ಅಗತ್ಯ ವಸ್ತು ಹೊರತುಪಡಿಸಿ ಏನೂ ಸಿಗಲಿಲ್ಲ!


Team Udayavani, Apr 23, 2021, 8:52 PM IST

ಜಹತಸೆತಸರ್ಗ

ಗದಗ : ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಹೊರಡಿಸಿದ ಪರಿಷ್ಕೃತ ಮಾರ್ಗಸೂಚಿಯಂತೆ ಗುರುವಾರ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿಸಲಾಯಿತು. ಮದುವೆ ಮತ್ತಿತರೆ ಸಮಾರಂಭಗಳ ವಿವಿಧ ವಸ್ತುಗಳ ಖರೀದಿಗೆ ಆಗಮಿಸಿದ್ದ ಜನರು ಪರದಾಡುವಂತಾಯಿತು. ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಗರದ ಸರಾಫ್‌ ಬಜಾರ್‌ನಿಂದ ಆರಂಭಗೊಂಡ ಕಾರ್ಯಾಚರಣೆಯಿಂದ ಪ್ರಮುಖ ರಸ್ತೆಗಳಲ್ಲಿರುವ ಬಹುತೇಕ ಅಂಗಡಿಗಳು ಬಾಗಿಲು ಮುಚ್ಚಿದವು.

ಟಾಂಗಾಕೂಟ, ಸ್ಟೇಷನ್‌ ರಸ್ತೆ, ಬ್ಯಾಂಕ್‌ ರೋಡ್‌, ಗಾಂಧಿ  ಸರ್ಕಲ್‌, ಕೆ.ಸಿ.ರಾಣಿ ರಸ್ತೆ, ಮುಳಗುಂದ ನಾಕಾ, ಬೆಟಗೇರಿ ಭಾಗದಲ್ಲೂ ಎಲ್ಲ ಅಂಗಡಿಗಳನ್ನು ಮುಚ್ಚಿಸಲಾಯಿತು. ಪ್ರತಿ 15 ನಿಮಿಷಕ್ಕೊಮ್ಮೆ ರೌಂಡ್ಸ್‌ ಮಾಡುವ ಮೂಲಕ ಪುನಃ ವ್ಯಾಪಾರ, ವಹಿವಾಟು ಆಗದಂತೆ ನಿಗಾ ವಹಿಸಲಾಗಿತ್ತು. ಇದ್ದರಿಂದ ಅವಳಿ ನಗರದ ಜನತೆ ಗೊಂದಲಕ್ಕೆ ಸಿಲುಕಿದರು.

ವರ್ತಕರ ಆಕ್ರೋಶ: ಏಕಾಏಕಿ ಅಂಗಡಿಗಳನ್ನು ಬಂದ್‌ ಮಾಡಿಸಿದ್ದಕ್ಕೆ ಅಂಗಡಿ ಮಾಲಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕರ್ಫ್ಯೂ ವಾರಾಂತ್ಯಕ್ಕೆ ಘೋಷಣೆಯಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಅಂಗಡಿಗಳನ್ನು ಬಂದ್‌ ಮಾಡಿಸಿದರೆ ನಮ್ಮ ಪಾಡೇನು ಎಂದು ಅ ಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು. ಇದೇ ವೇಳೆ ಪರಿಶೀಲನೆಗೆ ಆಗಮಿಸಿದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌. ಅವರ ಬಳಿಯೂ ವರ್ತಕರು ಅಳಲು ತೋಡಿಕೊಂಡರು. ಸ್ಟೇಷನ್‌ ರಸ್ತೆ ಬಳಿ ಎಸ್ಪಿ ಕಾರು ತಡೆದ ವರ್ತಕರು, ಸದ್ಯ ಮದುವೆ ಸೀಸನ್‌ ಇದೆ. ಹತ್ತಾರು ಮದುವೆಗಳಿಗೆ ಚಿನ್ನಾಭರಣ ಪೂರೈಸಲು ಗ್ರಾಹಕರಿಂದ ಮುಂಗಡ ಹಣ ಪಡೆದಿದ್ದೇವೆ.

ಬಟ್ಟೆ ಅಂಗಡಿಗಳಿಗೂ ಸಾಕಷ್ಟು ಜನರು ಆಗಮಿಸುತ್ತಾರೆ. ಇಂತಹ ಸಂದರ್ಭದಲ್ಲಿ ಯಾವುದೇ ಮುನ್ಸೂಚನೆ ನೀಡದೇ ಏಕಾಏಕಿ ಬೆಳಗ್ಗೆ 11 ಗಂಟೆಗೆ ಬಂದು ವ್ಯಾಪಾರ ಬಂದ್‌ ಮಾಡಿಸುವುದು ಎಷ್ಟು ಸರಿ? ಒಂದೆರಡು ದಿನ ಮುನ್ನವೇ ದ್ವನಿವರ್ಧಕಗಳ ಮೂಲಕ ಮಾಹಿತಿ ನೀಡಬೇಕಿತ್ತು ಎಂದು ಅಸಮಾಧಾನ ಹೊರ ಹಾಕಿದರು. ಜನರ ಗೋಳಾಟ: ಅವಳಿ ನಗರದ ಪ್ರಮುಖ ರಸ್ತೆ, ಮಾರುಕಟ್ಟೆ ಪ್ರದೇಶದಲ್ಲಿನ ಎಲ್ಲ ಬಗೆಯ ಅಂಗಡಿ-ಮುಂಗಟ್ಟುಗಳ ಬಾಗಿಲು ಮುಚ್ಚಿದ್ದವು. ಮದುವೆ ಮತ್ತಿತರೆ ಶುಭ ಕಾರ್ಯಗಳಿಗಾಗಿ ಚಿನ್ನ, ಬಟ್ಟೆ, ಇನ್ನಿತರೆ ಸಾಮಗ್ರಿಗಳ ಖರೀದಿಗೆ ಆಗಮಿಸಿದ್ದ ಗ್ರಾಹಕರು ಏಕಾಏಕಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದರಿಂದ ದಿಕ್ಕು ತೋಚದಂತಾದರು. ಕೆಲ ಅಂಗಡಿಕಾರರು ಕದ್ದು ಮುಚ್ಚಿ ಅರ್ಧ ಬಾಗಿಲು ತೆರೆದು ವ್ಯಾಪಾರ ನಡೆಸುತ್ತಿದ್ದರು.

ಗಸ್ತು ಪೊಲೀಸರು ಕಣ್ಣಿಗೆ ಬೀಳುತ್ತಿದ್ದಂತೆ ಅಂಗಡಿ ಮುಚ್ಚುವ ದೃಶ್ಯ ಸಾಮಾನ್ಯವಾಗಿತ್ತು. ಸಮರ್ಪಕವಾಗಿ ಖರೀದಿಯಾಗದೇ ಜನರು ಪೇಚಿಗೆ ಸಿಲುಕಿದರು. ಏಕಾಏಕಿ ಇಂತಹ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.