ಗಾಂಧಿ ವೇಷಧಾರಿಯಿಂದ ಜಾಗೃತಿ

ಗ್ರಂಥ ಜೋಳಿಗೆ..ಮೋದಿ ಬಳಿಗೆ ಪಾದಯಾತ್ರೆ , 45ಕ್ಕೂ ಹೆಚ್ಚು ಗ್ರಾಮಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಪ್ರೇರಣೆ

Team Udayavani, Oct 2, 2020, 5:20 PM IST

Gadaga-tdy-1

ಗದಗ: ದೆಹಲಿ ಕುತುಬ್‌ ಮಿನಾರ್‌ ಎದುರು ಗಾಂಧಿ ವೇಷಧಾರಿ ಮುತ್ತಣ್ಣ ತಿರ್ಲಾಪುರ.

ಗದಗ: ಗಾಂಧಿ ವೇಷ ಧರಿಸಿ ಸಾಮಾಜಿಕ ಸಮಸ್ಯೆಗಳು ಹಾಗೂ ಗ್ರಂಥ ಜೋಳಿಗೆ ಅಭಿಯಾನದ ಮೂಲಕ ಗಮನ ಸೆಳೆದಿರುವ ರೋಣ ತಾಲೂಕಿನ ಕರಕೀಕಟ್ಟಿ ಗ್ರಾಮದ ಮುತ್ತಣ್ಣ ತಿರ್ಲಾಪುರ ಗಾಂಧಿ  ಜಯಂತಿ ನಿಮಿತ್ತ “ಗ್ರಂಥ ಜೋಳಿಗೆ-ಮೋದಿ ಬಳಿಗೆ’ ಎಂಬ ಘೋಷಣೆಯೊಂದಿಗೆ ಪಾದಯಾತ್ರೆಯಲ್ಲಿ ದೆಹಲಿ ತಲುಪಿದ್ದಾರೆ. ಈ ನಡುವೆ ಸುಮಾರು 45ಕ್ಕೂ ಹೆಚ್ಚು ಗ್ರಾಮಗಳಲ್ಲಿ ಗ್ರಂಥಾಲಯಗಳ ಸ್ಥಾಪನೆಗೆ ಪ್ರೇರಣೆಯಾಗಿದ್ದಾರೆ.

ಹೌದು. 51 ವರ್ಷದ ಮುತ್ತಣ್ಣ ತಿರ್ಲಾಪುರ ಶಾಲೆಯನ್ನೇ ಕಾಣದಿದ್ದರೂ ಸಾಮಾಜಿಕ ಸಮಸ್ಯೆಗಳು ಹಾಗೂ ಶಿಕ್ಷಣ ಪರ ಜಾಗೃತಿಗೆ ಎತ್ತಿದ ಕೈ. ಜಿಲ್ಲೆಯ ಕಪ್ಪತ್ತಗುಡ್ಡ ಮತ್ತು ಮಹದಾಯಿ ವಿಚಾರಗಳ ಕುರಿತು ಜನರು ಹೋರಾಟಕ್ಕಿಳಿಯುತ್ತಿದ್ದರೆ, ಗಾಂಧಿ ವೇಷ ಧರಿಸಿ, ಕೈಯಲ್ಲಿ ಕೋಲು ಹಿಡಿದು ಮುತ್ತಣ್ಣ ಪ್ರತ್ಯಕ್ಷವಾಗುತ್ತಿದ್ದರು. ಅದರಂತೆ ಇತ್ತೀಚೆಗೆ ಗ್ರಾಮೀಣ ಭಾಗದಲ್ಲಿ ಕೋವಿಡ್ ತಡೆಗೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣಹತ್ಯೆ ನಿಷೇಧ ಸೇರಿದಂತೆ ಸಾಮಾಜಿಕ ಸಮಸ್ಯೆಗಳ ಕುರಿತು ಗಾಂಧಿ ವೇಷ ಧರಿಸಿ ಜಾಗೃತಿ ಮೂಡಿಸಿ ಗಮನ ಸೆಳೆದಿದ್ದರು. ಇದೀಗ ಗ್ರಂಥ ಜೋಳಿಗೆ ಮೋದಿ ಬಳಿಗೆ ಎಂಬ ಘೋಷವಾಕ್ಯದೊಂದಿಗೆ ದೆಹಲಿಗೆ ಪಾದಯಾತ್ರೆ ಬೆಳೆಸಿದ್ದಾರೆ. ಸುಮಾರು 1,900 ಕಿ.ಮೀ. ದೂರವನ್ನು ಕೇವಲ ಒಂದು ತಿಂಗಳ ಅವ ಧಿಯಲ್ಲಿ ಕ್ರಮಿಸಿದ್ದು, ಕೆಲವೆಡೆ ಟ್ರಕ್‌ ಚಾಲಕರು ಹಾಗೂ ಖಾಸಗಿ ವಾಹನಗಳ ಸವಾರರು ನೆರವಾಗಿದ್ದಾರೆ.

