ಗಜೇಂದ್ರಗಡ: ಮತದಾನ ಖಾತ್ರಿಗೆ ವಿವಿ ಪ್ಯಾಟ್‌ ಸಹಕಾರಿ

ಯಾವುದೇ ನೆಟ್‌ವರ್ಕ್‌ ಬಳಸಿ ವಿವಿ ಪ್ಯಾಟ್‌ ಉಪಕರಣದ ನಿರ್ವಹಣೆ ಮಾಡಲಾಗುವುದಿಲ್ಲ

Team Udayavani, Feb 4, 2023, 4:38 PM IST

ಗಜೇಂದ್ರಗಡ: ಮತದಾನ ಖಾತ್ರಿಗೆ ವಿವಿ ಪ್ಯಾಟ್‌ ಸಹಕಾರಿ

ಗಜೇಂದ್ರಗಡ: ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಬಳಕೆಯಾಗುತ್ತಿರುವ ವಿವಿ ಪ್ಯಾಟ್‌ ಕಾರ್ಯವೈಖರಿ ಕುರಿತು ಜನರಿಗೆ ಮಾಹಿತಿ ನೀಡುವ ಮೂಲಕ ಕಡ್ಡಾಯ ಮತದಾನಕ್ಕೆ ಅಣಿಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಉಪವಿಭಾಗಾಧಿಕಾರಿ ಅನ್ನಪೂರ್ಣಾ ಮುದಕಮ್ಮನವರ ಹೇಳಿದರು.

ಪಟ್ಟಣದ ಸರ್ಕಾರಿ ಮಾದರಿ ಕೇಂದ್ರ ಶಾಲೆ ನಂ. 1ರ ಮತಗಟ್ಟೆ ಕೇಂದ್ರದಲ್ಲಿ ಮತದಾನ ಕುರಿತು ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸಿ ಅವರು ಮಾತನಾಡಿದರು.

ಈ ಹಿಂದೆ ಚುನಾವಣೆಯಲ್ಲಿ ಇವಿಎಂ ಹಾಗೂ ಬ್ಯಾಲೆಟ್‌ ಯೂನಿಟ್‌ ಯಂತ್ರಗಳನ್ನು ಬಳಸಲಾಗುತ್ತಿತ್ತು. ಆದರೆ, ಸುಪ್ರೀಂಕೋರ್ಟ್‌ ಸೂಚನೆ ಮೇರೆಗೆ ಕೇಂದ್ರ ಚುನಾವಣಾ ಆಯೋಗ ಕಳೆದ ಹಲವು ವರ್ಷಗಳಿಂದ ವಿವಿ ಪ್ಯಾಟ್‌ ಬಳಕೆ ಮಾಡುತ್ತಿದೆ. ಮತದಾರರು ತಾವು ಚಲಾಯಿಸಿದ ಮತದ ಖಾತ್ರಿಗಾಗಿ ವಿವಿ ಪ್ಯಾಟ್‌ ಉಪಕರಣ ಅಭಿವೃದ್ಧಿಪಡಿಸಿರುವುದರಿಂದ ಇದರ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರಾತ್ಯಕ್ಷಿಕೆ ನಡೆಸಲಾಗುತ್ತಿದೆ ಎಂದರು.

ಯಾವುದೇ ನೆಟ್‌ವರ್ಕ್‌ ಬಳಸಿ ವಿವಿ ಪ್ಯಾಟ್‌ ಉಪಕರಣದ ನಿರ್ವಹಣೆ ಮಾಡಲಾಗುವುದಿಲ್ಲ. ಹೀಗಾಗಿ, ವಿವಿ ಪ್ಯಾಟ್‌ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವುದರಿಂದ ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಮತದಾನ ಮಾಡಿದ ಕುರಿತು ಖಾತ್ರಿಪಡಿಸಿಕೊಳ್ಳಲು ಚುನಾವಣಾ ಆಯೋಗ ಈ ಉಪಕರಣ ಒದಗಿಸಿದೆ ಎಂದರು.

ತಹಶೀಲ್ದಾರ್‌ ರಜನಿಕಾಂತ್‌ ಕೆಂಗೇರಿ ಮಾತನಾಡಿ, ದೇಶದಲ್ಲಿ ರಾಜಾಡಳಿವಿದ್ದಾಗ ರಾಜರನ್ನು ಆಯ್ಕೆ ಮಾಡುವ ಜನರಿಗೆ ಅವಕಾಶವಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಯಿಂದ ಹಿಡಿದು ಸಾಮಾನ್ಯ ವ್ಯಕ್ತಿಯೂ ಸಹ ಪ್ರತಿ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶವಿದೆ. ಮತದಾನ ಅತ್ಯಂತ ಪವಿತ್ರ ಕೆಲಸವಾಗಿದೆ. ಹೀಗಾಗಿ, ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ನಿಮಗೆ ಸೂಕ್ತ ಎನಿಸಿದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಚುನಾವಣೆ ಬಹುದೊಡ್ಡ ಅಸ್ತ್ರವಾಗಿದೆ. ಪ್ರತಿಯೊಬ್ಬರು ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಬೇಕೆಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿ ಸಜ್ಜನರ, ಕಂದಾಯ ನಿರೀಕ್ಷಕಿ ಗೌರಮ್ಮ ಆನಂದಪ್ಪನವರ, ಚುನಾವಣಾ ನಿರ್ವಹಣಾಧಿಕಾರಿ ಬಸವರಾಜ ಗುಡಿಮುಂದಿನ, ಸೆಕ್ಟರ್‌ ಅಧಿಕಾರಿ ಎಂ.ಎ. ಫಣಿಬಂಧ, ಎಸ್‌.ಎಲ್‌. ಉಪ್ಪಾರ, ಬಿಎಲ್‌ಒ ಆರ್‌.ವಿ. ನಿರಂಜನ, ಜಿ.ಎನ್‌. ಕಾಳೆ, ಎಸ್‌.ಎಸ್‌. ಪಸಾರದ, ಪಿ.ಪಿ. ಅಂಬೋರೆ, ಮುಖ್ಯ ಶಿಕ್ಷಕಿ ಎಫ್‌. ಎಚ್‌. ಬಾಗವಾನ, ಶರಣಮ್ಮ ಅಂಗಡಿ, ಬಸವರಾಜ ಬಂಕದ, ಮುದಿಯಪ್ಪ ಮುಧೋಳ, ಮೂಕಪ್ಪ ನಿಡಗುಂದಿ, ಲೀಲಾವತಿ ಸವಣೂರ, ವಿಷ್ಣು ಅಂಬೋರೆ, ಮಾರುತಿ ಅವಧೂತ್‌ ಇದ್ದರು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.