ಮನೆ-ಮನ ಬೆಳಗಿದ ದೀವಿಗೆ 


Team Udayavani, Nov 9, 2018, 4:50 PM IST

9-november-20.gif

ಗದಗ: ಅವಳಿ ನಗರ ಸೇರಿದಂತೆ ಜಿಲ್ಲಾದ್ಯಂತ ಎಲ್ಲೆಲ್ಲೂ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ  ಮನೆ ಮಾಡಿದೆ. ಮನೆ, ಅಂಗಡಿ ಮುಂಗಟ್ಟುಗಳು ಹಾಗೂ ಹೋಟೆಲ್‌ಗ‌ಳಲ್ಲಿ ಧನಲಕ್ಷ್ಮೀ  ಆರಾಧನೆ ಜೋರಾಗಿತ್ತು. ಮಹಿಳೆಯರು ನೂತನ ವಸ್ತ್ರ, ಚಿನ್ನಾಭರಣ ಧರಿಸಿ ಗಮನ ಸೆಳೆದರೆ, ಮುದ್ದು ಮಕ್ಕಳು, ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ದೀಪಾವಳಿ ಹಬ್ಬದ ಆಚರಣೆಗಾಗಿ ಜಿಲ್ಲಾದ್ಯಂತ ಮಹಿಳೆಯರು ಬೆಳಗ್ಗೆಯಿಂದಲೇ ಸಿದ್ಧತೆಯಲ್ಲಿ ತೊಡಗಿದ್ದರು. ದೀಪಾವಳಿ ಬಲಿಪಾಡ್ಯಮಿ ಅಂಗವಾಗಿ ನಗರದ ವಿವಿಧ ದೇವಸ್ಥಾನಗಳಾದ ಪುಟ್ಟರಾಜ ಕವಿ ಗವಾಯಿಗಳ ಆಶ್ರಮ, ಸಾಯಿಬಾಬಾ ದೇವಸ್ಥಾನ, ರಾಚೋಟೇಶ್ವರ ದೇವಸ್ಥಾನ, ಜೋಡು ಮಾರುತಿ, ಗಂಗಾಪುರ ಪೇಟೆ ದುರ್ಗಾದೇವಿ, ಬೆಟಗೇರಿ ಬನಶಂಕರಿ ದೇವಸ್ಥಾನ ಸೇರಿದಂತೆ ಅವಳಿ ನಗರದ ಪ್ರಮುಖ ದೇವಸ್ಥಾನ ಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ದೀಪಾವಳಿ ಹಬ್ಬದಂದೇ ಹೊಸದಾಗಿ ವಾಹನಗಳ ಖರೀದಿಸಿದವರು ತಮ್ಮ ಇಷ್ಟ ದೇವರ ಸನ್ನಿಧಾನದಲ್ಲಿ ನೂತನ ಪೂಜೆ ನೆರವೇರಿಸಿದರು.

ಮನೆ-ಮನ ಬೆಳಗಿದ ದೀವಿಗೆ: ಬಾನಂಗಳದಲ್ಲಿ ಕತ್ತಲೆ ಆವರಿಸುತ್ತಿದ್ದಂತೆ ಎಲ್ಲರ ಮನೆಗಳಲ್ಲೂ ಹಣತೆಯ ದೀಪಗಳು ಮನೆ- ಮನಗಳನ್ನು ಬೆಳಗಿದವು. ದೀಪಾವಾಳಿ ನಿಮಿತ್ತ ಬಹುತೇಕರು ತಮ್ಮ ಮನೆ ಮುಖ್ಯ ಬಾಗಿಲು, ಕಿಟಕಿ, ಹಾಗೂ ಕಾಂಪೌಂಡ್‌ ಗೋಡೆಗಳ ಮೇಲೆ ಹಣತೆಗಳನ್ನು ಸಾಲು ಸಾಲಾಗಿ ಹಚ್ಚಿ, ಬೆಳಕು ಮೂಡಿಸಿರುವುದು ನೋಡುಗರಿಗೆ ಮುದ ನೀಡಿತು.

