ಗಜೇಂದ್ರಗಡದಲ್ಲಿಂದು ಅಮರ್‌ ಜವಾನ್‌ ಲೋಕಾರ್ಪಣೆ

ದೆಹಲಿ ಇಂಡಿಯಾ ಗೇಟ್‌ನಲ್ಲಿರುವ ಸ್ಮಾರಕ ಮಾದರಿ; ಮಾಜಿ ಸೈನಿಕರ ಶ್ರಮದಿಂದ ನಿರ್ಮಾಣ

Team Udayavani, Jul 26, 2022, 4:38 PM IST

16

ಗಜೇಂದ್ರಗಡ: ಯುವಕರಲ್ಲಿ ರಾಷ್ಟ್ರಾಭಿಮಾನ, ಸೇನೆಯ ಮಹತ್ವ ಸಾರುವ ನಿಟ್ಟಿನಲ್ಲಿ ದೆಹಲಿ ಇಂಡಿಯಾ ಗೇಟ್‌ನಲ್ಲಿರುವ “ಅಮರ್‌ ಜವಾನ್‌’ ಸ್ಮಾರಕ ಮಾದರಿಯಲ್ಲಿಯೇ ಮಾಜಿ ಸೈನಿಕರ ಪರಿಶ್ರಮದಿಂದ ಪಟ್ಟಣದ ಸೈನಿಕ ನಗರದಲ್ಲಿ “ಅಮರ್‌ ಜವಾನ್‌’ ಸ್ಮಾರಕ ತಲೆ ಎತ್ತಿದೆ.

ಪಟ್ಟಣ ದೇಶಕ್ಕಾಗಿ ಹೋರಾಡಿದ ಹಲವಾರು ಸೈನಿಕರ ತವರೂರಾಗಿದೆ. ಸ್ವಾತಂತ್ರ್ಯ ಸಂಗ್ರಾಮಕ್ಕೆ ಇಲ್ಲಿಯ ಹೋರಾಟಗಾರರ ಕೊಡುಗೆ ಅನನ್ಯವಾಗಿದೆ. ಇಂತಹ ಪವಿತ್ರ-ಪುಣ್ಯ ನೆಲದಲ್ಲಿ ಸೈನಿಕರ ಸೇವೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಪಟ್ಟಣದ ಸೈನಿಕ ನಗರದ 21 ಗುಂಟೆ ಜಮೀನಿನಲ್ಲಿ ಉದ್ಯಾನವನ ನಿರ್ಮಿಸಲಾಗಿದ್ದು, ಇಲ್ಲಿ “ಅಮರ್‌ ಜವಾನ್‌’ ಸ್ಮಾರಕ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.

ಸರ್ಕಾರದಿಂದ ನಯಾಪೈಸೆ ಇಲ್ಲ: ಯುವಕರಿಗೆ ರಾಷ್ಟ್ರಾಭಿಮಾನ ತುಂಬುವ ನಿಟ್ಟಿನಲ್ಲಿ ಗಜೇಂದ್ರಗಡದ ಮಾಜಿ ಸೈನಿಕರು ಸರ್ಕಾರದಿಂದ ನಯಾಪೈಸೆ ಅನುದಾನ ಪಡೆಯದೇ ಸ್ವಂತ ಅಂದಾಜು 10 ಲಕ್ಷ ರೂ. ವೆಚ್ಚದಲ್ಲಿ ಅಮರ್‌ ಜವಾನ್‌ ಸ್ಮಾರಕ ನಿರ್ಮಿಸಿದ್ದಾರೆ.

ಯುವಕರಿಗೆ ಸ್ಫೂರ್ತಿ: ಮಾಜಿ ಸೈನಿಕರು ಸೇರಿ ಸಂಘ ಸ್ಥಾಪಿಸುವುದರೊಂದಿಗೆ “ಅಮರ್‌ ಜವಾನ್‌’ ಸ್ಮಾರಕವನ್ನೂ ನಿರ್ಮಿಸಲಾಗಿದೆ. ವಿದ್ಯಾರ್ಥಿಗಳು, ಯುವಕರಲ್ಲಿ ಸೈನಿಕರ ಬಗ್ಗೆ ಗೌರವ ಹೆಚ್ಚಿಸಲು, ಸೈನ್ಯಕ್ಕೆ ಸೇರುವಂತೆ ಸ್ಫೂರ್ತಿ ನೀಡುವ ಸಲುವಾಗಿ “ಅಮರ್‌ ಜವಾನ್‌; ನಿರ್ಮಿಸಲಾಗಿದೆ ಎನ್ನುತ್ತಾರೆ ಮಾಜಿ ಸೈನಿಕರು.

ಆಕರ್ಷಕ ಉದ್ಯಾನವನ: ಉದ್ಯಾನದ ಪ್ರವೇಶದ್ವಾರದ ಎಡಭಾಗದ ಬಳಿ ಸ್ಮಾರಕ ಕೆಲಸ ಈಗಾಗಲೇ ಪೂರ್ಣಗೊಂಡಿದ್ದು, ದೆಹಲಿ ಇಂಡಿಯಾ ಗೇಟ್‌ನಲ್ಲಿರುವ ಮಾದರಿಯಲ್ಲಿದೆ. ಗ್ರಾನೈಟ್‌ ಬಳಸಿ ವಿಜಯಸ್ತಂಭ ನಿರ್ಮಿಸಲಾಗಿದೆ. ಸುತ್ತಲೂ ಹುಲ್ಲಿನ ಹಾಸಿಗೆ ಇದ್ದು, ವಿವಿಧ ತಳಿಯ ಹೂ ಬಳ್ಳಿಗಳು ಆಕರ್ಷಿಸುತ್ತಿವೆ.

ವೀರ ಯೋಧರಿಗೆ ಗೌರವ ಸಮರ್ಪಿಸುವ ಸ್ಮಾರಕ ನಗರದಲ್ಲಿ ಇರಲಿಲ್ಲ. ವಿಶೇಷ ಸಂದರ್ಭಗಳಲ್ಲಿ ಗೌರವ ಸಮರ್ಪಿಸಲು ಸ್ಮಾರಕ ಲೋಕಾರ್ಪಣೆ ಮಾಡುತ್ತಿರುವುದು ಸಂತಸವಾಗಿದೆ ಎನ್ನುತ್ತಾರೆ ನಿವೃತ್ತ ಸೈನಿಕರು.

ಯುವಕರಲ್ಲಿ ವೀರಯೋಧರ ಶೌರ್ಯ, ಸಾಹಸ, ದೇಶಾಭಿಮಾನ ಮೂಡಿಸುವ ಕಾರ್ಯವಾಗಬೇಕು ಎನ್ನುವ ಉದ್ದೇಶದಿಂದ ಮಾಜಿ ಸೈನಿಕರೆಲ್ಲರ ಆರ್ಥಿಕ ಸಹಕಾರದಿಂದ “ಅಮರ್‌ ಜವಾನ್‌’ ನಿರ್ಮಿಸಲಾಗಿದೆ. -ಕುಮಾರೇಶ ಗಡಾದ, ಮಾಜಿ ಸೈನಿಕರ ಸಂಘ ಅಧ್ಯಕ್ಷ

 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.