ಮಾಂಸ ಮಾರಾಟಕ್ಕೂ ತಟ್ಟಿದ ಕೊರೊನಾ ಭೀತಿ

ಗದಗ ಸೇರಿದಂತೆ ಎಲ್ಲೆಡೆ ಮಾಂಸ ಮಾರಾಟ ಕ್ಷೀಣವರ್ತಕರಿಗೆ ವಾಟ್ಸ್‌ ಆ್ಯಪ್‌ ವದಂತಿ ತಂದ ಫಜೀತಿ

Team Udayavani, Mar 11, 2020, 7:13 PM IST

11-March-16

ಗದಗ: ಜಾಗತಿಕ ಮಟ್ಟದಲ್ಲಿ ಹರಡಿರುವ ಕೊರೊನಾ ವೈರಸ್‌ನಿಂದಾಗಿ ವಿಶ್ವದ ಹಲವು ದೇಶಗಳು ತತ್ತರಿಸಿವೆ. ಇದರಿಂದ ಭಾರತವೂ ಹೊರತಾಗಿಲ್ಲ. ಅದರೊಂದಿಗೆ ಕೋಳಿ ಮಾಂಸ ಸೇವನೆಯಿಂದಲೂ ಈ ಸೋಂಕು ಹರಡುತ್ತದೆ ಎಂಬ ವದಂತಿಯ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮಾಂಸ ಉದ್ಯಮವನ್ನು ಪಾತಾಳಕ್ಕೆ ನೂಕಿದೆ.

ಗದಗ ಸೇರಿದಂತೆ ರಾಜ್ಯದೆಲ್ಲೆಡೆ ಮಾಂಸ ಮಾರಾಟ ಗಣನೀಯವಾಗಿ ಕುಸಿದಿದೆ. ಅದರಲ್ಲೂ ಚಿಕನ್‌ ಸೇವನೆಯಿಂದ ವೈರಸ್‌ ಹರಡುತ್ತದೆ ಎಂಬ ಸಂದೇಶಗಳು ಜಾಲತಾಣಗಳಲ್ಲಿ ಹರಿದಾಡುತ್ತಿರುವುದರಿಂದ ಸಾರ್ವಜನಿಕರು ಬಹುತೇಕ ಮಾಂಸ ಸೇವನೆಯನ್ನೇ ಕೈಬಿಟ್ಟಿದ್ದಾರೆ. ಹೀಗಾಗಿ ಸೋಮವಾರ ಹಾಗೂ ಶನಿವಾರವನ್ನು ಹೊರತಾಗಿ ಇನ್ನುಳಿದಂತೆ ವಾರದ ಐದು ದಿನಗಳ ಕಾಲ ಸದಾ ಜನರಿಂದ ಗಿಜಿಗುಡುತ್ತಿದ್ದ ಮಾಂಸ ಮಾರುಕಟ್ಟೆಗಳು ಇದೀಗ ಗ್ರಾಹಕರಿಲ್ಲದೇ ಬಣಗುಡುತ್ತಿದೆ.

ಚಿಕನ್‌ ವ್ಯಾಪಾರಿಗಳಿಗೆ ಭಾರೀ ಹೊಡೆತ: ಚೀನಾದಲ್ಲಿ ಕೊರೊನಾ ವೈರಸ್‌ ಭಾರೀ ಸದ್ದು ಮಾಡುತ್ತಿದ್ದರೂ ದೇಶದಲ್ಲಿ ಅಷ್ಟಾಗಿ ಪರಿಣಾಮ ಬೀರಿದ್ದಿಲ್ಲ. ಆದರೆ, ಚಿಕನ್‌ ಸೇವನೆಯಿಂದ ಕೊರೊನಾ ವೈರಾಣುಗಳು ಹರಡುತ್ತವೆ ಎಂಬ ಸಂದೇಶಗಳು ಹಾಗೂ ಮಾಂಸದ ಮೇಲೆ ಕಲೆಗಳುಳ್ಳ ´ೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಹರಿದಾಡುತ್ತಿದ್ದು, ಮಾಂಸ ಮಾರಾಟಕ್ಕೂ ಬಿಸಿ ತಟ್ಟಿದೆ.

