ಗೌಡರ ಪರ ಗೌಡ್ತಿಯರ ಪ್ರಚಾರ..!


Team Udayavani, Apr 8, 2019, 1:28 PM IST

gad-2
ಗದಗ: ಈ ಬಾರಿ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಶತಾಯಗತಾಯವಾಗಿ ಗೆಲುವು ಸಾಧಿಸಲು ರಣತಂತ್ರವನ್ನೇ ಹೆಣೆದಿರುವ ಕಾಂಗ್ರೆಸ್‌ ಜಿಲ್ಲೆಯ ಹಿರಿಯ ನಾಯಕ ಡಿ.ಆರ್‌. ಪಾಟೀಲ ಅವರನ್ನು ಕಣಕ್ಕಿಳಿಸಿದೆ. ಇನ್ನು ಗದಗ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಡಿ.ಆರ್‌. ಪಾಟೀಲರ ಕುಟುಂಬದ ಮಹಿಳೆಯರು ಪ್ರಚಾರ ಕಣಕ್ಕಿಳಿದಿದ್ದರಿಂದ ಕದನ ಕಣ ಮತ್ತಷ್ಟು ರಂಗು ಪಡೆದಿದೆ.
ಬೇಸಿಗೆಯ ಬಿಸಿಲಿನ ಪ್ರಖರದೊಂದಿಗೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ಕಾವೇರುತ್ತಿದೆ. ಕಳೆದ ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ಕಂಡಿರುವ ಬಿಜೆಪಿಗೆ ಈ ಬಾರಿ ಸೋಲಿನ ರುಚಿ ತೋರಿಸಲು ಕೈ ಪಡೆ ನಿರ್ಧರಿಸಿದೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ.ಪಾಟೀಲ ಅವರ ಸಹೋದರ ಪುತ್ರ, ಮಾಜಿ ಶಾಸಕ ಡಿ.ಆರ್‌. ಪಾಟೀಲ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದರಿಂದ ಕಾಂಗ್ರೆಸ್‌ ಹಾಗೂ ಎಚ್ಕೆ ಕುಟುಂಬಕ್ಕೂ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.
ಪ್ರಚಾರಕ್ಕೆ ಬಂದ ಗೌಡ್ತಿಯರು: 1962ರಲ್ಲಿ ಗದಗ ವಿಧಾನಸಭಾ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಕೆ.ಎಚ್‌. ಪಾಟೀಲರು ಚುನಾವಣಾ ರಾಜಕಾರಣಕ್ಕೆ ಧುಮುಕಿ ಸೋಲು ಕಂಡಿದ್ದರು. ಬಳಿಕ 1967ರಲ್ಲಿ ಪಕ್ಷೇತರರಾಗಿ, 1972ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸತತ ಗೆಲುವು ಸಾಧಿಸಿದ್ದರು. ಒಟ್ಟು 7 ಬಾರಿ ಸ್ಪರ್ಧೆಗಳಿದಿದ್ದ ಅವರು, ನಾಲ್ಕು ಬಾರಿ ವಿಧಾನಸಭೆ ಪ್ರವೇಶಿಸಿದ್ದರು. 1992ರಲ್ಲಿ ಕೆ.ಎಚ್‌. ಪಾಟೀಲ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ
ಚುನಾವಣಾಯಲ್ಲಿ ಸ್ಪರ್ಧಿಸಿದ್ದ ಕೆ.ಎಚ್‌. ಪಾಟೀಲರ ಸಹೋದರ ಪುತ್ರ ಡಿ.ಆರ್‌. ಪಾಟೀಲ ಮೊದಲ ಪ್ರಯತ್ನದಲ್ಲೇ ಗೆಲುವಿನ ನಗೆ ಬೀರಿದ್ದರು. ಬಳಿಕ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅದಕ್ಕೂ ಮುನ್ನ ಡಿ.ಆರ್‌. ಪಾಟೀಲ ಜಿಲ್ಲಾ ಪರಿಷತ್‌ ಸದಸ್ಯರಾಗಿದ್ದರು.
ಅದರಂತೆ ನಾಲ್ಕು ಬಾರಿ ವಿಧಾನಪರಿಷತ್‌ ಸದಸ್ಯರಾಗಿದ್ದ ಎಚ್‌.ಕೆ. ಪಾಟೀಲ ಅವರು 2008ರಲ್ಲಿ ಮೊದಲ ಬಾರಿಗೆ ಗದಗ ವಿಧಾನಸಭೆಗೆ ಸ್ಪರ್ಧಿಸಿ ಸೋತಿದ್ದರು. ಬಳಿಕ 2013 ಮತ್ತು 2018ರ ವಿಧಾನಸಭೆ ಚುಣಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಆದರೆ, ಯಾವುದೇ ಚುನಾವಣೆಯಲ್ಲೂ ಹುಲಕೋಟಿ ಗೌಡರ ಕುಟುಂಬಸ್ಥರು ಚುನಾವಣಾ ಪ್ರಚಾರಕ್ಕಿಳಿದಿರಲಿಲ್ಲ. ಇದೇ ಮೊದಲ ಬಾರಿಗೆ ಹುಲಕೋಟಿ ಗೌಡ್ತಿಯರು ಚುನಾವಣಾ ಪ್ರಚಾರ ಕಣಕ್ಕಿಳಿಯುವ ಮೂಲಕ ಪಕ್ಷದ ಕಾರ್ಯಕರ್ತರೂ ಸೇರಿದಂತೆ ಕ್ಷೇತ್ರದ ಮತದಾರರನ್ನೂ ಬೆರಗಾಗಿಸಿದ್ದಾರೆ.
