ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ನೀಡಿ
Team Udayavani, Nov 28, 2021, 3:05 PM IST
ಲಕ್ಷ್ಮೇಶ್ವರ: ವಿದ್ಯೆ ಎಂಬುದು ಯಾರೂ ದೋಚಲಾಗದ, ಬಳಸಿದಷ್ಟು ಸಮೃದ್ಧವಾಗಿ ಬೆಳೆಯುವ, ಎಲ್ಲ ಸಂಪತ್ತಿಗಿಂತ ಮಿಗಿಲಾದದ್ದು. ಆದ್ದರಿಂದ ತಾಯಂದಿರು ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಿ ಮಕ್ಕಳ ಜ್ಞಾನ ಭಂಡಾರದ ಶ್ರೀಮಂತಿಕೆ ಹೆಚ್ಚಿಸಬೇಕು ಎಂದು ಸಾಹಿತಿ ಲಲಿತಾ ಸಿ. ಕೆರಿಮನಿ ಹೇಳಿದರು.
ಪಟ್ಟಣದ ಸಾಲೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಮಗಿದು ಹೋಗುವ ಸಂಪನ್ಮೂಲಗಳ ಸದ್ಬಳಕೆ ಕುರಿತು ಮಾತನಾಡಿದರು. ಗದಗ ಜಿಲ್ಲೆಯ ಧ.ಗ್ರಾ. ಸಂಸ್ಥೆ ನಿರ್ದೇಶಕರಾದ ಶಿವಾನಂದ ಆಚಾರ್ಯರು ಮಾತನಾಡಿ, ಮಹಿಳೆಯರು ಸಂಸ್ಥೆಯ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕ ಸಬಲೀಕರಣ ಹೊಂದುವ ಜೊತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ, ಸಂಪ್ರದಾಯಗಳನ್ನು ರೂಢಿಸಬೇಕು ಎಂದರು.
ಪುರಸಭೆ ಅಧ್ಯಕ್ಷ ಪೂರ್ಣಿಮಾ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಯುವ ಮುಖಂಡರಾದ ಸಂತೋಷ ಬಾಳಿಕಾಯಿ, ರುದ್ರಯ್ಯ ಘಂಟಾಮಠ, ಸಿ.ಎಸ್. ಕೋರಿ, ಸಂಸ್ಥೆ ಯೋಜನಾಧಿಕಾರಿ ಶಿವಣ್ಣ ಎಸ್., ಹನಮಂತ ಅಂಗಡಿ, ಗಿರಿಜಾ ಧೂಳಿಕೊಪ್ಪ ಇದ್ದರು. ಸಂಸ್ಥೆ ಸೇವಾ ಪ್ರತಿನಿಧಿಗಳಾದ ಶೋಭಾ, ನಿರ್ಮಲಾ, ಲಲಿತಾ, ಮಂಜುಳಾ, ಲತಾ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