ಶರಣರ ಚಿಂತನೆಗಳೇ ಸಂವಿಧಾನ ಬೇರು


Team Udayavani, Jan 31, 2019, 9:34 AM IST

31-january-19.jpg

ಗದಗ: 12ನೇ ಶತಮಾನದಲ್ಲಿ ಬಸವಾದಿ ಶರಣರು ಪ್ರತಿಪಾದಿಸಿದ ಅಂಶಗಳೇ ಭಾರತ ಸಂವಿಧಾನದ ತಾಯಿ ಬೇರುಗಳು. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಂವಿಧಾನದ ಮೂಲ ಆಶಯವಾಗಿದೆ ಎಂದು ಭೈರನಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಹೇಳಿದರು.

ಲಿಂಗಾಯತ ಪ್ರಗತಿಶೀಲ ಸಂಘದಿಂದ ನಗರದ ಎಡೆಯೂರು ಜ.ತೋಂಟದಾರ್ಯ ಮಠದಲ್ಲಿ ನಡೆದ 2417ನೇ ಶಿವಾನುಭವದಲ್ಲಿ ಅವರು ಮಾತನಾಡಿದರು. ಸಂವಿಧಾನ ಜಾರಿಗೆ ಬಂದು 70 ವರ್ಷಗಳಾದರೂ ದೇಶದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಅಸಮಾನತೆ, ತಾರತಮ್ಯಗಳು ನಿವಾರಣೆಯಾಗಿಲ್ಲ.

ಪ್ರಜಾಪ್ರಭುತ್ವ ಕಲ್ಪನೆ ಸಾಕಾರಗೊಳ್ಳಲು ಸರ್ವರೂ ಕಾಯಕ, ದಾಸೋಹದಂತಹ ವಿಚಾರಗಳನ್ನು ಆಚರಣೆಗೆ ತರಬೇಕು. ಪ್ರಜ್ಞಾಪೂರ್ವಕ ಅರಿವಿನೊಂದಿಗೆ ಬದುಕಿದಾಗ ಮಾತ್ರ ಸಕಲರು ಸಂತೋಷದಿಂದ ಬಾಳಲು ಸಾಧ್ಯವಾಗುತ್ತದೆ. ಸಂವಿಧಾನದ ಬಗೆಗೆ ಯುವಪೀಳಿಗೆಯನ್ನು ಜಾಗೃತಿಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಹೇಳಿದರು.

‘ನಮ್ಮ ಸಂವಿಧಾನ ನಮ್ಮ ಹೆಮ್ಮೆ’ ವಿಷಯವಾಗಿ ಕೆ.ಎಸ್‌.ಎಸ್‌. ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ| ಡಿ.ಬಿ.ಗವಾನಿ ಉಪನ್ಯಾಸ ನೀಡಿ, ಸಮಾನತೆ, ಸೋದರತೆ ಮತ್ತು ಮಾನವೀಯತೆ, ಭಾತೃತ್ವ ಭಾವನೆಯೊಂದಿಗೆ ದೇಶದ ಎಲ್ಲ ವರ್ಗದ ಜನ ಐಕ್ಯತೆ ಸಾಧಿಸಬೇಕು. ಭಾರತದ ಸಂವಿಧಾನ ವಿಶ್ವಮಾನ್ಯತೆ ಹೊಂದಿದೆ. ಸ್ವಾತಂತ್ರ್ಯ, ಸಮಾನತೆ, ಭಾತೃತ್ವ, ಸಮಾಜವಾದಿ ಮತ್ತು ಜಾತ್ಯತೀತ ಭಾವನೆಗಳನ್ನು ಮೂಡಿಸಿ ಭವ್ಯ ಭಾರತವನ್ನು ಕಟ್ಟುವ ಆಶಯವನ್ನು ಸಂವಿಧಾನ ಹೊಂದಿದೆ ಎಂದರು.

ಗಣರಾಜ್ಯೋತ್ಸವದ ಅಂಗವಾಗಿ ಬಸವೇಶ್ವರ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಜೆ.ಸಿ. ಪ್ರೌಢಶಾಲೆ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತಗಾಯನ ಹಾಗೂ ನೃತ್ಯ ಕಾರ್ಯಕ್ರಮಗಳು ಜರುಗಿದವು.

ಸಾವಿತ್ರಿ ಲಮಾಣಿ ಅವರಿಂದ ಜನಪದ ಸಂಗೀತ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ತೋಂಟದ ಸಿದ್ಧಲಿಂಗ ಶ್ರೀಗಳ ಭಾವಚಿತ್ರ ಅನಾವರಣ ಮಾಡಲಾಯಿತು. ದಾನಪ್ಪ ತಡಸದ, ಹಬೀಬ, ವಿವೇಕಾನಂದಗೌಡ ಪಾಟೀಲ, ಜಿ.ಪಿ. ಕಟ್ಟಿಮನಿ, ಎಸ್‌.ಯು. ಸಜ್ಜನಶೆಟ್ಟರ, ಅನ್ನಪೂರ್ಣಕ್ಕ ಬಡಿಗಣ್ಣವರ, ಶಿವಕುಮಾರ ರಾಮನಕೊಪ್ಪ, ಮಂಜುನಾಥ ಅಸುಂಡಿ, ವಿಜಯಕುಮಾರ ಹಿರೇಮಠ, ಶರಣಬಸಪ್ಪ ಅಂಗಡಿ, ಶಿವನಗೌಡ ಗೌಡರ, ಮಲ್ಲಿಕಾರ್ಜುನ ಐಲಿ ಇದ್ದರು. ಶೇಖಣ್ಣ ಕವಳಿಕಾಯಿ ಸ್ವಾಗತಿಸಿದರು. ಮಂಜುಳಾ ಹಾಸಲಕರ ನಿರೂಪಿಸಿದರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.