“ನೆರವು’ ಸಹಾಯವಾಣಿಯಿಂದ ಸದ್ದಿಲ್ಲದ “ಸೇವೆ’

ಕರ್ಫ್ಯೂನಲ್ಲೂ ಸಹಾಯ ಹಸ್ತ ಚಾಚಿದ ಗ್ರಾವಿವಿ

Team Udayavani, May 3, 2021, 11:00 PM IST

3-11

ಗದಗ: ಇಲ್ಲಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯ ಕೊರೊನಾ ಕರ್ಫ್ಯೂ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನ-ಜಾನುವಾರುಗಳಿಗೆ ಹಲವು ರೂಪದಲ್ಲಿ ಸಹಾಯ ಹಸ್ತ ಚಾಚುವುದರ ಜತೆಗೆ “ನೆರವು’ ಯೋಜನೆ ಮೂಲಕ ಸದ್ದಿಲ್ಲದೇ ಮಾನವೀಯತೆ ಪಾಠ ಬೋಧಿಸುತ್ತಿದೆ. ಸದಾ ಜನಮುಖೀ ಹಾಗೂ ಗ್ರಾಮೀಣ ಪ್ರಗತಿಗೆ ಪೂರಕವಾದ ಕ್ರಮಗಳೊಂದಿಗೆ ನಾಡಿನಲ್ಲಿ ವಿಭಿನ್ನವಾಗಿ ಗುರುತಿಸಿಕೊಳ್ಳುವ ಗ್ರಾವಿವಿ ಇದೀಗ ಅಂತಹದ್ದೇ ಯೋಜನೆ ಮೂಲಕ ಗಮನ ಸೆಳೆಯುತ್ತಿದೆ. ಕೋವಿಡ್‌-19ರ 2ನೇ ಅಲೆಯಿಂದ ಮತ್ತೂಮ್ಮೆ ವಿಶ್ವವೇ ತಲ್ಲಗೊಂಡಿದೆ. ಕೋವಿಡ್‌-19 ಜಾಗತಿಕ ಪಿಡುಗಾಗಿದ್ದು, ಎಲ್ಲ ವಯಸ್ಸಿನ, ವರ್ಗದ ಜನರು ಬಾಧಿತರಾಗುತ್ತಿದ್ದಾರೆ. ಕೋವಿಡ್‌ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕೆಂಬ ಸಂಕಲ್ಪದೊಂದಿಗೆ ಗ್ರಾವಿವಿ ತನ್ನದೇ ಆದ ಪರಿಹಾರ ಮಾರ್ಗ ಕಂಡುಕೊಂಡಿದೆ.

“ನೆರವು’ ಸಹಾಯವಾಣಿ: ಗ್ರಾವಿವಿ ಸಮಾಜ ಕಾರ್ಯ ವಿಭಾಗದಡಿ ಕೋವಿಡ್‌-19ರ ಸಂದಿಗ್ಧ ಪರಿಸ್ಥಿತಿಯಲ್ಲಿ ತೊಂದರೆ ಅನುಭವಿಸುತ್ತಿರುವ ಜನರಿಗೆ ನೆರವು ಒದಗಿಸಲು “ನೆರವು’ ಸಹಾಯವಾಣಿ ಕೇಂದ್ರ ಆರಂಭಿಸಿದೆ. ಕೋವಿಡ್‌ ಸೋಂಕು, ಲಸಿಕೆ, ವೈದ್ಯಕೀಯ ಸೌಲಭ್ಯ ಒದಗಿಸುವ ಸಂಸ್ಥೆಗಳು, ಕೋವಿಡ್‌ ಲಸಿಕೆಗೆ ನೋಂದಣಿ, ಆಪ್ತ ಸಮಾಲೋಚನೆ ಸೇವೆ ಒದಗಿಸುತ್ತಿದೆ. ಈ ಪೈಕಿ ಮೈಸೂರು, ಮಂಡ್ಯ ಜಿಲ್ಲೆಗಳಿಂದಲೂ ಬೆಡ್‌, ಆಕ್ಸಿಜನ್‌ ವಿಚಾರವಾಗಿ ಹೆಚ್ಚಿನ ಜನರಿಂದ ಕರೆಗಳು ಬರುತ್ತಿವೆ. ಅಂತಹವರಿಗೆ ಹೆಲ್ಪ್ಲೈನ್‌ ಸಂಖ್ಯೆ ನೀಡಲಾಗುತ್ತದೆ. ಇನ್ನುಳಿದಂತೆ ಕೋವಿಡ್‌ -19 ಪಾಸಿಟಿವ್‌ ವರದಿಯಿಂದ ಗೊಂದಲಕ್ಕೆ ಈಡಾದವರಿಂದಲೂ ಕರೆ ಬರುತ್ತಿದ್ದು, ಅವರಿಗೆ ಸಮಾಲೋಚನೆ ಮೂಲಕ ಧೈರ್ಯ ತುಂಬುತ್ತಿದೆ.

