ಗಜೇಂದ್ರಗಡ ಉದ್ಯಾನವನ ಅವ್ಯವಸ್ಥೆ ಆಗರ


Team Udayavani, Feb 4, 2020, 3:31 PM IST

gadaga-tdy2

ಗಜೇಂದ್ರಗಡ: ಪಟ್ಟಣದ ಹೊರವಲಯದ ಗುಡ್ಡದ ಬಳಿ ಪುರಸಭೆಯಿಂದ ನಿರ್ಮಿಸಿರುವ ಉದ್ಯಾನವನ ಸೂಕ್ತ ನಿರ್ವಹಣೆ ಇಲ್ಲದೇ ಅವ್ಯವಸ್ಥೆಯ ಆಗರವಾಗಿದ್ದು, ವಾಯು ವಿಹಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ. ಕೂಡಲೇ ಪುರಸಭೆಯವರು ಉದ್ಯಾನವನ ಪುನಶ್ಚೇತಕ್ಕೆ ಮುಂದಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸ್ಥಳೀಯ ಇಂಗು ಕೆರೆಯ ಬುಡದಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿರುವ ಉದ್ಯಾನವನ ಗಜೇಂದ್ರಗಡ ಜನತೆಗೆ ಅಚ್ಚು ಮೆಚ್ಚಿನ ತಾಣವಾಗಿದೆ. ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ನಿತ್ಯ ಗಾರ್ಡನ್‌ ಗೆ ವಾಯು ವಿಹಾರಕ್ಕಾಗಿ ಹಲವಾರು ಜನರು ಆಗಮಿಸುತ್ತಾರೆ. ಆದರೆ ಪುರಸಭೆ ಗಾರ್ಡನನ್ನು ಸಂಪೂರ್ಣ ನಿರ್ಲಕ್ಷಿಸಿದ ಪರಿಣಾಮ ಸ್ಮಶಾನ ರೀತಿಯಲ್ಲಿ ಮಾರ್ಪಟ್ಟಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿದ್ದಾರೆ.

ಉದ್ಯಾನವನದಲ್ಲಿನ ಹಲವು ಪ್ರಬೇಧಗಳ ಗಿಡಗಳಿಗೆ ಸಮರ್ಪಕವಾಗಿ ನೀರುಣಿಸದ ಪರಿಣಾಮ ಗಿಡಗಳು ಸಂಪೂರ್ಣ ಒಣಗಿವೆ. ಜೊತೆಗೆ ಎಲ್ಲೆಂದರಲ್ಲಿಕಸದ ರಾಶಿಗಳು ರಾರಾಜಿಸುತ್ತಿವೆ. ಮಕ್ಕಳ ಆಟಿಕೆ ಸಾಮಾನುಗಳಂತೂ ದುರಸ್ತಿಗೊಂಡು ಚಿಣ್ಣರಿಗೆ ನಿರಾಸೆಯನ್ನುಂಟು ಮಾಡುತ್ತಿವೆ. ಉದ್ಯಾನವನಕ್ಕೆ ಓರ್ವ ಕಾವಲುಗಾರ ಇದ್ದರೂ ಉದ್ಯಾನವನದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಗಾರ್ಡನ್‌ ಗೆ ಆಗಮಿಸುವ ವೃದ್ಧರು, ಚಿಕ್ಕ ಮಕ್ಕಳು ಇಂತಹ ದೃಶ್ಯ ಕಂಡು ಮುಜುಗರಕ್ಕೆ ಒಳಗಾಗುವಂತಾಗಿದೆ. ಉದ್ಯಾನವನ ತುಂಬೆಲ್ಲಾ ಸಿಗರೇಟ್‌, ಮದ್ಯದ ಬಾಟಲಿಗಳು ರಾರಾಜಿಸುತ್ತಿವೆ.

ಉದ್ಯಾನವದಲ್ಲಿ ಹುಲ್ಲಿನ ಹಾಸಿಗೆ ಮಾಯವಾಗಿ ಸುಟ್ಟ ಕರಿ ನೆಲದ ಹಾಸಿಗೆಯಾಗಿರುವುದರಿಂದ ಉದ್ಯಾನವನ ಅಂದಗೆಟ್ಟಿದೆ. ಸರಿಯಾದ ಫುಟ್‌ಪಾತ್‌, ನೀರಿನ ವ್ಯವಸ್ಥೆ ಗಳಿಲ್ಲ. ವಿದ್ಯುತ್‌ ಸಂಪರ್ಕವಂತೂ ಗಗನ ಕುಸುಮವಾಗಿದೆ. ಎತ್ತೆಂದರತ್ತ ಬೆಳೆದ ಗಿಡಗಳ ರೆಂಬೆಕೊಂಬೆಗಳಿಂದಾಗಿ ಉದ್ಯಾನವದಲ್ಲಿ ಓಡಾಡುವವರಿಗೆ ತೀವ್ರ ತೊಂದರೆಯುಂಟಾಗುತ್ತಿವೆ. ಬಾಯ್ತೆರೆದ ನೀರಿನ ಟ್ಯಾಂಕ್‌ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದರೂ ಪುರಸಭೆ ಅಧಿಕಾರಿಗಳು ಮಾತ್ರ ಮೌನಕ್ಕೆ ಶರಣಾಗಿದ್ದಾರೆ.

ಮೂರು ಎಕರೆ ವಿಸ್ತೀರ್ಣದಲ್ಲಿರುವ ಉದ್ಯಾನವನ ಗಜೇಂದ್ರಗಡ ಜನತೆಯ ಅಚ್ಚು ಮೆಚ್ಚಿನ ಸ್ಥಳವಾಗಿದ್ದು, ಕೂಡಲೇ ಸ್ಥಳೀಯ ಶಾಸಕರು ಪುರಸಭೆಗೆ ಆದೇಶಿಸಿ ಉದ್ಯಾನವನ ಪುನಶ್ಚೇತನಕ್ಕೆ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.