ಗದುಗಿನಲ್ಲಿ ನಿರ್ವಹಣೆಯಿಲ್ಲದ ʼಗೌರವ ಘಟಕಗಳು’

ಹೈಟೆಕ್‌ ಶೌಚಾಲಯಗಳು ನಿರುಪಯುಕ್ತ; ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕಸ

Team Udayavani, Dec 13, 2022, 12:58 PM IST

5

ಗದಗ: ಸಾರ್ವಜನಿಕರಿಗೆ ಹೈಟೆಕ್‌ ಶೌಚಾಲಯ ವ್ಯವಸ್ಥೆ ಕಲ್ಪಿಸುವುದಕ್ಕಾಗಿ ಅವಳಿ ನಗರದಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಿರುವ “ಗೌರವ ಘಟಕಗಳು’ ಮೂಲ ಸೌಲಭ್ಯದ ಕೊರತೆಯಿಂದ ಪಾಳು ಬಿದ್ದಿದೆ.

ನಗರದ ಹೃದಯದ ಭಾಗದಲ್ಲಿರುವ ರಾಜೀವ ಗಾಂಧಿ ನಗರ, ಎಸ್‌.ಎಂ. ಕೃಷ್ಣ ನಗರ ಹಾಗೂ ಕುಲಕರ್ಣಿ ಓಣಿಯಲ್ಲಿರುವ ಗೌರವ ಘಟಕಗಳನ್ನು ನಿರ್ಮಿಸಲಾಗಿದೆ. ಈ ಭಾಗದ ಜನರಿಗೆ ಕಡಿಮೆ ಹಣದಲ್ಲಿ ಹೈಟೆಕ್‌ ಶೌಚಾಲಯ ನಿರ್ಮಿಸಲಾಗಿದೆ. ಆದರೆ ಸರಿಯಾದ ನಿರ್ವಹಣೆ ಕೊರತೆಯಿಂದ ನಿರುಪಯುಕ್ತವಾಗಿದೆ.

ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಿರುವ ಗೌರವ ಘಟಕ (ಹೈಟೆಕ್‌ ಶೌಚಾಲಯ)ಕ್ಕೂ ಸಾರ್ವಜನಿಕರಿಗೆ ನಂಟು ಇಲ್ಲದಂತಾಗಿದೆ. ಇತ್ತ ಸರಕಾರದ ಅನುದಾನ ಮಾತ್ರ ಹೊಳೆಯಲ್ಲಿ ಕೊಚ್ಚಿ ಹೋದಂತಾಗಿದೆ. ಇನ್ನಾದರೂ ದುರಸ್ತಿಗೊಳಿಸಿ, ಸಾರ್ವಜನಿಕ ಬಳಕೆಗೆ ಅನುಕೂಲ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಕಳೆದ ಎರಡೂ ವರ್ಷದಿಂದ ಕೋವಿಡ್‌ ಹಿನ್ನೆಲೆಯಲ್ಲಿ ಗೌರವ ಘಟಕಕ್ಕೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಗೌರವ ಘಟಕದಲ್ಲಿರುವ ಸಲಕರಣೆಗಳು ಸಂಪೂರ್ಣ ಹಾಳಾಗಿವೆ. ಅದರಲ್ಲೂ ಶೌಚಾಲಯದಲ್ಲಿ ನೀರು ಬಿಡುವ ನಳ, ಮೂತ್ರ ಹೊರ ಹೋಗುವ ಪೈಪ್‌ಗ್ಳು ಕಿತ್ತು ಹೋಗಿವೆ. ಕಸ ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಮೂತ್ರ ವಿಸರ್ಜನೆ ಕಾರಣದಿಂದ ಆ ಜಾಗ ಆಶುಚಿತ್ವದಿಂದ ಕೂಡಿದೆ. ಸ್ನಾನಕ್ಕೂ ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು. ಅದು ಕೂಡ ಬಂದ್‌ ಆಗಿವೆ.