ಹಸಿದವರಿಗೆ “ಅನ್ನ’ ಸಂತರ್ಪಣೆ: ಕೋವಿಡ್‌ ಕರ್ಫ್ಯೂ ಸಂದರ್ಭದಲ್ಲಿ ಅವಶ್ಯಕತೆ ಇರುವವರಿಗೆ ಇಂದಿನಿಂದ ನಿತ್ಯವೂ ಅನ್ನದಾನ ಮಾಡುವ ಯೋಜನೆಯನ್ನು ವಿಶ್ವವಿದ್ಯಾಲಯ ಹಾಕಿಕೊಂಡಿದೆ. ಸೋಂಕಿನಿಂದ ಜಿಲ್ಲಾಸ್ಪತ್ರೆಗೆ ಸೇರಿದವರಿಗೆ ಆಹಾರದ ಸಮಸ್ಯೆ ಇರಲ್ಲ. ಆದರೆ ಅವರನ್ನು ನೋಡಿಕೊಳ್ಳಲು ಬರುವವರು, ಸಂಬಂ ಧಿಕರು ಊಟ ಸಿಗದೇ ಪರದಾಡುತ್ತಿದ್ದು, ಕಳೆದ ನಾಲ್ಕೈದು ದಿನಗಳಿಂದ ಪ್ರತಿದಿನ ಬೆಳಿಗ್ಗೆ 400 ಮತ್ತು ರಾತ್ರಿ 400 ಜನರಿಗೆ ಊಟ, ತಿಂಡಿಯನ್ನು ವಿವಿ ಪೂರೈಸುತ್ತಿದೆ. ಅದಕ್ಕಾಗಿ ಬೋಧಕ-ಬೋಧಕೇತರ ಸಿಬ್ಬಂದಿ ಒಂದೊಂದು ದಿನದ ಊಟದ ಜವಾಬ್ದಾರಿ ಹೊತ್ತುಕೊಳ್ಳುತ್ತಿದ್ದಾರೆ.

ಅದರೊಂದಿಗೆ ಕೆಲ ದಾನಿಗಳು ಆಹಾರ ಸಾಮಗ್ರಿ ನೀಡಿ ನೆರವಾಗುತ್ತಿದ್ದಾರೆ. ಜತೆಗೆ ಗ್ರಾವಿವಿ ಕ್ಯಾಂಪಸ್‌ನಲ್ಲಿ ದೇಸಿ ಕೃಷಿ ಯೋಜನೆಯಡಿ ಬೆಳೆದ ತರಕಾರಿ ಬಳಸಿ ವಿವಿ ಹಾಸ್ಟೆಲ್‌ನಲ್ಲಿ ಅಡುಗೆ ಸಿದ್ಧಗೊಳಿಸಲಾಗುತ್ತಿದೆ. ಬಳಿಕ ಅಚ್ಚುಕಟ್ಟಾಗಿ ಪ್ಯಾಕಿಂಗ್‌ ಮಾಡಿ, ಅಗತ್ಯವಿದ್ದವವರಿಗೆ ತಲುಪಿಸುವ ಮೂಲಕ ಧನ್ಯತೆ ಮೆರೆಯುತ್ತಿದ್ದಾರೆ.

ಬಿಡಾಡಿ ದನಗಳಿಗೆ ಮೇವು: ನಾಗಾವಿ ಸಮೀಪದ ಗ್ರಾವಿವಿ ಕ್ಯಾಂಪಸ್‌ನಲ್ಲಿ ಮೇವು ಬೆಳೆಯಲಾಗುತ್ತಿದ್ದು, ಅದನ್ನು ಅವಳಿ ನಗರದ ಬೀಡಾಡಿ ದನಗಳಿಗೆ ಹಾಕಲಾಗುತ್ತಿದೆ. ಅದಕ್ಕಾಗಿ ಗ್ರಾವಿವಿ ಬೋಧಕ-ಬೋಧಕೇತರ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಮುಂದಿನ 15 ದಿನಗಳವರೆಗೆ ಸಾಕಾಗುವಷ್ಟು ಮೇವು ದಾಸ್ತಾನಿಗಿದೆ ಎನ್ನಲಾಗಿದೆ¨

ಕೋವಿಡ್‌-19 ಸೋಂಕು ಗೆದ್ದು ಬಂದವರು ಪ್ಲಾಸ್ಮಾ ದಾನಕ್ಕೆ ಮುಂದಾಗಲು ಪ್ರೇರೇಪಿಸುವ ಕಾರ್ಯದಲ್ಲಿ ವಿವಿ ತೊಡಗಿದೆ. ಅದಕ್ಕಾಗಿ ಗೂಗಲ್‌ ಫಾಮ್ಯಾìಟ್‌ ಸಿದ್ಧಪಡಿಸಿ ಎಲ್ಲ ಕಡೆಗಳಲ್ಲಿ ಹಂಚಿದ್ದೇವೆ. ಆಸಕ್ತರು ಹೆಸರು ನೋಂದಾಯಿಸಬಹುದು. ದೇಶಕ್ಕೆ ಎದುರಾಗಿರುವ ಇಂತಹ ವಿಷಮ ಪರಿಸ್ಥಿತಿ ಎದುರಿಸಲು ಪ್ರತಿಯೊಬ್ಬರೂ ಕೋವಿಡ್‌ ಸೇನಾನಿಗಳಾಗಬೇಕಿದೆ. ಈ ನಿಟ್ಟಿನಲ್ಲಿ ಗ್ರಾವಿವಿ ಬೋಧಕ, ಬೋಧಕೇತರ ಸಿಬ್ಬಂದಿಯೂ ಕೊರೊನಾ ಸೇನಾನಿಗಳಂತೆ ದುಡಿಯುತ್ತಿದ್ದಾರೆ. ಕೋವಿಡ್‌ ಸಂತ್ರಸ್ತರಿಗೆ ಆಹಾರ ಮತ್ತು ಕರ್ಫ್ಯೂನಿಂದ ಪರದಾಡುತ್ತಿರುವ ಜಾನುವಾರುಗಳಿಗೆ ಮೇವು ಒದಗಿಸಲಾಗುತ್ತದೆ. ಅದಕ್ಕೆ ದಾನಿಗಳಿಂದಲೂ ಉತ್ತಮ ಸ್ಪಂದನೆಯಿದೆ. -ಪ್ರೊ|ವಿಷ್ಣುಕಾಂತ ಎಸ್‌. ಚಟಪಲ್ಲಿ ಗ್ರಾವಿವಿ ಕುಲಪತಿ

 

ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.