ಕಸದ ತೊಟ್ಟಿಯಾದ ಖಾಲಿ ನಿವೇಶನಗಳು!
Team Udayavani, Oct 7, 2019, 1:10 PM IST
ಗದಗ: ದೇಶದ ಎಲ್ಲೆಡೆ ಇದೀಗ ಸ್ವತ್ಛ ಭಾರತ, ಸ್ವಚ್ಛತಾ ಹೀ ಸೇವಾ ಮಂತ್ರಗಳಿಂದಾಗಿ ಸ್ವಚ್ಛತಾ ಹೀ ಸೇವಾತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅದರಂತೆ ಪ್ಲಾಸ್ಟಿಕ್ ಬಳಕೆ ನಿಷೇಧ, ಮನೆಯಿಂದಲೇ ಹಸಿ ಕಸ-ಒಣ ಕಸ ವಿಂಗಡನೆ ಸೇರಿದಂತೆ ತ್ಯಾಜ್ಯ ಸಮಸ್ಯೆ ನಿವಾರಣೆಗೆ ಒತ್ತು ನೀಡಲಾಗುತ್ತಿದೆ. ಆದರೆ, ಅವಳಿ ನಗರದ ಖಾಸಗಿ ಮಾಲೀಕತ್ವದ ಖಾಲಿ ನಿವೇಶನಗಳು ತ್ಯಾಜ್ಯ ವಿಲೇವಾರಿ ಕೇಂದ್ರಗಳಾಗಿ ಪರಿವರ್ತನೆಯಾಗಿದ್ದು, ಸ್ಥಳೀಯರಿಗೆ ತಲೆ ನೋವಾಗಿ ಕಾಡುತ್ತಿವೆ.
ಮಹಾತ್ಮ ಗಾಂಧಿಧೀಜಿ ಅವರ 150ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ದೇಶವನ್ನು ಕೊಳಕು ಮುಕ್ತ ಮಾಡುವ ಸದುದ್ದೇಶದಿಂದ ಪ್ರಧಾನಿ ಮೋದಿ ಅವರು ಸ್ವಚ್ಛ ಭಾರತ ಅಭಿಯಾನ ಘೋಷಣೆ ಮಾಡಿದಾಗ ಇಲ್ಲಿನ ನಗರಸಭೆಯೂ ಸ್ಪಂದಿಸಿತು. ಪ್ರಸಕ್ತ ಸಾಲಿನಲ್ಲಿ ಸ್ವತ್ಛತಾ ಹೀ ಸೇವಾ ಘೋಷಣೆಗೆ ಧ್ವನಿ ಗೂಡಿಸಿದ ಜಿಲ್ಲಾಡಳಿತ ಸ್ವತಃ ಜಿಲ್ಲಾಧಿಕಾರಿ, ಪೌರಾಯುಕ್ತರು ಜೋಳಿಗೆ ಹಾಕುವ ಮೂಲಕ ಸಾರ್ವಜನಿಕರ ಗಮನ ಸೆಳೆದಿದ್ದರು.