ಕ್ಷೇತ್ರದ ವಿವಿಧೆಡೆ ಮತಯಾಚನೆ: ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ ಹಾಗೂ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ. ಪಾಟೀಲ ಈಗಾಗಲೇ ಕ್ಷೇತ್ರದಲ್ಲಿ ಒಂದಿನ ಸುತ್ತಿನ ಪ್ರಚಾರ ಕಾರ್ಯ ಪೂರ್ಣಗೊಳಿಸಿದ್ದಾರೆ. ಡಿ.ಆರ್‌. ಪಾಟೀಲರನ್ನು ಗೆಲ್ಲಿಸಬೇಕು ಎಂದು ಪಣ ತೊಟ್ಟಿರುವ ಪಕ್ಷದ ಕಾರ್ಯರ್ತರೊಂದಿಗೆ ಅವರ ಕುಟುಂಬಸ್ಥರೂ ಕೈಜೋಡಿಸಿದ್ದಾರೆ. ಈಗಾಗಲೇ ಡಿ.ಆರ್‌. ಪಾಟೀಲರ ಪುತ್ರ ಸಚಿನ್‌ ಪಾಟೀಲ, ಸಂತೋಷ ಪಾಟೀಲ ಹಾಗೂ ಸಹೋದರರೂ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಅದರೊಂದಿಗೆ ಯುಗಾದಿ ಹಬ್ಬದ ನಿಮಿತ್ತ ಶನಿವಾರ ಸಂಜೆ ಬೆಟಗೇರಿ ಸೆಟ್ಲಮೆಂಟ್‌ ಮಾರುತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಸೊಸೆಯಂದಿರೂ ಪ್ರಚಾರಕ್ಕೆ ಚಾಲನೆ ನೀಡಿದರು. ಡಿ.ಆರ್‌.ಪಾಟೀಲ ಅವರ ಸಹೋದರಿ ಸುನಂದಾ, ಸೊಸೆಯಂದಿರಾದ ತೃಪ್ತಿ ಸಂತೋಷ ಪಾಟೀಲ, ಲಕ್ಷ್ಮೀ ಅರವಿಂದ ಪಾಟೀಲ, ರಾಜೇಶ್ವರಿ ಪಾಟೀಲ ಸಹೋದರ
ಸಂಬಂಧಿಗಳೊಂದಿಗೆ ಗದಗಿನ ವಾರ್ಡ್‌ ನಂ. 3 ಮತ್ತು 4 ಸೇರಿದಂತೆ ಅವಳಿ ನಗರದ ವಿವಿಧೆಡೆ ಮನೆ ಮನೆ ಭೇಟಿ ನೀಡಿ ಮತಯಾಚಿಸಿದರು. ಈ ವೇಳೆ ಕಾಂಗ್ರೆಸ್‌ ಸಾಧನೆಗಳು ಮತ್ತು ಗದಗ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದಿಟ್ಟು ಮತ ಬೇಡಿದರು.
ಬಹುತೇಕ ತಮ್ಮ ಕುಟುಂಬ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಪಾಟೀಲ ಕುಟುಂಬದ ನಾರಿಮಣಿಯರು, ಇದೀಗ ಚುನಾವಣಾ ಪ್ರಚಾರದ ಮೂಲಕ ಸಾರ್ವಜನಿಕರ ಗಮನ ಸೆಳೆಯುತ್ತಿದ್ದಾರೆ.
ಸರಳ, ಸಜ್ಜನಿಕೆಯ ವ್ಯಕ್ತಿತ್ವ ಹಾಗೂ ಅನುಭವಿ ರಾಜಕಾರಣಿಯಾಗಿರುವ ಡಿ.ಆರ್‌. ಪಾಟೀಲ ಆಯ್ಕೆಯಿಂದ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿಯಾಗುತ್ತದೆ. ಅವರ ಗೆಲುವಿಗಾಗಿ ನಾವು ಸಾಮಾನ್ಯ ಕಾರ್ಯರ್ತರಂತೆ ದುಡಿಯುತ್ತಿದ್ದೇವೆ. ಮತಯಾಚನೆ ಮಾಡಿದ ಕಡೆಗಳಲ್ಲಿ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಡಿ.ಆರ್‌.ಪಾಟೀಲ ಅವರ ಗೆಲುವು ನಿಶ್ಚಿತ.
ಲಕ್ಷ್ಮೀ ಪಾಟೀಲ, ಡಿ.ಆರ್‌. ಪಾಟೀಲರ ಸೊಸೆ
„ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.