ಬೆಳ್ಳಂಬೆಳಗ್ಗೆ ಪೊಲೀಸರ ಕಾರ್ಯಾಚರಣೆ: ಅನುಮಾನಾಸ್ಪದ ವ್ಯಕ್ತಿಗಳ ಮನೆಗಳ ಮೇಲೆ ಪೊಲೀಸರ ದಾಳಿ: ಮಾರಕಾಸ್ತ್ರಗಳ ಪರಿಶೀಲನೆ
Team Udayavani, Dec 9, 2022, 8:52 AM IST
ಗದಗ: ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟರ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ(ಡಿ.9) ನಗರದ ವಿವಿಧೆಡೆ ಅನುಮಾನಾಸ್ಪದ ವ್ಯಕ್ತಿಗಳ ಮನೆಗಳ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳ ಪರಿಶೀಲನೆ ನಡೆಸಿದರು.
ಗದಗ-ಬೆಟಗೇರಿ ಅವಳಿ ನಗರದ ವಿವಿಧೆಡೆ ಚಾಕು ಇರಿತ ಪ್ರಕರಣ ಸೇರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ನಗರದ ಕಮ್ಮಾರಸಾಲು, ರಂಗನವಾಡ, ತೆಗ್ಗಿನ ಪ್ಲಾಟ್ ಸೇರಿ ಹಲವು ಪ್ರದೇಶಗಳ ಮನೆಗಳ ಮೇಲೆ ಪೊಲೀಸರು ಮಾರಕಾಸ್ತ್ರಗಳನ್ನು ಪರಿಶೀಲಿಸಿದರು.
ನಗರದಲ್ಲಿ ಕಳೆದೊಂದು ವಾರದಲ್ಲಿ ಎರಡು ಪ್ರದೇಶಗಳಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರು ಗಾಯಗೊಂಡಿದ್ದರು. ಐದಕ್ಕೂ ಹೆಚ್ಚು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು.
ಸಿಪಿಐ ಬಿ.ಜಿ. ಸುಬ್ಬಾಪೂರಮಠ ಸೇರಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು