ಗದಗ: ವಿಶ್ವಮಾನವತೆಯ ಶ್ರೇಷ್ಠ ಸಂತ ಡಾ|ಸಿದ್ಧಲಿಂಗ ಶ್ರೀ

ಶುದ್ಧ ಗಾಳಿ ನೀಡುವ ಕಪ್ಪತಗುಡ್ಡದ ಉಳಿವಿಗೆ ಶ್ರೀಗಳು ಅವಿರತ ಹೋರಾಟ ಮಾಡಿದ್ದರು

Team Udayavani, Feb 22, 2023, 6:36 PM IST

ಗದಗ: ವಿಶ್ವಮಾನವತೆಯ ಶ್ರೇಷ್ಠ ಸಂತ ಡಾ|ಸಿದ್ಧಲಿಂಗ ಶ್ರೀ

ಗದಗ: ಸಮಾಜದಲ್ಲಿ ಅಶಾಂತಿಯನ್ನೆಬ್ಬಿಸುವ, ಜನರಲ್ಲಿ ವೈಮನಸ್ಸು ಮೂಡಿಸುವ ಭಿನ್ನತೆಯ ಗೋಡೆಗಳನ್ನು ಕೆಡವಿ ಹಾಕಿದ ಲಿಂಗೈಕ್ಯ ಡಾ| ತೋಂಟದ ಸಿದ್ಧಲಿಂಗ ಶ್ರೀಗಳು ವಿಶ್ವಮಾನವ ತತ್ವ ಸಾರಿದ ಶ್ರೇಷ್ಠ ಸಂತರಾಗಿದ್ದರು ಎಂದು ಖ್ಯಾತ ವಿಮರ್ಶಕಿ ಎಂ.ಎಸ್‌. ಆಶಾದೇವಿ
ಹೇಳಿದರು.

ನಗರದ ತೋಂಟದಾರ್ಯ ಮಠದಲ್ಲಿ ಲಿಂಗೈಕ್ಯ ಡಾ| ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳವರ 74ನೇ ಜಯಂತಿ ಅಂಗವಾಗಿ ಮಂಗಳವಾರ ಜರುಗಿದ
ಭಾವೈಕ್ಯತಾ ದಿನಾಚರಣೆ, ಗ್ರಂಥಗಳ ಬಿಡುಗಡೆ ಹಾಗೂ ಸನ್ಮಾನ ಸಮಾರಂಭದಲ್ಲಿ ತೋಂಟದ ಶ್ರೀಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಲಿಂ|ಡಾ| ತೋಂಟದ ಸಿದ್ಧಲಿಂಗ ಶ್ರೀಗಳನ್ನು ನಾನು ಒಂದೇ ಬಾರಿ ಭೇಟಿಯಾಗಿದ್ದರೂ ಅವರ ಸರಳ ವ್ಯಕ್ತಿತ್ವದಿಂದ ಪ್ರಭಾವಕ್ಕೆ ಒಳಗಾಗಿದ್ದೆ. ನೇರ ಮಾತುಗಳಿಗೆ ಅವರು ಹೆಸರಾಗಿದ್ದರೂ, ಅವರ ವ್ಯಕ್ತಿತ್ವದ ಮೂಲ ಧಾತು ತಾಯ್ತನವಾಗಿತ್ತು. ಧರ್ಮಗಳ ಆಧಾರದಲ್ಲಿ ಅಲ್ಲ, ಭಾರತೀಯತೆಯ ಆಧಾರದಲ್ಲಿ ಒಗ್ಗೂಡಬೇಕೆಂದು ಕರೆ ನೀಡಿದ್ದ ಅವರು, ಸಹಿಷ್ಣುತೆ-ಸಮಾನತೆ ತತ್ವಗಳ ಪ್ರಬ ಪ್ರತಿಪಾದಕರಾಗಿದ್ದರು. ಅವರ ಜೀವನವೇ ಅವರ ಸಂದೇಶವಾಗಿದ್ದು, ತಮ್ಮ ಕಾಲದ ಅಗತ್ಯತೆಗಳನ್ನು-ಬಿ ಕ್ಕಟ್ಟುಗಳನ್ನು ಅರ್ಥ ಮಾಡಿಕೊಂಡು ಸುಧಾರಣೆಗೆ ಶ್ರಮಿಸಿದ್ದ ಅಪರೂಪದ ಸ್ವಾಮೀಜಿಗಳಾಗಿದ್ದರು ಎಂದು ಸ್ಮರಿಸಿದರು.

ಮಾಜಿ ಸಂಸದ ಐ.ಜಿ. ಸನದಿ ಮಾತನಾಡಿ, ಸರ್ವಧರ್ಮ ಸಮನ್ವಯತೆಯ ಸೂತ್ರ ಅಳವಡಿಸಿಕೊಂಡಿದ್ದ ತೋಂಟದ ಶ್ರೀಗಳು ಪ್ರತಿಯೊಬ್ಬರನ್ನೂ ಅರ್ಥ ಮಾಡಿಕೊಳ್ಳಬಲ್ಲ ಸೂಕ್ಷ್ಮ ಮತಿಗಳಾಗಿದ್ದರು. ಪುಸ್ತಕದಿಂದ ಆತ್ಮಾನಂದವಾಗುತ್ತದೆ ಎನ್ನುತ್ತಿದ್ದ ಅವರು, ಹಾರ-ತುರಾಯಿಗಳ ಜೊತೆಗೆ ಗ್ರಂಥ ನೀಡುವ ಪರಂಪರೆಗೆ ನಾಂದಿ ಹಾಡಿದರು. ಸದ್ಯ ಬಿಡುಗಡೆಗೊಂಡಿರುವ ಪುಸ್ತಕಗಳು ಪುಷ್ಪಗಳಾಗಿದ್ದು, ಅದರ ಸುಗಂಧವನ್ನು ಪಸರಿಸುವ ಹೊಣೆ ಓದುಗರದ್ದಾಗಿದೆ ಎಂದರು.

ಹಂದಿಗುಂದ ಸಿದ್ಧೇಶ್ವರ ಮಠದ ಶಿವಾನಂದ ಮಹಾಸ್ವಾಮೀಜಿ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನ್ಯಾಯ, ನಿಷ್ಠುರಿ ದಾಕ್ಷಿಣ್ಯಪರನಲ್ಲ ಎಂಬ ವಚನಕ್ಕೆ ವ್ಯಾಖ್ಯಾನರಂತಿದ್ದ ಸಿದ್ಧಲಿಂಗ ಶ್ರೀಗಳು ತಪ್ಪನ್ನು ತಪ್ಪೆಂದು ಖಂಡಿಸುವ ಎದೆಗಾರಿಕೆ ಉಳ್ಳವರಾಗಿದ್ದರು. 12ನೇ ಶತಮಾನದ ಮೋಳಿಗೆ ಮಾರಯ್ಯ, ಅಂಬಿಗರ ಚೌಡಯ್ಯನವರಂತೆ ದಿಟ್ಟ ವ್ಯಕ್ತಿತ್ವ ಹೊಂದಿದ್ದ ಶ್ರೀಗಳು, ನಾಡಿನ ಭಾವೈಕ್ಯತೆಯ ಬೇರಿಗೆ ವಿಶ್ವಾಸದ ನೀರೆರೆದವರಾಗಿದ್ದರು ಎಂದರು.

ಮುಂಡರಗಿ ತೋಂಟದಾರ್ಯ ಶಾಖಾ ಮಠದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಮಾತನಾಡಿ, ಬಸವಣ್ಣನ ಆಶಯಗಳು ನೇಪಥ್ಯಕ್ಕೆ ಸರಿದಿದ್ದ ಸಮಯ ದಲ್ಲಿ ಪೀಠವನ್ನೇರಿದ ಸಿದ್ಧಲಿಂಗ ಶ್ರೀಗಳು ತಮ್ಮ ಸತತ ಪರಿಶ್ರಮದಿಂದ ಬಸವಣ್ಣನ ಆಶಯಗಳಿಗೆ ಸರ್ವವ್ಯಾಪಿ ಆಯಾಮ ನೀಡಿದರು. ಸದ್ಯ ದೇಶದಲ್ಲೇ ಗುಣಮಟ್ಟದ ಶುದ್ಧ ಗಾಳಿ ನೀಡುವ ಕಪ್ಪತಗುಡ್ಡದ ಉಳಿವಿಗೆ ಶ್ರೀಗಳು ಅವಿರತ ಹೋರಾಟ ಮಾಡಿದ್ದರು. ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಜಯಂತಿಯನ್ನು ಶಿಕ್ಷಕರ ದಿನವನ್ನಾಗಿ ಆಚರಿಸುವಂತೆ ಹೇಳಿಕೆ ನೀಡಿ ಹಲವರ ವಿರೋಧಕ್ಕೂ ಗುರಿಯಾಗಿದ್ದರು. ಸರ್ವತೋಮುಖ ವ್ಯಕ್ತಿತ್ವ ಹೊಂದಿದ್ದ ಅವರು ಇತರೆ ಸ್ವಾಮೀಜಿಗಳಿಗೆ ಸ್ಫೂರ್ತಿ ಹಾಗೂ ಶಕ್ತಿಯಾಗಿದ್ದರು ಎಂದರು.

ಗ್ರಂಥಗಳ ಲೋಕಾರ್ಪಣೆ: ಶಶಿಧರ ತೋಡಕರ ಸಂಪಾದಿಸಿದ ಸಮಾಜಮುಖೀ ಸಂಪುಟ-2, ಡಿ. ರಾಮನಮಲಿ ಸಂಪಾದಿಸಿದ ಮೌನಸಾಧಕ, ಡಾ| ಪಾರ್ವತಿ ಹಾಲಭಾವಿ ಬರೆದ ಡಿ.ವ್ಹಿ. ಹಾಲಭಾವಿ, ಡಾ| ವೀರಣ್ಣ ದಂಡೆ ರಚಿಸಿದ ಸ್ಥಾವರ ಜಂಗಮ, ಡಾ| ಮಹೇಶ ಗುರುನಗೌಡರ ಬರೆದ ಸಿದ್ಧಣ್ಣ ಮಸಳಿ, ಡಾ|ಎಸ್‌.ಎ. ಪಾಲೇಕರ ವಿರಚಿತ ಬಸವೇಶ್ವರಾಸ್‌ ಕಾನ್ಸೆಪ್ಟ್ ಆಫ್‌ ಹ್ಯುಮಾನಿಜಮ್‌ ಆಂಡ್‌ ಹ್ಯುಮನ್‌ ರೈಟ್ಸ್‌ ಗ್ರಂಥಗಳು ಲೋಕಾರ್ಪಣೆಗೊಂಡವು.

ಡಾ| ತೋಂಟದ ಸಿದ್ಧರಾಮ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಭೈರನಹಟ್ಟಿ ಶಾಂತಲಿಂಗ ಶ್ರೀಗಳು, ಅರಸಿಕೆರೆ ಶಾಂತಲಿಂಗ ದೇಶಿಕೇಂದ್ರ ಶ್ರೀಗಳು, ಶಿರೋಳದ ಗುರುಬಸವ ಶ್ರೀಗಳು, ಮಾಜಿ ಸಚಿವ ಎಸ್‌.ಎಸ್‌. ಪಾಟೀಲ, ಅಮರೇಶ ಅಂಗಡಿ ಇದ್ದರು. ಕಾರ್ಯಕ್ರಮಕ್ಕೂ ಮುನ್ನ ಬಸವೇಶ್ವರ ಪುತ್ಥಳಿಯಿಂದ ಶ್ರೀಮಠದವರೆಗೂ ಭಾವೈಕ್ಯತಾ ಯಾತ್ರೆ ನೆರವೇರಿತು. ತೋಂಟದಾರ್ಯ ಮಠದ ಆಡಳಿತಾಧಿ ಕಾರಿ ಎಸ್‌. ಎಸ್‌. ಪಟ್ಟಣಶೆಟ್ಟರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜ ಸೇವಕರಾದ ತಂಬ್ರಹಳ್ಳಿಯ ಅಕ್ಕಿ ಕೊಟ್ರಪ್ಪ ದಂಪತಿಯನ್ನು ಸನ್ಮಾನಿಸಲಾಯಿತು. ಕೊಟ್ರೇಶ ಮೆಣಸಿನಕಾಯಿ ಹಾಗೂ ವೀರನಗೌಡ ಮರಿಗೌಡ್ರ ನಿರೂಪಿಸಿದರು.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.