ಗದಗ: ಹಗಲುಗನಸು ಕಾಣುತ್ತಿದ್ದಾರೆ ಬೊಮ್ಮಾಯಿ


Team Udayavani, Mar 21, 2024, 2:20 PM IST

ಗದಗ: ಹಗಲುಗನಸು ಕಾಣುತ್ತಿದ್ದಾರೆ ಬೊಮ್ಮಾಯಿ

ಉದಯವಾಣಿ ಸಮಾಚಾರ
ಗದಗ: ದೇಶದ ಸರ್ವೋಚ್ಛ ನ್ಯಾಯಾಲಯ ಚುನಾವಣಾ ಬಾಂಡ್‌ ಹಗರಣ ಬಯಲಿಗೆಳೆಯುವ ಮೂಲಕ ಕೇಂದ್ರ ಸರಕಾರದ ಅಕ್ರಮವನ್ನು ಬೆಳಕಿಗೆ ತಂದಿದೆ. ದೇಶದ ಜನತೆಗೆ ಸುಳ್ಳು ಭರವಸೆ ನೀಡಿ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ
ಹೇಳಿ ಬಡತನವನ್ನು ಅಪಹಾಸ್ಯ ಮಾಡಿ ಎರಡು ಬಾರಿ ಮತಹಾಕಿಸಿಕೊಂಡಿರುವ ನರೇಂದ್ರ ಮೋದಿ ಅವರಿಗೆ ತಕ್ಕ ಶಾಸ್ತಿ
ಮಾಡಬೇಕಾಗಿದೆ ಎಂದು ಸಚಿವ ಎಚ್‌.ಕೆ. ಪಾಟೀಲ ಮನವಿ ಮಾಡಿದರು.

ನಗರದ ಕೆ.ಎಚ್‌. ಪಾಟೀಲ ಸಭಾಭವನದಲ್ಲಿ ಬುಧವಾರ ನಡೆದ ಕಾಂಗ್ರೆಸ್‌ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ನಂತರ ದೇಶಕ್ಕೆ ಅದ್ಭುತವಾದ ಸಂವಿಧಾನ ನೀಡಿದ ಕೊಡುಗೆ ಕಾಂಗ್ರೆಸ್‌ಗೆ ಸಲ್ಲುತ್ತದೆ. ಆದರೆ, ಸರ್ವರಿಗೂ ಸಮಾನತೆ ಒದಗಿಸುವ ಸಂವಿಧಾನವನ್ನು ಬದಲಾಯಿಸುತ್ತೇವೆ, ತಿದ್ದುಪಡಿ ಮಾಡುತ್ತೇವೆ ಎಂದು ಹೇಳಿಕೆ ನೀಡುವ ಬಿಜೆಪಿಯವರಿಂದ ನಮ್ಮ ಸಂವಿಧಾನ ಕಾಪಾಡಿಕೊಂಡು, ಮೀಸಲಾತಿ ಉಳಿಸಿಕೊಳ್ಳಬೇಕಾಗಿದೆ ಎಂದರು.

ಮನಮೋಹನಸಿಂಗ್‌ ಪ್ರಧಾನಿ ಆಗಿದ್ದ ಕಾಲದಲ್ಲಿ 72 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಲಾಗಿದೆ. ಆದರೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತಮ್ಮ ಅವಧಿಯಲ್ಲಿ 726 ಶ್ರೀಮಂತರ 6.50 ಲಕ್ಷ ಕೋಟಿ ಸಾಲ ಮನ್ನಾ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಇದು ಹೀಗೆ ಮುಂದುವರಿದರೆ ಆರ್ಥಿಕತೆಗೆ ಹೊಡೆತ ಬೀಳಲಿದೆ. ದೇಶ ಸಂಕಷ್ಟಕ್ಕೆ ಸಿಲುಕಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಹಾವೇರಿ ಲೋಕಸಭಾ ಕ್ಷೇತ್ರ ಸೇರಿ ದೇಶದೆಲ್ಲೆಡೆ ಆ ಅಲೆ ಇದೆ. ಈ ಅಲೆ ಇದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಸಮುದ್ರ  ಅಂದ ಮೇಲೆ ಅಲೆ ಇದ್ದೇ ಇರುತ್ತದೆ. ಆ ಸಮುದ್ರದಲ್ಲಿ ಈಜಿ ದಡ ಸೇರುತ್ತೇನೆ ಎಂಬ ವಿಶ್ವಾಸವಿದೆ.
ಆನಂದಸ್ವಾಮಿ ಗಡ್ಡದೇವರಮಠ,
ಕಾಂಗ್ರೆಸ್‌ ಅಭ್ಯರ್ಥಿ

ಸಭೆಯಲ್ಲಿ ಭಾಗವಹಸಿದ್ದ 2500ಕ್ಕೂ ಹೆಚ್ಚು ಜನರಿಗೆ ಚುನಾವಣಾ ಹೇಗೆ ಮಾಡಬೇಕು. ಯಾವ ರೀತಿ ಜನರನ್ನು ಭೇಟಿ ಮಾಡಿ ಸಮಾಲೋಚನೆ ಮಾಡಬೇಕು ಎಂಬುದನ್ನು ತಿಳಿಸಿದ್ದೇವೆ. ಗ್ಯಾರಂಟಿ ಸಮಾವೇಶಗಳನ್ನು ಮಾಡಿದ್ದೇವೆ. ಸಮಾವೇಶದಲ್ಲಿ ಸಹಸ್ರಾರು ಜನ ಸೇರಿದ್ದರು. ಮಹಿಳೆಯರು ನಮ್ಮ ಬೆನ್ನಿಗೆ ಇದ್ದೇವೆ ಎಂಬುದನ್ನು ಸಾಬೀತು ಪಡಿಸಿದ್ದು, ಗೆಲುವಿನ ಬಗ್ಗೆ ಆತ್ಮವಿಶ್ವಾಸ ಮೂಡಿದೆ.
ಎಚ್‌.ಕೆ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.