ಕಳೆದ 15 ದಿನಗಳಿಂದ ದಿನದಿಂದ ದಿನಕ್ಕೆ ಮಾಂಸ ಮಾರಾಟ ಕ್ಷೀಣಿಸುತ್ತಿದ್ದು, ಈ ನಡುವೆ ಹಲವು ಅಂಗಡಿ ತಾತ್ಕಾಲಿಕವಾಗಿ ಬಾಗಿಲು ಮುಚ್ಚುತ್ತಿದ್ದಾರೆ ಎಂಬುದು ಆತಂಕಕಾರಿ ಬೆಳವಣಿಗೆ. ಗದಗ-ಬೆಟಗೇರಿ ಅವಳಿ ನಗರವೊಂದರಲ್ಲೇ ಸುಮಾರು 100ಕ್ಕೂ ಹೆಚ್ಚು ಚಿಕನ್‌ ಹಾಗೂ 50-80 ಮಟನ್‌ ಅಂಗಡಿಗಳಿವೆ. ಆ ಪೈಕಿ ಜವಳ ಗಲ್ಲಿ ಮಾಬುಸುಭಾನ ಕಟ್ಟಿ ಹಾಗೂ ಬೆಟಗೇರಿ ಮಾರುಕಟ್ಟೆ ಪ್ರದೇಶದಲ್ಲಿರುವ ಅಂಗಡಿಗಳಲ್ಲಿ ಪ್ರತಿನಿತ್ಯ ತಲಾ 40- 60 ಕೋಳಿ ಹಾಗೂ 5-10 ಕುರಿ, ಮೇಕೆಗಳ ಮಾಂಸ ಮಾರಾಟವಾಗಿ ಸಾವಿರಾರು ರೂ. ವಹಿವಾಟಾಗುತ್ತಿತ್ತು. ಅದರಲ್ಲೂ ರವಿವಾರ, ಹಬ್ಬದ ಹಾಗೂ ವಿಶೇಷ ದಿನಗಳಲ್ಲಿ ಈ ಸಂಖ್ಯೆ ದುಪ್ಪಟ್ಟಾಗುತ್ತಿತ್ತು. ಆದರೆ, ಇದೀಗ ಎಲ್ಲೆಡೆ ಆವರಿಸಿರುವ ಕೊರೊನಾ ಭೀತಿಯಿಂದ ದಿನ ಕಳೆದಂತೆ ಮಾಂಸ ಕೊಳ್ಳುವವರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದ್ದು, ಈಗ ದಿನಕ್ಕೆ 5ರಿಂದ 10 ಕೋಳಿ ಹಾಗೂ ನಾಲ್ಕೈದು ಕುರಿ ಮಾಂಸವೂ ಮಾರಾಟವಾದರೆ ಸಾಕು ಎನ್ನುವ ಪರಿಸ್ಥಿತಿ ಬಂದೊದಗಿದೆ ಎನ್ನುತ್ತಾರೆ ಸ್ಥಳೀಯ ವರ್ತಕರು.

ಚಿಕನ್‌, ಮಟನ್‌ ಸೇವಿಸಿದರೆ ಕರೋನಾ ರೋಗಾಣುಗಳು ಹರಡುತ್ತವೆ ಎಂಬುದು ಯಾವುದೇ ವೈದ್ಯರು ಹಾಗೂ ಸರಕಾರ ಘೋಷಿಸಿಲ್ಲ. ಆದರೆ, ಯಾರೋ ಕಿಡಿಗೇಡಿಗಳು ಹರಡಿದ ವಾಟ್ಸ್‌ಆ್ಯಪ್‌ ಸಂದೇಶದಿಂದ ನಮ್ಮ ಬದುಕನ್ನೇ ಕಿತ್ತಿಕೊಳ್ಳುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಜಾಗೃತಿ ಕಾರ್ಯಕ್ರಮಗಳಲ್ಲಿ ಮಾಹಿತಿ ನೀಡಬೇಕು.
ಸುಭಾಷ ಕಲಾಲ್‌, ನಗರದ ಮಾಂಸ
ಮಾರಾಟಗಾರರ ಸಂಘದ ಅಧ್ಯಕ್ಷ್ಯ

ಕೊರೊನಾ ವೈರಸ್‌ ಇರುವ ವ್ಯಕ್ತಿ ಕೆಮ್ಮುವುದರಿಂದ ಮಾತ್ರ ರೋಗ ಹರಡಲು ಸಾಧ್ಯ. ಆದರೆ, ಚಿಕನ್‌, ಮಟನ್‌ ಕೊರೊನಾ ಸೋಂಕು ಹರಡುವುದಿಲ್ಲ. ಈ ಕುರಿತು ಆರೋಗ್ಯ ಇಲಾಖೆಯಿಂದ ಗ್ರಾ.ಪಂ. ಮಟ್ಟದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತರ ಮೂಲಕ ಜನರಿಗೆ ಮಾಹಿತಿ ನೀಡಲು ಕ್ರಮ ಕೈಗೊಳ್ಳಲಾಗುವುದು.
ಡಾ| ಬಿ.ಎಸ್‌. ಕರಿಗೌಡರ,
ಜಿಲ್ಲಾ ಶಸ್ತ್ರಚಿಕಿತ್ಸ

ಚಿಕನ್‌ ವ್ಯಾಪಾರ ಬಹುತೇಕ ಸ್ತಬ್ಧಗೊಂಡಿದೆ. ಚಿಕನ್‌ ಅಂಗಡಿಕಾರರಿಗೆ ಪ್ರತಿನಿತ್ಯ ಐದಾರು ಸಾವಿರಾರು ನಷ್ಟವಾಗುತ್ತಿದೆ. ಹೀಗಾಗಿ ಕೆಲವರು ಅಂಗಡಿಗಳನ್ನೇ ತೆಗೆಯುತ್ತಿಲ್ಲ. ಇನ್ನುಳಿದವರು ಹೆಚ್ಚಿನ ಕೋಳಿಗಳನ್ನು ತರಿಸುತ್ತಿಲ್ಲ.
ವಾಜೀದ್‌ ಬೋದ್ಲೆಖಾನ,
ಚಿಕನ್‌ ವ್ಯಾಪಾರಿ

ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.