ಏನಿದು “ಗ್ರಂಥ ಜೋಳಿಗೆ’? : ವೃತ್ತಿಯಲ್ಲಿ ಕೃಷಿ ಕಾರ್ಮಿಕ ಹಾಗೂ ಚಿಕ್ಕದೊಂದು ಹೋಟೆಲ್‌ ಹೊಂದಿರುವ ಮುತ್ತಣ್ಣ, ಭಿಕ್ಷೆ ರೂಪದಲ್ಲಿ ಬಂದಿರುವ ಪುಸ್ತಕಗಳನ್ನೇ ಮನೆಯಲ್ಲಿ ಅಚ್ಚುಕಟ್ಟಾಗಿ ಹೊಂದಿಸಿ, ಪುಟ್ಟದೊಂದು ಗ್ರಂಥಾಲಯವನ್ನಾಗಿಸಿದ್ದಾರೆ. ಅದರ ಮುಂದುವರಿದ ಭಾಗವಾಗಿ “ಗ್ರಂಥ ಜೋಳಿಗೆ-ಮೋದಿಯ ಬಳಿಗೆ’ ಎಂಬ ಧ್ಯೇಯ ವಾಕ್ಯದೊಂದಿಗೆ ಮಹಾತ್ಮ ಗಾಂಧಿ ವೇಷಧಾರಿಯಾಗಿ ಪಾದಯಾತ್ರೆ ಬೆಳೆಸಿರುವ ಮುತ್ತಣ್ಣ, ಪ್ರತಿನಿತ್ಯ ಗರಿಷ್ಠ 50 ಕಿ.ಮೀ. ಗಳಂತೆ ಕ್ರಮಿಸಿದ್ದಾರೆ. ಈ ನಡುವೆ ರಾತ್ರಿ ವಾಸ್ತವ್ಯ ಮಾಡುವ ಗ್ರಾಮಗಳಲ್ಲಿ ಗ್ರಂಥಾಲಯಗಳನ್ನು ಆರಂಭಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಸಾರ್ವಜನಿಕರು ತಮ್ಮ ಮನೆಯಲ್ಲಿರುವ ಹಳೆಯ ಪುಸ್ತಕಗಳನ್ನು ಗ್ರಾಮದ ಯಾವುದಾದರೊಂದು ದೇವಸ್ಥಾನ ಹಾಗೂ ಸಮುದಾಯ ಭವನಗಳಲ್ಲಿ ಸಂಗ್ರಹಿಸಿ, ಗ್ರಂಥಾಲಯ ಆರಂಭಿಸಲು ಮುಂದೆ ಬಂದಿದ್ದಾರೆ. ಇದರಿಂದ ಮಕ್ಕಳು ಹಾಗೂ ಜನರ ಜ್ಞಾನಾರ್ಜನೆಗೆ ನೆರವಾಗುತ್ತದೆ ಎಂಬ ಪ್ರೇರಣಾದಾಯಕ ಮಾತುಗಳೊಂದಿಗೆ ಜನರಲ್ಲಿ ಸಾಕ್ಷರತೆಯ ಪ್ರಜ್ಞೆ ಮೂಡಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರದ ಗಿರಯಾಲಕೆಬಿ, ಎಂ.ಕೆ.ಹುಬ್ಬಳ್ಳಿ, ಕಿತ್ತೂರು, ಗೋಕಾಕ, ಕೊಳವಿ, ಉಪ್ಪಾರಟ್ಟಿ, ಬೆಡಕಿಹಾಳ, ಚಿಕ್ಕಬಾಗೇವಾಡಿ, ಹಿರೇಬಾಗೇವಾಡಿ, ಬೆಣಚಿನಮರಡಿ, ಅನಂತಪುರ, ಮಾಲಾಬಾದ, ಪಾರ್ತನಹಳ್ಳಿ, ಮಹಾರಾಷ್ಟ್ರದ ಹಿತ್ತಲಕಾರಂಜಿ ಸೇರಿದಂತೆ ಸುಮಾರು 45 ಗ್ರಾಮಗಳಲ್ಲಿ ಗ್ರಂಥಾಲಯಗಳು ಬಾಗಿಲು ತೆರೆದಿವೆ ಎನ್ನಲಾಗಿದೆ.

ಅ. 2 ರಂದು ದೆಹಲಿಯ ರಾಜಘಾಟ್‌ ನಲ್ಲಿರುವ ಬಾಪೂಜಿ ಸಮಾಧಿಯ ದರ್ಶನ ಪಡೆಯಬೇಕು. ಅವಕಾಶ ಸಿಕ್ಕರೆ, ಪ್ರಧಾನಮಂತ್ರಿಗಳನ್ನು ಕಂಡು, ಪುಸ್ತಕ ನೀಡಬೇಕೆಂಬ ಆಸೆಯಿತ್ತು. ಆದರೆ, ಕೋವಿಡ್‌-19 ಹಿನ್ನೆಲೆಯಲ್ಲಿ ಅದ್ಯಾವುದಕ್ಕೂ ಅನುತಿ ದೊರೆಯುವುದಿಲ್ಲ ಎಂಬುದು ಖಾತ್ರಿಯಾಗಿದ್ದರಿಂದ ಯಾರಿಗೂ ಮನವಿ ಸಲ್ಲಿಸಿಲ್ಲ. ಆದರೆ, ಪಾದಯಾತ್ರೆ ವೇಳೆ ಭಾಷೆ  ತಡಕಾದರೂ, ಸಾರ್ವಜನಿಕರು ಪ್ರೀತಿಯಿಂದ ಅನ್ನ, ಆಶ್ರಯ ಕಲ್ಪಿಸಿದರು. ಗ್ರಂಥಾಲಯ ಸ್ಥಾಪನೆಯೊಂದಿಗೆ ಗ್ರಾಮಕ್ಕೊಂದು ಲಕ್ಷ ವೃಕ್ಷ ಕಲ್ಪನೆ ಮೂಲಕ ಹಸಿರೀಕರಣ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಭವಿಷ್ಯದಲ್ಲಿ ಶಿಕ್ಷಣ ಮತ್ತು ಹಸಿರ ಸಿರಿಯಿಂದ ಸಮೃದ್ಧವಾಗಬೇಕು.  –ಮುತ್ತಣ್ಣ ಚನಬಸ್ಸಪ್ಪ ತಿರ್ಲಾಪೂರ, ಗಾಂಧಿ ವೇಷಧಾರಿ

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.