ಕನ್ನಡ ಭಾಷೆ ಉಳಿಸಿ-ಬೆಳೆಸಿ: ಸಚಿವ ಸಿ.ಸಿ. ಪಾಟೀಲ


Team Udayavani, Feb 28, 2021, 4:15 PM IST

ಕನ್ನಡ ಭಾಷೆ ಉಳಿಸಿ-ಬೆಳೆಸಿ: ಸಚಿವ ಸಿ.ಸಿ. ಪಾಟೀಲ

ಗದಗ: ಇಂದು ಕರ್ನಾಟಕ ರಾಜ್ಯದಲ್ಲಿ ಅನ್ಯ ಭಾಷೆಗಳ ಹಾವಳಿ ಅಧಿಕವಾಗಿದೆ. ನಾವೆಲ್ಲರೂ ಮಾತೃಭಾಷೆ ಕನ್ನಡ ಕಲಿತು ಅಭಿಮಾನದಿಂದಮಾತನಾಡುವ ಮೂಲಕ ಕನ್ನಡ ಭಾಷೆಯನ್ನುಉಳಿಸಿ, ಬೆಳೆಸಬೇಕಿದೆ ಎಂದು ಸಣ್ಣ ಕೈಗಾರಿಕೆ,ವಾರ್ತಾ ಮತ್ತು ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಜರುಗಿದ ಗದಗ ಜಿಲ್ಲಾ 9ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಅದರಲ್ಲೂಉತ್ತರ ಕರ್ನಾಟಕದ ಕನ್ನಡ ಭಾಷೆಗೆ ಅದರದ್ದೇ ಆದ ಗತ್ತು-ಗಮ್ಮತ್ತಿದೆ. ಆ ಸೊಗಡನ್ನು ನಮ್ಮಜೀವನದುದ್ದಕ್ಕೂ ಬಳಸೋಣ ಎಂದರು.

ಇಂದಿನ ದಿನಮಾನಗಳಲ್ಲಿ ಕನ್ನಡದ ಮೇಲೆ ಅನ್ಯ ಭಾಷೆಗಳ ಪ್ರಭಾವ ಹೆಚ್ಚುತ್ತಿದೆ. ಜತೆಗೆಸ್ಪರ್ಧಾತ್ಮಕ ಯುಗದಲ್ಲಿ ಅನ್ಯ ಭಾಷೆಗಳನ್ನು ಕಲಿಯುವ ಅನಿವಾರ್ಯತೆ ಇದೆ. ಆದರೆ,ಕನ್ನಡ ಭಾಷೆ ಕಡೆಗಣಿಸಬಾರದು. ವಿಧಾನಪರಿಷತ್‌ ಸಭಾಧ್ಯಕ್ಷ ಬಸರಾಜ ಹೊರಟ್ಟಿ ಅವರುಸುದೀರ್ಘ‌ ರಾಜಕೀಯ ಜೀವನ ಸವೆಸಿದ್ದರೂ, ಉತ್ತರ ಕರ್ನಾಟಕದ ಭಾಷೆ ಮರೆತಿಲ್ಲ. ಆದರೆ, ನಾವು ನಾಲ್ಕೈದು ತಿಂಗಳು ಬೆಂಗಳೂರಿನಲ್ಲಿನೆಲೆಸಿದ್ದರೆ ಸಾಕು, ಅಲ್ಲಿನ ಭಾಷೆಯ ಅನುಕರಣೆಮಾಡುತ್ತೇವೆ. ಹುಟ್ಟಿದ ನೆಲವನ್ನು ಎಂದಿಗೂಮರೆಯಬಾರದು. ನಮ್ಮತನವನ್ನು ಉಳಿಸಿಕೊಳ್ಳ ಬೇಕು ಎಂದು ಕಿವಿಮಾತು ಹೇಳಿದರು.