ದುರಸ್ತಿಗೆ ಆಗ್ರಹ: ಗದಗ-ಬೆಟಗೇರಿ ಅವಳಿ ನಗರದಲ್ಲಿರುವ ಗೌರವ ಘಟಕದಲ್ಲಿನ ವಿವಿಧ ಸಲಕರಣೆಗಳು ಸಂಪೂರ್ಣವಾಗಿ ತುಕ್ಕು ಹಿಡಿದಿವೆ. ಬೂಟ್‌ ಪಾಲಿಶ್‌ ಮಶಿನ್‌, ಹ್ಯಾಂಡ್‌ ಡ್ರೈಯರ್‌, ಹೇರ್‌ ಡ್ರೈಯರ್‌, ಐರನ್‌ ಬಾಕ್ಸ್‌, ಶೋವರ್‌ ಬಾತ್‌ ಬಂದ್‌ ಆಗಿದ್ದು, ಕೆಲ ವಸ್ತುಗಳು ತುಕ್ಕು ಹಿಡಿದಿವೆ. ಫ್ರೆಶ್‌ಅಪ್‌ ರೂಮ್‌ನಲ್ಲಿನ ಸಾಮಗ್ರಿಗಳು ಹಾಳಾಗಿವೆ. ಇಲ್ಲಿನ ಸಿಬ್ಬಂದಿಗೆ ಸರಿಯಾದ ಸಂಬಳ ಇಲ್ಲದ ಕಾರಣ ನಿರ್ವಹಣೆ ಕೊರತೆ ಕಾಡುತ್ತಿದೆ. ಹೀಗಾಗಿ ಗೌರವ ಘಟಕದ ದುರಸ್ತಿ ಮಾಡಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಹಂದಿಗಳ ಕಾಟ: ಸಾರ್ವಜನಿಕರಿಗೆ ಉಪಯೋಗಕ್ಕೆ ನಿರ್ಮಿಸಲಾಗಿರುವ ಗೌರವ ಘಟಕದ ಪಕ್ಕದಲ್ಲಿ ಶೌಚಾಲಯದ ನೀರು ಸಂಗ್ರಹಗೊಂಡು ದುರ್ನಾತ ಬೀಡುತ್ತಿದೆ. ಹಂದಿಗಳ ಹಾವಳಿ ಜೋರಾಗಿದೆ. ಸಾಂಕ್ರಾಮಿಕ ರೋಗದ ಭೀತಿ ಕಾಡುತ್ತಿದೆ. ಅಧಿ ಕಾರಿಗಳು ಶೌಚಾಲಯದ ನೀರು ಬೇರೆ ಹೋಗಲು ಕೂಡಲೇ ವ್ಯವಸ್ಥೆ ಮಾಡಬೇಕು. ಚರಂಡಿಗಳನ್ನು ದುರಸ್ತಿ ಮಾಡಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಗದಗ-ಬೆಟಗೇರಿ ಅವಳಿ ನಗರದ ಲ್ಲಿರುವ ಗೌರವ ಘಟಕಗಳು ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದೆ. ಕೂಡಲೇ ಮೂಲಸೌಲಭ್ಯ ಕಲ್ಪಿಸಬೇಕು. ಸಾರ್ವಜನಿಕರಿಗೆ ಉಪಯೋಗ ಮಾಡಲು ಅವಕಾಶ ನೀಡಬೇಕು.  -ಪರಶುರಾಮ ರಾಮಣ್ಣವರ ಗದಗ ನಿವಾಸಿ

ಗದಗ-ಬೆಟಗೇರಿ ಅವಳಿ ನಗರದಲ್ಲಿರುವ ಗೌರವ ಘಟಕಗಳು ಸ್ಥಗಿತಗೊಂಡಿರುವುದು ನನ್ನ ಗಮನಕ್ಕಿಲ್ಲ. ಒಂದು ವೇಳೆ ಸ್ಥಗಿತಗೊಂಡಿದ್ದರೆ ಪುನರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಖಾಸಗಿ ವ್ಯಕ್ತಿಯೊಬ್ಬರು ಗೌರವ ಘಟಕಗಳ ನಿರ್ವಹಣೆ ಮಾಡುತ್ತಿದ್ದು, ಸಾರ್ವಜನಿಕರಿಗೆ ಅನಾನುಕೂಲ ಆಗದಂತೆ ನಿಗಾ ವಹಿಸಲು ನಿರ್ದೇಶಿಸುತ್ತೇನೆ.  –ಉಷಾ ದಾಸರ, ನಗರಸಭೆ ಅಧ್ಯಕ್ಷೆ, ಗದಗ-ಬೆಟಗೇರಿ

ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.