಲಕರವಾಗಿದ್ದರೆ, ಇನ್ನಿತರರ ಕಣ್ಣು ಕೆಂಪಾಗಿಸಿರುವುದು ಸುಳ್ಳಲ್ಲ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.