ಬಾಗಿಲು ಹಾಗೂ ದೇವರ ಮಂಟಪಗಳನ್ನು ಬಾಳೆ ಎಲೆ ಹಾಗೂ ಮಾವಿನ ಎಲೆಗಳಿಂದ ಅಂಲಕರಿಸಲಾಗಿತ್ತು. ಇನ್ನೂ ಕೆಲವರು ಮನೆ ಹಾಗೂ ಅಂಗಡಿ ಮುಂಗಟ್ಟುಗಳನ್ನು ವರ್ಣರಂಜಿತ ವಿದ್ಯುತ್‌ ದೀಪಗಳಿಂದ ಅಲಂಕರಿಸಿದ್ದರಿಂದ ಬೆಳಕಿನ ಕಿರಣಗಳ ಮಧ್ಯೆ ಕಟ್ಟಡಗಳು ಜಗಮಗಿಸುತ್ತಿದ್ದವು.

ಎಲ್ಲೆಲ್ಲೂ ಲಕ್ಷ್ಮೀ ದೇವಿ ಆರಾಧನೆ: ಅವಳಿ ನಗರದ ಸಾವಿರಾರು ಅಂಗಡಿ ಮುಂಗಟ್ಟುಗಳು, ನೂರಾರು ಹೋಟೆಲ್‌ಗ‌ಳಲ್ಲಿ ಅರ್ಚಕರು ಧಾರ್ಮಿಕ ವಿ ವಿಧಾನಗಳೊಂದಿಗೆ ಮಹಾಗಣಪತಿ ಹಾಗೂ ತಾಯಿ ಅಷ್ಟಲಕ್ಷ್ಮೀಯರ ಪೂಜೆ ನೆರವೇರಿಸಿದರು.

ಪೂಜೆಗೆ ನೆಂಟರಿಷ್ಟರು, ಸ್ನೇಹಿತರು ಹಾಗೂ ಅಕ್ಕ-ಪಕ್ಕದವರನ್ನು ಪೂಜೆಗೆ ಆಹ್ವಾನಿಸಿ ಬಾಳೆ ಹಣ್ಣು, ಎಲೆ ಅಡಿಕೆ ಹಾಗೂ ಉಪಹಾರ ನೀಡಿ ಸತ್ಕರಿಸಿದರು. ಸ್ಥಿತಿವಂತ ಉದ್ಯಮಿಗಳು ಹಬ್ಬದೂಟ ಬಡಿಸಿ ತಾಯಿ ಲಕ್ಷ್ಮೀದೇವಿ ಕೃಪೆಗೆ ಪಾತ್ರರಾದರು. ಇನ್ನುಳಿದಂತೆ ಮನೆಗಳಲ್ಲೂ ಮುತ್ತೈದೆಯರು ತಾಯಿ ಲಕ್ಷೀದೇವಿ, ಗೌವರಮ್ಮ ಪೂಜೆ ನೆರವೇರಿಸಿದರು. ಮನೆ ದೇವರ ಕೋಣಿಯಲ್ಲಿ ಕಳಶ ಹಾಗೂ ಮಡಿ ನೀರು ತುಂಬಿದ್ದ ಕಂಚಿನ ತಂಬಿಗೆಯಲ್ಲಿ ತೆಂಗಿನ ಕಾಯಿಗೆ ಸೀರೆ ಉಡಿಸಿ ವಿವಿಧ ಹೂವುಗಳಿಂದ ಲಕ್ಷ್ಮೀ  ದೇವಿ ಪ್ರತಿಮೆ ತಯಾರಿಸಿ ಭಕ್ತಿಯಿಂದ ಪೂಜಿಸಿದರು. 

ಟಾಪ್ ನ್ಯೂಸ್

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

mob

Blocked; 3 ತಿಂಗಳುಗಳಲ್ಲಿ 2 ಕೋಟಿ ವಾಟ್ಸ್‌ಆ್ಯಪ್‌ ಖಾತೆ ನಿರ್ಬಂಧ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.