ಹದಿಹರೆಯದವರಲ್ಲಿ ದೈಹಿಕ ಬದಲಾವಣೆ ಸಹಜ
Team Udayavani, Oct 14, 2021, 3:06 PM IST
ಗದಗ: ವಿದ್ಯಾರ್ಥಿಗಳಲ್ಲಿ ಯಾವುದೇ ರೀತಿಯಮಾನಸಿಕ ಸಮಸ್ಯೆಗಳಿದ್ದರೆ ಮಾನಸಿಕ ಆರೋಗ್ಯಅಧಿ ಕಾರಿಗಳನ್ನು ಭೇಟಿಯಾಗಿ ಪರಿಹಾರ ಕಂಡುಕೊಳ್ಳಬಹುದು. ಹದಿಹರೆಯದವರಲ್ಲಿ ದೈಹಿಕ ಬದಲಾವಣೆಗಳು ಆಗುತ್ತವೆ. ಆದಕಾರಣಸಂಕುಚಿತಗೊಳ್ಳದೇ ನಿರ್ಭಯವಾಗಿ ವೈದ್ಯಾಧಿ ಕಾರಿಗಳನ್ನು ಭೇಟಿ ಮಾಡಿ ಸಮಸ್ಯೆಬಗೆಹರಿಸಿಕೊಳ್ಳಬೇಕು ಎಂದು ಡಿಎಚ್ಒ ಡಾ|ಸತೀಶಬಸರೀಗಿಡದ ಹೇಳಿದರು.
ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕಆರೋಗ್ಯ ಕಾರ್ಯಕ್ರಮ ವಿಭಾಗ, ವೈದ್ಯಕೀಯವಿಜ್ಞಾನಗಳ ಸಂಸ್ಥೆಯ ಮಾನಸಿಕ ಆರೋಗ್ಯ ವಿಭಾಗ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರದಿಂದನಗರದ ಕೆಎಲ್ಇ ಸಂಸ್ಥೆಯ ಜ|ತೋಂಟದಾರ್ಯಮಹಾವಿದ್ಯಾಲಯದಲ್ಲಿ ಬುಧವಾರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕಆರೋಗ್ಯ ಕೇಂದ್ರಗಳಲ್ಲಿ ಹದಿ-ಹರೆಯದವರಿಗೆ ಪ್ರತಿಸೋಮವಾರ, ಗುರುವಾರ ಚಿಕಿತ್ಸೆ ನೀಡುತ್ತಾರೆ.ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕುರಿತುವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರ ಸದಸ್ಯಕಾರ್ಯದರ್ಶಿ ಎಸ್.ಜಿ. ಸಲಗರೆ ಮಾತನಾಡಿ,ವಿದ್ಯಾರ್ಥಿಗಳು ಕೇವಲ ಅಂಕ ಗಳಿಸಲುಸೀಮಿತರಾಗದೇ, ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಬೇಕು.
ಮಾನಸಿಕ ತೊಂದರೆಗಳನ್ನು ಎದುರಿಸುತ್ತಿರುವವಿದ್ಯಾರ್ಥಿಗಳು ಮನೋವೈದ್ಯರನ್ನು ಸಂಪರ್ಕಿಸಬೇಕುಎಂದು ಸಲಹೆ ನೀಡಿದರು.ಮನೋವೈದ್ಯ ಡಾ|ತಾರಾಚಂದ ನಾಯ್ಕಮಾತನಾಡಿ, ವಿದ್ಯಾರ್ಥಿಗಳಿಗೆ ಮೊಬೈಲ್, ಲ್ಯಾಪ್ಟಾಪ್, ಕಂಪ್ಯೂಟರ್ನಿಂದ ಒಳ್ಳೆಯ ಜ್ಞಾನಪಡೆದುಕೊಳ್ಳುವುದಕ್ಕೆ ಅವಕಾಶ ಇರುತ್ತದೆ. ಅದರಉಪಯೋಗ ಪಡೆದುಕೊಳ್ಳಲು ಹೇಳಿದರು.ಮನೋವೈದ್ಯ ಡಾ|ಸೋಮಶೇಖರ ಬಿಜ್ಜಳಅವರು ಮಾನಸಿಕ ತೊಂದರೆಗಳ ಲಕ್ಷಣಗಳು ಹಾಗೂನಿವಾರಣೆ ಕುರಿತು ಉಪನ್ಯಾಸ ನೀಡಿದರು.ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪಿ.ಜಿ.ಪಾಟೀಲ್ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಮಾನಸಿಕ ಕಾರ್ಯಕ್ರಮ ಅ ಧಿಕಾರಿಡಾ|ರಾಜೇಂದ್ರ ಬಸರೀಗಿಡದ, ಜಿಲ್ಲಾ ಆರೋಗ್ಯಶಿಕ್ಷಣಾಧಿ ಕಾರಿ ರೂಪಸೇನ ಸಿ.ಚವ್ಹಾಣ,ಉಪಜಿಲ್ಲಾ ಆರೋಗ್ಯ ಶಿಕ್ಷಣಾ ಧಿಕಾರಿ ಉಮೇಶಕರಮುಡಿ, ಗೀತಾ ಕಾಂಬಳೆ, ಶ್ರೀಧರ ಎಂ.ಸಿ.,ವಿನಾಯಕ ಕಾಳೆ, ನಾಗರಾಜ ಜೋಗೀನ್,ವಿನಾಯಕ ವಾಗಮೋರೆ, ಶೋಭಾ ವಡ್ಡರಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