ಮತದಾರರ ಓಲೈಕೆಗೆ ಬಗೆ ಬಗೆಯ ಆಫರ್‌


Team Udayavani, Dec 25, 2020, 4:48 PM IST

ಮತದಾರರ ಓಲೈಕೆಗೆ ಬಗೆ ಬಗೆಯ ಆಫರ್‌

ಗದಗ: ಅಕ್ಕಾರ, ಅಣ್ಣಾರ ನಿಮ್ಮ ಮಗ-ಸೊಸೆ ಬೆಂಗಳೂರಿನಲ್ಲಿದ್ದಾರಲ್ಲ ಅವರಿಗೆ ಬಸ್‌ ಟಿಕೆಟ್‌ ಮಾಡಿಸ್ಲೇನ್‌. ಅವರು ಕಾರ್‌ ತಗೊಂಡು ಬರ್ತಾರ ಅಂದ್ರೆ ಪೆಟ್ರೋಲ್‌ ಬಿಲ್‌ ಕೊಡ್ತೇನಿ. ಬಂದ ನಮಗ ಓಟ್‌ ಮಾಡಾಕ್‌ ಹೇಳಿದ ಇದು ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ನಡೆಯುತ್ತಿರುವ 2ನೇ ಹಂತದ ಗ್ರಾ.ಪಂ. ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಹುತೇಕ ಅಭ್ಯರ್ಥಿಗಳು ದೂರದ ಊರುಗಳಿಂದಮತದಾರರನ್ನು ಕರೆತರಲು ಬಗೆ ಬಗೆಯ ಆಫರ್‌ ನೀಡುತ್ತಿರುವ ಪರಿ.

ಹೌದು, ಇತ್ತೀಚೆಗೆ ನಡೆದ ಮೊದಲನೇಹಂತದ ಚುನಾವಣೆಯಲ್ಲಿ ಅಭ್ಯರ್ಥಿಗಳ ಮಧ್ಯೆ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಇದೇ ಕಾರಣಕ್ಕೆ ಶೇ.79.12 ರಷ್ಟು ಮತದಾನ ದಾಖಲಾಗಿದೆ ಎನ್ನಲಾಗಿದೆ.ಹೀಗಾಗಿ, ಎರಡನೇ ಹಂತದಲ್ಲಿಚುನಾವಣೆ ಎದುರಿಸುತ್ತಿರುವ ಅಭ್ಯರ್ಥಿಗಳು ಎಚ್ಚೆತ್ತುಕೊಂಡಿದ್ದಾರೆ.ಶತಾಯಗತಾಯ ಈ ಬಾರಿ ಗ್ರಾಮ ಪಂಚಾಯತಿ ಪ್ರವೇಶಿಸಬೇಕು ಎಂದು ಪಣತೊಟ್ಟಿರುವ ಅಭ್ಯರ್ಥಿಗಳು ನಾನಾ ರೀತಿಯ ಕಸರತ್ತುಗಳನ್ನು ಆರಂಭಿಸಿದ್ದಾರೆ. ಇಷ್ಟು ದಿನಗಳ ಕಾಲ ಸ್ಥಳೀಯ ಮತದಾರರ ಓಲೈಕೆಯಲ್ಲಿ ತೊಡಗಿದ್ದ ಅಭ್ಯರ್ಥಿಗಳು,ಇದೀಗ ಬೇರೆ ಬೇರೆ ಊರುಗಳಲ್ಲಿರುವಸ್ಥಳೀಯ ಮತದಾರರನ್ನು ಚುನಾವಣೆಗೆಕರೆಯಿಸುವ ನಿಟ್ಟಿನಲ್ಲಿ ಗಮನ ಹರಿಸಿದ್ದಾರೆ.

