ಕೋವಿಡ್-19 ಸೋಂಕು ತಾಗಿದ್ದ ಗದಗದ 80ರ ವೃದ್ಧೆ ಸಾವು; ಜಿಲ್ಲೆಯಲ್ಲಿ ಹೆಚ್ಚಿದ ಆತಂಕ
Team Udayavani, Apr 9, 2020, 9:34 AM IST
ಗದಗ: ಜಿಲ್ಲೆಯ ಕೋವಿಡ್-19 ಸೋಂಕು ಪೀಡಿತ ವೃದ್ಧೆ ಸಾವನ್ನಪ್ಪಿದ್ದಾರೆ. ಬುಧವಾರ ತಡರಾತ್ರಿ ಅವರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ನಗರದ ರಂಗನವಾಡಿ ನಿವಾಸಿಯಾಗಿದ್ದ 80 ವರ್ಷದ ವೃದ್ಧೆ ಬುಧವಾರ ಮಧ್ಯರಾತ್ರಿ 12.55ಕ್ಕೆ ಕಾರ್ಡಿಯಾಕ್ ಅರೆಸ್ಟನಿಂದ ಮೃತಪಟ್ಟಿದ್ದಾಳೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ.
ಏಪ್ರಿಲ್ 4 ರಂದು ತೀವ್ರ ಉಸಿರಾಟದ ತೊಂದರೆಯಿಂದ ಬಳುಲುತ್ತಿದ್ದ ವೃದ್ಧೆಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏ.6 ರಂದು ಕೋವಿಡ್-19 ಸೋಂಕು ದೃಢಪಟ್ಟಿತ್ತು. ಹೀಗಾಗಿ ಮಲ್ಲ ಸಮುದ್ರದ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಸೋಂಕು ಮೂಲ ಯಾರು?
ವೃದ್ಧೆಗೆ ಸೋಂಕು ಎಲ್ಲಿಂದ, ಯಾರಿಂದ ತಗುಲಿದೆ ಎನ್ನುವುದು ನಿಗೂಢವಾಗಿದೆ. ಮೃತಳು ಇಲ್ಲಿನ ರಂಗನವಾಡದ ತಂಗಿ ಮನೆಯಲ್ಲಿ ವಾಸವಿದ್ದಳು. ಅಲ್ಲದೇ ಇತ್ತೀಚಿಗೆ ಇಲ್ಲಿನ ಎಸ್.ಎಂ.ಕೃಷ್ಣ ನಗರದಲ್ಲಿ ಸಂಬಂಧಿಕರೊಬ್ಬರ ಪುಟ್ಟ ಕಾರ್ಯಕ್ರಮದಲ್ಲಿ ಭಾಗಿಯಗಿದ್ದರು. ಅದೇ ಸಮಾರಂಭಕ್ಕೆ 7 ಜನ ಗೋವಾದಿಂದ ಆಗಮಿಸಿದ್ದರು. ಹೀಗಾಗಿ ಅವರಿಂದಲೇ ಸೋಂಕು ಹರಡಿರುವ ಸಂಶಯ ವ್ಯಕ್ತವಾಯಿತು.
ಈ ನಡುವೆ ವೃದ್ಧೆಗೆ ಸೋಂಕು ಖಚಿತವಾಗುತ್ತಿದ್ದಂತೆ ಆಕೆಯ ಮನೆಯವರು, ಗೋವಾದಿಂದ ಆಗಮಿಸಿದವರು ಸೇರಿದಂತೆ ಪ್ರಾಥಮಿಕ ಸಂಪರ್ಕದಲ್ಲಿದ್ದ 35 ಜನ ಹಾಗೂ ವೃದ್ಧೆಗೆ ಚಿಕಿತ್ಸೆ ನೀಡಿದ್ದ 7 ಜನ ವೈದ್ಯಕೀಯ ಸಿಬ್ಬಂದಿಯನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ ಯಾರಲ್ಲೂ ಸೋಂಕು ದೃಢ ಪಟ್ಟಿಲ್ಲ. ಹೀಗಾಗಿ ವೃದ್ಧೆಗೆ ಸೋಂಕು ಹರಡಿದ್ದು ಯಾರಿಂದ ಎಂಬುದು ಪತ್ತೆ ಮಾಡುವುದೇ ಜಿಲ್ಲಾಡಳಿತದ ಮುಂದಿರುವ ಸವಾಲು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