ಗ್ರಾಪಂ ಉಪ ಚುನಾವಣೆ ಫಲಿತಾಂಶ ಪ್ರಕಟ

ಜಿಗಳೂರ-ಮಾಡಲಗೇರಿ ವಾರ್ಡ್‌ಗಳಿಂದ 6 ಅಭ್ಯರ್ಥಿಗಳ ಆಯ್ಕೆ

Team Udayavani, May 23, 2022, 4:27 PM IST

19

ರೋಣ: ತಾಲೂಕಿನ ಹೊಸಳ್ಳಿ ಗ್ರಾಪಂ ವ್ಯಾಪ್ತಿಯ ಜಿಗಳೂರ ಗ್ರಾಮದ 5 ಸ್ಥಾನಗಳಿಗೆ ಹಾಗೂ ಮಾಡಲಗೇರಿ ಗ್ರಾಮದ 1 ಸ್ಥಾನಕ್ಕೆ ಶುಕ್ರವಾರ ಗ್ರಾಪಂ ಉಪ ಚುನಾವಣೆಯಲ್ಲಿ, ಜಿಗಳೂರ ಗ್ರಾಮದ 1ನೇ ವಾರ್ಡ್‌ನಿಂದ 3 ಅಭ್ಯರ್ಥಿಗಳು ಮತ್ತು 2ನೇ ವಾರ್ಡ್ ನಿಂದ 2 ಅಭ್ಯರ್ಥಿಗಳು ಹಾಗೂ ಮಾಡಲಗೇರಿ ಗ್ರಾಮದ ಒಬ್ಬ ಅಭ್ಯರ್ಥಿ ಗೆಲುವಿನ ನಗೆ ಬೀರಿದರು.

ಗ್ರಾಪಂ ಚುನಾವಣೆಯ ಮತ ಏಣಿಕೆ ಕಾರ್ಯ ಪಟ್ಟಣದ ತಹಶೀಲ್ದಾರ್‌ ಕಚೇರಿ ಸಭಾಭವನದಲ್ಲಿ ರವಿವಾರ ನಡೆಯಿತು. ಜಿಗಳೂರ ಗ್ರಾಮದ 1 ನೇ ವಾರ್ಡನಿಂದ ರೇಖಾ ಮಾದರ ( ಎಸ್‌ಸಿ ಮೀಸಲು) 215 ಮತಗಳು, ಶೋಭಾ ಗೊಟಗೊಂಡ (ಹಿಂದುಳಿದ ಅ ವರ್ಗ) 312 ಮತಗಳು ಮತ್ತು ಶಿವಯೋಗಿ ಥಡಿ (ಸಾಮಾನ್ಯ) 276 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಪ್ರತಿಸ್ಪರ್ಧಿಗಳಾದ ಈರನಗೌಡ ಶಿವಯೋಗಿ(179 ಮತ), ಕಲ್ಲನಗೌಡ ಗೌಡರ( 60 ಮತ), ಭೀಮವ್ವ ಶೀಪ್ರಿ (227), ಯಲ್ಲವ್ವ ಮಾದರ(123), ಶೀತವ್ವ ಮಾದರ( 155), ಮತ್ತು ಶೇಖರಪ್ಪ ಗೋಲಪ್ಪನವ ಇವರು 117 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

