ಸದೃಢ ದೇಶಕ್ಕಾಗಿ ಬಿಜೆಪಿ ಗೆಲ್ಲಿಸಿ
Team Udayavani, Apr 20, 2019, 2:26 PM IST
ಗದಗ: ಜಿಲ್ಲೆಯಲ್ಲಿ ತಮ್ಮ ಅನುಕೂಲತೆಗೆ ತಕ್ಕಂತೆ ರಾಜಕಾರಣ ಮಾಡುತ್ತಿರುವವರನ್ನು ಸೋಲಿಸಬೇಕು. ಸುಭದ್ರ ಹಾಗೂ ಸದೃಢ ದೇಶಕ್ಕಾಗಿ ಮತ್ತೂಮ್ಮೆ ಬಿಜೆಪಿಯನ್ನು ಗೆಲ್ಲಿಸಬೇಕು. ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಅವರ ಹ್ಯಾಟ್ರಿಕ್ ಗೆಲುವಿಗೆ ಕಾರಣರಾಗಬೇಕು ಎಂದು ಬೀಳಗಿ ಶಾಸಕ ಹಾಗೂ ಪಂಚಮಸಾಲಿ ಸಮಾಜದ ಮುಖಂಡ ಮುರುಗೇಶ ನಿರಾಣಿ ಕರೆ ನೀಡಿದರು.
ನಗರದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಹಾವೇರಿ, ಕೊಪ್ಪಳ, ಧಾರವಾಡ ಹಾಗೂ ಬಾಗಲಕೋಟ ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳಾದ ಶಿವಕುಮಾರ ಉದಾಸಿ, ಸಂಗಣ್ಣ ಕರಡಿ, ಪ್ರಹ್ಲಾದ ಜೋಶಿ ಮತ್ತು ಪಿ.ಸಿ. ಗದ್ದಿಗೌಡ್ರ ಅವರ ಬೆಂಬಲಾರ್ಥವಾಗಿ ನಡೆದ ಪಂಚಮಸಾಲಿ ಸಮಾಜದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬಹುತೇಕ ಪಂಚಮಸಾಲಿ ಜನರಿಗೆ ಕೃಷಿಯೇ ಪ್ರಧಾನ. ನಾನು ಕೈಗಾರಿಕಾ ಸಚಿವನಿದ್ದಾಗ ಜಿಲ್ಲೆಯಲ್ಲಿ ಪೋಸ್ಕೊ ಕಂಪನಿ ಕೈಗಾರಿಕೆ ಸ್ಥಾಪನೆಗೆ ಮುಂದಾಗಿತ್ತು. ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆ ಉದ್ಯೋಗ ಅವಕಾಶಗಳು ದೊರೆಯುತ್ತಿದ್ದವು. ಈ ಕಂಪನಿಗೆ ಪಂಚಮಸಾಲಿಗಳ ಜಮೀನೇ ಹೆಚ್ಚಿನ ಪ್ರಮಾಣದಲ್ಲಿ ಹೋಗುತ್ತಿತ್ತು. ಅದನ್ನು ತಪ್ಪಿಸುವ ಉದ್ದೇಶದಿಂದ ವಿರೋಧ ಮಾಡಿದರು ಎಂದರು.
ಸ್ವಾತಂತ್ರ್ಯ ಸಿಕ್ಕ 70 ವರ್ಷಗಳಲ್ಲಿ 60 ವರ್ಷಗಳ ಕಾಲ ಗದಗ ಒಂದೇ ಕುಟುಂಬದ ಅಧಿಕಾರದಲ್ಲಿದೆ. ಅದನ್ನು ತಪ್ಪಿಸಲು ಈ ಬಾರಿ ಶಿವಕುಮಾರ ಉದಾಸಿ ಅವರನ್ನು ಮತ್ತೆ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಹಾವೇರಿ ಕ್ಷೇತ್ರದ ಮಾಜಿ ಸಂಸದ ಮಂಜುನಾಥ ಕುನ್ನೂರ ಅವರು ಮಾತನಾಡಿ, ಈ ದೇಶದ ಸಂಪತ್ತು ರಕ್ಷಿಸುವ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಶಿವಕುಮಾರ ಉದಾಸಿ ಅವರನ್ನು ಗೆಲ್ಲಿಸಬೇಕು. ಇದೀಗ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಿ.ಆರ್. ಪಾಟೀಲ ಅವರನ್ನು ಸೋಲಿಸಲು ಪಂಚಮಸಾಲಿ ಜನರು ಒಟ್ಟಾಗಿ ಶಕ್ತಿ ಪ್ರದರ್ಶನ ಮಾಡಿ, ಮತ ಚಲಾಯಿಸಬೇಕು ಎಂದ ಅವರು, ಲಿಂಗಾಯತ ಒಡೆಯುವ ಎಂ.ಬಿ. ಪಾಟೀಲರ ಪತ್ರದ ಬಗ್ಗೆ ತನಿಖೆಗೆ ಸಮಾಜ ಹೋರಾಟ ಮಾಡಬೇಕು ಎಂದು ಮನವಿ ಮಾಡಿದರು.
ಮುಖಂಡ ವಿಜಯಕುಮಾರ ಗಡ್ಡಿ ಅಧ್ಯಕ್ಷತೆ ವಹಿಸಿದ್ದರು. ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಬಸವರಾಜ ಕೊರ್ಲಹಳ್ಳಿ, ಮೋಹನ ಮಾಳಶೆಟ್ಟಿ, ಬಸವಣ್ಣೆಪ್ಪ ಚಿಂಚಲಿ, ಅನಿಲ ಮೆಣಸಿನಕಾಯಿ, ಸಿದ್ದು ಪಲ್ಲೇದ, ಎಂ.ಎಸ್. ಕರಿಗೌಡ್ರ, ಅಶೋಕ ಸಂಕಣ್ಣವರ, ಎಸ್.ವಿ. ಪಾಟೀಲ, ಚಂಬಣ್ಣ ಬಾಳಿಕಾಯಿ, ಎಫ್.ಬಿ. ಮರಿಗೌಡ್ರ, ಸಿದ್ದು ಜೀವನಗೌಡ್ರ, ರಾಜು ಗುಡಿಮನಿ, ಮಹಾಂತೇಶ ನಲವಡಿ, ಈರಣ್ಣ ಕರಿಬಿಷ್ಠಿ, ಶಿವರಾಜಗೌಡ ಹಿರೇಮನಿ ಪಾಟೀಲ, ಭದ್ರೇಶ ಕುಸ್ಲಾಪುರ, ಅಮರೇಶ ಬೆಟಗೇರಿ, ವಿಜಯಲಕ್ಷಿ ್ಮೕ ಅಂಗಡಿ, ಜಯಶ್ರೀ ಉಗಲಾಟ, ಸಾವಿತ್ರಿ ಸುಂಕದ, ಪಾರ್ವತೆಮ್ಮ ಮರಿಗೌಡ್ರ ಸೇರಿ ಅನೇಕರು ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