ಅವಳಿ ನಗರದಲ್ಲಿ ಸ್ವಚ್ಛ ಕಾಪಾಡುವ ನಿಟ್ಟಿನಲ್ಲಿ ಪೌರ ಕಾರ್ಮಿಕರು, ಗಂಟಿಗಾಡಿಗಳು ಸಾಕಷ್ಟು ಶ್ರಮಿಸುತ್ತಿದ್ದಾರೆ. ಆದರೆ, ಅವಳಿ ನಗರದಲ್ಲಿ ನೂರಾರು ಸಂಖ್ಯೆಯಲ್ಲಿರುವ ಖಾಲಿ ನಿವೇಶನಗಳಲ್ಲಿ ನೆರೆ ಹೊರೆಯವರು ಬೇಕಾಬಿಟ್ಟಿಯಾಗಿ ಕಸ ಚೆಲ್ಲುವುದರಿಂದ ತ್ಯಾಜ್ಯ ವಿಲೇವಾರಿ ಕೇಂದ್ರಗಳಾಗಿ ಪರಿವರ್ತನೆಯಾಗುತ್ತಿವೆ. ತಗ್ಗು ಪ್ರದೇಶದಲ್ಲಿರುವ ಖಾಲಿ
ನಿವೇಶಗಳಲ್ಲಿ ಕೊಳಚೆ ನೀರು ಸಂಗ್ರಹವಾಗುತ್ತಿದ್ದು, ಸೊಳ್ಳೆಗಳ ಉಗಮ ಸ್ಥಾನಗಳಾಗಿವೆ. ಅದರೊಂದಿಗೆ ಪ್ರಮುಖ ರಸ್ತೆಗಳ ಅಕ್ಕ- ಪಕ್ಕದಲ್ಲಿರುವ ಖಾಲಿ ನಿವೇಶನಗಳಲ್ಲಿ ಪಾರ್ಥೇನಿಯಂ ಗಿಡ, ಮುಳ್ಳಿನ ಕಂಟಿ ಬೆಳೆಯುತ್ತಿವೆ. ವಾಣಿಜ್ಯ ಮಳಿಗೆಗಳಿಂದ ಉತ್ಪತ್ತಿಯಾಗುವ ಕಸ, ಖಾಲಿ ಬಾಟಲಿ, ಹಳೇ ಬೆಡ್, ಹಾಸಿಗೆ, ಹೊದಿಕೆ ಸೇರಿದಂತೆ ಅನೇಕ ನಿರುಪಯುಕ್ತ ವಸ್ತುಗಳನ್ನು ಬಿಸಾಡುತ್ತಿದ್ದು, ನಗರದ ಅಂದಗೆಡಿಸುತ್ತಿವೆ ಎಂಬುದು ಸಾರ್ವಜನಿಕರ ದೂರು.
ಆ ಪೈಕಿ ಅವಳಿ ನಗರದಲ್ಲಿ ಪ್ರತಿಷ್ಠಿತ ಎನಿಸಿಕೊಳ್ಳುವ ಹುಡ್ಕೊ ಕಾಲೋನಿ, ಕಳಸಾಪುರ ರಸ್ತೆಯಲ್ಲಿರುವ ವಿವಿಧ ಬಡಾವಣೆಗಳು, ಸ್ವಾಮಿ ವಿವೇಕಾನಂದ ಬಡಾವಣೆ, ಕರಿಯಮ್ಮನ ಕಲ್ಲು ಬಡಾವಣೆ, ರಾಜೀವಗಾಂ ನಗರ, ಸಂಭಾಪುರ ರಸ್ತೆಯ ಹಲವು ಬಡಾವಣೆಗಳೂ ಈ ಸಮಸ್ಯೆಯಿಂದ ಹೊರತಾಗಿಲ್ಲ. ಕೆಲವರು ಹೂಡಿಕೆಗಾಗಿ ಜಾಗೆಗಳನ್ನು ಖರೀದಿಸಿ, ಕೈಬಿಡುವುದೇ ಈ ಸಮಸ್ಯೆಗೆ ಮೂಲ ಕಾರಣ ಎನ್ನಲಾಗಿದೆ. ಹೀಗಾಗಿ ಕೋಟ್ಯಂತರ ರೂಪಾಯಿ ಸುರಿದು ಪ್ರತಿಷ್ಠಿತ ಬಡಾವಣೆಗಳಲ್ಲಿ ಮನೆ ನಿರ್ಮಿಸಿಕೊಂಡಿದ್ದರೂ, ಸುತ್ತಮುತ್ತಲಿನ ಖಾಲಿ ನಿವೇಶನಗಳಿಂದ ಸ್ಥಳೀಯರಿಗೆ ಇರುಸು-ಮುರುಸಿನ ಜೊತೆಗೆ ಆರೋಗ್ಯದ ಸಮಸ್ಯೆ ಎದುರಾಗುತ್ತಿವೆ ಎಂಬುದು ಸ್ಥಳೀಯರ ಅಸಮಾಧಾನದ ಮಾತು.
-ವೀರೇಂದ್ರ ನಾಗಲದಿನ್ನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