ಅತ್ಯಧಿಕ ಮತ ಪಡೆಯುವ ಮೂಲಕ ಚುನಾವಣಾ ಕಣದಲ್ಲಿ ಧೂಳೆಬ್ಬಿಸಲುರಣತಂತ್ರವನ್ನೇ ಹೆಣೆಯುತ್ತಿದ್ದಾರೆ.ಪಕ್ಷ-ನಾಯಕರಿಗೂ ಪ್ರತಿಷ್ಠೆ: ಜಿಲ್ಲೆಯಲ್ಲಿಎರಡು ಹಂತಗಳಲ್ಲಿ ಗ್ರಾ.ಪಂ. ಚುನಾವಣೆನಡೆಯುತ್ತಿದೆ. ಆದರೆ, ಈಗಾಗಲೇಮೊದಲ ಹಂತದಲ್ಲಿ ಮೂರು ತಾಲೂಕಿನ801 ಸ್ಥಾನಗಳಿಗೆ ಚುನಾವಣೆ ನಡೆದಿದ್ದರೆ,2ನೇ ಹಂತದಲ್ಲಿ ನಾಲ್ಕು ತಾಲೂಕಿನ 64ಗ್ರಾ.ಪಂ.ಗಳ 850 ಸ್ಥಾನಗಳಿಗೆ ಲೋಕಲ್‌ ಫೈಟ್‌ ನಡೆಯಲಿದೆ. 49 ಸ್ಥಾನಗಳು ಹೆಚ್ಚಿವೆ. ಅಲ್ಲದೇ, ಮೂರೂ ನಾಲ್ಕೂ ತಾಲೂಕಿನ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಇರುವುದು ಆಡಳಿತಾರೂಢ ಬಿಜೆಪಿ ಹಾಗೂವಿಪಕ್ಷ ಕಾಂಗ್ರೆಸ್‌ ನಾಯಕರಿಗೂ ತಮ್ಮಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವುದುಪ್ರತಿಷ್ಠೆಯ ವಿಷಯವಾಗಿದೆ. ಹೀಗಾಗಿ,ಅಭ್ಯರ್ಥಿಗಳಲ್ಲಿ ಬಿಗ್‌ ಫೈಟ್‌ ಏರ್ಪಟ್ಟಿದೆ. ಮುಂಡರಗಿ ತಾಲೂಕಿನ 18 ಗ್ರಾ.ಪಂ.ಗಳ 253 ಸ್ಥಾನಗಳಿಗೆ 702 ಅಭ್ಯರ್ಥಿಗಳುಸ್ಪರ್ಧೆಯಲ್ಲಿ ಉಳಿದಿದ್ದಾರೆ. ನರಗುಂದತಾಲೂಕಿನ 13 ಗ್ರಾ.ಪಂ.ಗಳ 160 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, 378 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಯಲ್ಲಿದ್ದಾರೆ. ರೋಣ ತಾಲೂಕಿನ 312 ಸ್ಥಾನಗಳಿಗೆ 970 ಅಭ್ಯರ್ಥಿಗಳು ಸಮರ ಸಾರಿದ್ದಾರೆ. ಗಜೇಂದ್ರಗಡ ತಾಲೂಕಿನಒಟ್ಟು 9 ಗ್ರಾ.ಪಂ.ಯ 125 ಸ್ಥಾನಗಳಿಗೆಚುನಾವಣೆ ನಡೆಯಲಿದ್ದು, 181ಅಭ್ಯರ್ಥಿಗಳು ಗೆಲುವಿಗೆ ಸೆಣಸುತ್ತಿದ್ದಾರೆ. ಗ್ರಾಪಂ ಚುನಾವಣೆಯಲ್ಲಿ ಗೆಲುವಿಗಾಗಿ ಹೋರಾಡುತ್ತಿರುವ ಅಭ್ಯರ್ಥಿಗಳು, ಮತದಾನದ ದಿನಾಂಕ ಸಮೀಪಿಸುತ್ತಿದ್ದಂತೆ ಹೊಸ ಹೊಸ ರಾಜಕೀಯ ಪಟ್ಟುಗಳನ್ನು ಹಾಕುತ್ತಿರುವುದು ಸುಳ್ಳಲ್ಲ

850 ಸ್ಥಾನಕ್ಕೆ 2439 ಅಭ್ಯರ್ಥಿಗಳ ಫೈಟ್‌ : ಜಿಲ್ಲೆಯ ಮುಂಡರಗಿ,ನರಗುಂದ, ರೋಣ ಹಾಗೂ ಗಜೇಂದ್ರಗಡ ತಾಲೂಕಿನಲ್ಲಿ 2ನೇಹಂತದಲ್ಲಿ ಗ್ರಾ.ಪಂ. ಚುನಾವಣೆನಡೆಯುತ್ತಿದೆ. ಒಟ್ಟು 64 ಗ್ರಾ.ಪಂ. ಗಳ 895 ಸ್ಥಾನಗಳಲ್ಲಿ 9 ಸ್ಥಾನಗಳಿಗೆನಾಮಪತ್ರಗಳುಸಲ್ಲಿಕೆಯಾಗದೇಖಾಲಿ ಉಳಿದಿದ್ದರೆ, 36 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ.ಇನ್ನುಳಿದ 850 ಸ್ಥಾನಗಳಿಗೆ ಚುನಾ ವಣೆ ನಡೆಯಲಿದ್ದು, 1144 ಮಹಿಳೆಯರು ಸೇರಿದಂತೆ 2439 ಅಭ್ಯರ್ಥಿಗಳು ಗೆಲುವಿಗಾಗಿ ಸೆಣಸುತ್ತಿದ್ದಾರೆ.

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೋಣ: ಬಹುತೇಕ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ

ರೋಣ: ಬಹುತೇಕ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ

hk-patil

Gadag ಹಿರಿಯ ರಾಜಕಾರಣಿ ಎಚ್.ಕೆ.ಪಾಟೀಲರಿಗೆ 6ನೇ ಬಾರಿಗೆ ಸಚಿವ ಪಟ್ಟ

ಲಕ್ಷ್ಮೇಶ್ವರ: 2-3 ದಿನಕ್ಕೊಮ್ಮೆ ನೀರು ಪೂರೈಸದಿದ್ದರೆ ಪ್ರತಿಭಟನೆ

ಲಕ್ಷ್ಮೇಶ್ವರ: 2-3 ದಿನಕ್ಕೊಮ್ಮೆ ನೀರು ಪೂರೈಸದಿದ್ದರೆ ಪ್ರತಿಭಟನೆ

ಗದಗ: ಮತ್ತೆ ಆವರಿಸುತ್ತಾ ಅತಿವೃಷ್ಟಿಯ ಕಾರ್ಮೋಡ?

ಗದಗ: ಮತ್ತೆ ಆವರಿಸುತ್ತಾ ಅತಿವೃಷ್ಟಿಯ ಕಾರ್ಮೋಡ?

tdy-6

ಹಿತ್ತಲಿನಲ್ಲಿ ಕಟ್ಟಿ ಹಾಕಿದ್ದ ಹಸು,ಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ: ಚಿರತೆ ದಾಳಿ ಶಂಕೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ಮೂರು ತಿಂಗಳಿಂದ ಅಂಗನವಾಡಿ ಮಕ್ಕಳಿಗಿಲ್ಲ ಹಾಲು

ಮೂರು ತಿಂಗಳಿಂದ ಅಂಗನವಾಡಿ ಮಕ್ಕಳಿಗಿಲ್ಲ ಹಾಲು