ಕನ್ನಡ ನಾಡಿನ ಸಾಹಿತ್ಯ, ಸಂಸ್ಕೃತಿಗೆ ಗದಗ ಜಿಲ್ಲೆಯ ಕೊಡುಗೆ ಅಪಾರವಾಗಿದೆ. ಜಿಲ್ಲೆಯುಮೊದಲಿನಿಂದಲೂ ಸಹ ಸಾಹಿತ್ಯಿಕ, ಸಾಂಸ್ಕೃತಿಕ ವಾಗಿ ಶ್ರೀಮಂತವಾಗಿದೆ. ಜಿಲ್ಲೆಯಲ್ಲಿ ಪಂ|ಪುಟ್ಟರಾಜ ಗವಾಯಿಗಳು, ಭಾರತರತ್ನಭೀಮಸೇನ್‌ ಜೋಶಿ, ಹುಯಿಲಗೋಳ ನಾರಾ ಯಣರಾವ್‌ ಸೇರಿದಂತೆ ಜಿಲ್ಲೆಯ ಎಲ್ಲ ಕವಿ,ಸಾಹಿತಿಗಳು ಸಹ ಅಭಿನಂದನಾರ್ಹರು ಎಂದರು. 1905ರಲ್ಲಿ ಕನ್ನಡ ಸಾಹಿತ್ಯ ಪರಿಷತ್‌ಸ್ಥಾಪನೆಯಾಗಿ 105 ವರ್ಷಗಳ ಸು ದೀರ್ಘ‌ ಇತಿಹಾಸ ಹೊಂದಿದೆ. ಪರಿಷತ್ತಿನಿಂದ ಕನ್ನಡನೆಲ, ಭಾಷೆ, ಸಂಸ್ಕೃತಿ ಉಳಿವಿಗೆ ಶ್ರಮಿಸುತ್ತಿದೆ. ಜಿಲ್ಲೆಯಲ್ಲಿ ಈವರೆಗೆ 8 ಜಿಲ್ಲಾ ಮಟ್ಟದ ಸಾಹಿತ್ಯಸಮ್ಮೇಳನಗಳನ್ನು ಉತ್ತಮವಾಗಿ ಆಯೋಜಿಸಲಾಗಿದೆ. ಮುಂಡರಗಿ, ಲಕ್ಷ್ಮೇಶ್ವರ, ಗದಗ, ಗಜೆಂದ್ರಗಡ, ರೋಣ, ಶಿರಹಟ್ಟಿ ಸೇರಿದಂತೆ ಎಲ್ಲ ತಾಲೂಕುಗಳಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಸಮ್ಮೇಳನಗಳನ್ನು ಆಯೋಜಿಸಿ ಯಶಸ್ವಿಗೊಳಿಸಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್‌.ಕೆ. ಪಾಟೀಲಮಾತನಾಡಿ, ಗದಗ ಜಿಲ್ಲೆಯು ಸಾಹಿತ್ಯಿಕ, ಸಾಂಸ್ಕೃತಿಕ ನೆಲೆವೀಡಾಗಿದೆ. ಜಿಲ್ಲೆಯ ಲಕ್ಕುಂಡಿಸೇರಿ ಹಲವಾರು ಗ್ರಾಮಗಳಲ್ಲಿರುವ ಪುರಾತನ ದೇವಸ್ಥಾನಗಳ ಪುನಶ್ಚೇತನ ಕಾರ್ಯವಾಗಬೇಕಿದೆ.ಗದಗ-ಬೆಟಗೇರಿ ಅವಳಿ ನಗರದ ಉದ್ಯಾನ ಗಳಲ್ಲಿ ಈ ಹಿಂದೆ ನಡೆಯುತ್ತಿದ್ದ ಉದಯರಾಗ,ಸಂಧ್ಯಾರಾಗ ಕಾರ್ಯಕ್ರಮಗಳು ಪುನಾರಂಭ ವಾಗಬೇಕಿದೆ. ಜಿಲ್ಲೆಯಲ್ಲಿರುವ ಸಾಹಿತಿಗಳನ್ನುಗುರುತಿಸಿ ಅವರ ಭಾವಚಿತ್ರಗಳನ್ನು ಜಿಲ್ಲಾ ಕನ್ನಡಸಾಹಿತ್ಯ ಭವನದಲ್ಲಿ ನಡೆಯುವ ಸಮ್ಮೇಳನದಲ್ಲಿ ಪ್ರಚುರ ಪಡಿಸುವ ಕಾರ್ಯವಾಗಬೇಕಿದೆ ಎಂದರು.

ಹಿಂದೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಜಿಲ್ಲೆಯ ಸಾಹಿತ್ಯ ಭವನ ನಿರ್ಮಾಣಕ್ಕೆ 3.28 ಕೋಟಿ ರೂ. ಹಾಗೂ ಸಿದ್ದರಾಮಯ್ಯ ಅವರಸರಕಾರ 3 ಕೋಟಿ ರೂ. ನೀಡಿದ್ದರಿಂದ ಈ ಭವ್ಯ ಭವನ ನಿರ್ಮಾಣವಾಗಿದೆ ಎಂದು ಸ್ಮರಿಸಿದಅವರು, ಜಿಲ್ಲೆಯಲ್ಲಿ ವಿವಿಧ ತಾಲೂಕಿನ ಉದ್ದೇಶಿತ ಸಾಹಿತ್ಯ ಭವನಗಳಿಗೆ ಅಗತ್ಯ ಅನುದಾನಕಲ್ಪಿಸಬೇಕೆಂದು ಸಚಿವರಿಗೆ ಮನವಿ ಮಾಡಿದರು.ಬಾಲೇಹೊಸೂರಿನ ದಿಂಗಾಲೇಶ್ವರ ಶ್ರೀಗಳುಸಾನ್ನಿಧ್ಯ ವಹಿಸಿ, ಸರಕಾರ, ಆಡಳಿತ ಹಾಗೂ ವ್ಯವಸ್ಥೆಯನ್ನು ಪ್ರತಿಭಟಿಸುವುದು ಅಷ್ಟು ಸುಲಭವಲ್ಲ. ಭಯದ ವಾತಾವರಣದಲ್ಲೇ ಜನರ ಅಭಿಪ್ರಾಯಗಳು ಕಮರಿ ಹೋಗುತ್ತಿವೆ. ಸತ್ಯ

ಹೇಳಲು ಈ ನಾಡಿನಲ್ಲಿ ಅಳಕು ಉಂಟಾಗುತ್ತಿದೆ. ಮುಕ್ತವಾಗಿ ಹೇಳಿಕೊಳ್ಳಲು ಅವಕಾಶ ಸಿಗುತ್ತಿಲ್ಲ. ಕನ್ನಡ ಸಾಹಿತ್ಯ, ನಾಡಿನ ಸಮಸ್ಯೆಗಳ ಬಗ್ಗೆ ಮಾತನಾಡುವುದು ಅರಣ್ಯರೋದನವಾಗಿದೆ. ಕನ್ನಡದಶ್ರೀಮಂತಿಕೆ ನಾಶಪಡಿಸಿ ಇಂಗ್ಲಿಷ್‌ ಸಾಮ್ರಾಜ್ಯ ವಿಸ್ತರಿಸಿಕೊಳ್ಳುತ್ತಿದೆ. ಎಲ್ಲೆಡೆ ಇಂಗ್ಲಿಷ್‌ ವಿರಾಜಮಾನವಾಗಿ, ಕನ್ನಡದ ಅವನತಿಗೆ ಕಾರಣವಾಗುತ್ತಿದೆ. ಈಹಿನ್ನೆಲೆಯಲ್ಲಿ ರಾಜ್ಯ ವಿಧಾನಸೌಧದಿಂದ ಪಾನ್‌ಅಂಗಡಿವರೆಗೆ ಎಲ್ಲ ಫಲಕಗಳು ಕನ್ನಡ ಕಡ್ಡಾಯಗೊಳಿಸಬೇಕು. ಈ ನಿಟ್ಟಿನಲ್ಲಿ ಸರಕಾರದಿಂದ ಆದೇಶಿ ಸಬೇಕೆಂದು ಸಚಿವರಿಗೆ ಸಲಹೆ ನೀಡಿದರು.

ಜಿಪಂ ಅಧ್ಯಕ್ಷ ಈರಪ್ಪ ನಾಡಗೌಡ್ರ, ಉಪಾಧ್ಯಕ್ಷೆ ಮಂಜುಳಾ ಹುಲ್ಲೆಣ್ಣವರ, ಜಿಪಂ ಸದಸ್ಯ ಪೂಜಾರ, ಡಿಸಿ ಎಂ. ಸುಂದರೇಶ ಬಾಬು, ಎಸ್ಪಿ ಯತೀಶ್‌ ಎನ್‌., ಎ. ರಾಯಪ್ಪ ಹುಣಸಗಿ, ಸರಕಾರಿ ನೌಕರರ ಸಂಘದಜಿಲ್ಲಾಧ್ಯಕ್ಷ ರವಿ ಗುಂಜೀಕರ, ಕ.ರಾ.ಪ್ರಾ.ಶಾ.ಶಿ.ಸಂಘದ ಜಿಲ್ಲಾಧ್ಯಕ್ಷ ವಿ.ಎಂ.ಹಿರೇಮಠ, ಜಿಲ್ಲಾಸರಕಾರಿ ನೌಕರರ ಸಂಘದ ನಿಕಟಪೂರ್ವ ಜಿಲ್ಲಾ ಧ್ಯಕ್ಷ ಪ್ರೇಮನಾಥ ಗರಗ, ನಿಕಟಪೂರ್ವ ಸಮ್ಮೇಳ ನಾಧ್ಯಕ್ಷ ಎಂ.ಡಿ.ಗೋಗೇರಿ ವೇದಿಕೆ ಮೇಲಿದ್ದರು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.