ಒಟ್ಟು ಚಲಾವಣೆಗೊಂಡ 612 ಮತಗಳಲ್ಲಿ 22 ಮತಗಳು ತಿರಸ್ಕೃತಗೊಂಡಿವೆ. 2 ನೇ ವಾರ್ಡನಿಂದ ಅನ್ನಪೂರ್ಣ ಫಕೀರಪ್ಪ ವೀರಗಾರ(ಎಸ್‌ಟಿ ಮಹಿಳೆ) ಇವರು 253 ಮತಗಳು ಹಾಗೂ ಪ್ರವೀಣ ಬಸೇವಡೆಯರ(ಸಾಮಾನ್ಯ) 332 ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದಾರೆ. ಪ್ರತಿಸ್ಪರ್ಧಿ ಅಂದನಗೌಡ ನರೇಗಲ್ಲ(35 ಮತಗಳು), ಬಸವ್ವ ತಳವಾರ(208) ಮತ್ತು ಶರಣಪ್ಪ ಶೀಪ್ರಿ(235 ಮತಗಳು) ಪರಾಭವಗೊಂಡಿದ್ದಾರೆ. ಒಟ್ಟು ಚಲಾವಣೆಗೊಂಡ 594ರಲ್ಲಿ 27 ಮತಗಳು ತಿರಸ್ಕೃತಗೊಂಡಿವೆ. ಇನ್ನು ಮಾಡಲಗೇರಿ ಗ್ರಾಮದ ಭೀಮವ್ವ ಅಮರಪ್ಪ ಪೂಜಾರ 315 ಮತಗಳನ್ನು ಪಡೆದ ಗೆಲುವು ಸಾಧಿಸಿದ್ದಾರೆ.

ಪ್ರತಿಸ್ಪರ್ಧಿಹನಮವ್ವ ರಂಗಪ್ಪ ಪೂಜಾರ 304 ಮತಗಳನ್ನು ಪಡೆದು 11 ಮತಗಳ ಅಂತರದಲ್ಲಿ ಸೋಲೊಪ್ಪಿಕೊಂಡರು. ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿದಂತೆ ಅಭಿಮಾನಿಗಳು ಗೆದ್ದ ಅಭ್ಯರ್ಥಿಗಳನ್ನು ಹೆಗಲ ಮೇಲೆ ಹೊತ್ತು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.

ಸಂಭ್ರಮಾಚರಣೆಯಲ್ಲಿ ಮಾಡಲಗೇರಿ ಬಿಜೆಪಿ ಮುಖಂಡರಾದ ವೆಂಕನಗೌಡ ಗೋವಿಂದಗೌಡ್ರ, ಶರಣಪ್ಪಗೌಡ ಹಿರೇಸಕ್ಕರಗೌಡ್ರ, ರುದ್ರಗೌಡ್ರ ಅಮಾತಿಗೌಡ್ರ, ಮುತ್ತುರಾಜ ಹಿರೇಸಕ್ಕರಗೌಡ್ರ, ಶಿವನಗೌಡ ತಿಪ್ಪನಗೌಡ್ರ, ಶಿವಪುತ್ರಪ್ಪ ಭಾವಿ, ಶಿವಶಂಕರಪ್ಪ ಕುರಬನಾಳ, ಭರಮಗೌಡ ರಾಯನಗೌಡ್ರ, ಶರಣಪ್ಪ ಶಿರಗುಂಪಿ, ಹುಲ್ಲಪ್ಪ ಕೆಂಗಾರ, ಗುರುನಾಥ ಹಿರೇಸಕ್ಕರಗೌಡ್ರ, ಶಿವನಗೌಡ ಅಮಾತಿಗೌಡ್ರ, ಮೈಲಾರಪ್ಪ ಮಾದರ, ಶಂಕರಗೌಡ ರಾಯನಗೌಡ್ರ, ಪರುತಗೌಡ ಅಮಾತಿಗೌಡ್ರ, ಬಸನಗೌಡ ಹಿರೇಸಕ್ಕರಗೌಡ್ರ, ಮಲ್ಲಪ್ಪ ಭಾವಿ, ಬಸನಗೌಡ ಅಮಾತಿಗೌಡ್ರ, ಮಹಿಳಾ ಕಾರ್ಯಕರ್ತೆಯರಾದ ಸುಶೀಲವ್ವ ಕುರಬನಾಳ, ಶಂಕ್ರವ್ವ ಹಿರೇಸಕ್ಕರಗೌಡ್ರ ಸೇರಿದಂತೆ ಅನೇಕ ಭಾಗವಹಿಸಿದ್ದರು.

ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಸವರಾಜ ಅಂಗಡಿ ಅವರು ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿದರು. ಮತ ಏಣಿಕೆ ಕಾರ್ಯ ಶಾಂತಯುತವಾಗಿ ಜರುಗಿತು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.