ಜಿ.ಎಸ್‌.ಪಾಟೀಲ ಸೇವೆ ಅಗತ್ಯ: ಘೋರ್ಪಡೆ

ರಾಜಕೀಯ ಮುತ್ಸದ್ದಿತನ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ

Team Udayavani, Apr 11, 2022, 6:57 PM IST

ಜಿ.ಎಸ್‌.ಪಾಟೀಲ ಸೇವೆ ಅಗತ್ಯ: ಘೋರ್ಪಡೆ

ಗಜೇಂದ್ರಗಡ: ಅಧಿಕಾರವಿದ್ದಾಗ ಹಿಗ್ಗದೇ, ಅಧಿಕಾರ ಇಲ್ಲದಿದ್ದಾಗ ಕುಗ್ಗದೇ ಸದಾ ಜನರ ಮಧ್ಯೆಯಲ್ಲಿಯೇ ಇದ್ದು ಸಮಾಜಮುಖೀ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡ ಸಜ್ಜನ ರಾಜಕಾರಣಿ ಜಿ.ಎಸ್‌.ಪಾಟೀಲ ಅವರ ಸೇವೆ ರೋಣ ಮತಕ್ಷೇತ್ರಕ್ಕೆ ಅಗತ್ಯವಾಗಿದೆ ಎಂದು ಗಜೇಂದ್ರಗಡ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶಿವರಾಜ ಘೋರ್ಪಡೆ ಹೇಳಿದರು.

ಪಟ್ಟಣದ ಶ್ರೀ ಕಾಲಕಾಲೇಶ್ವರ ವೃತ್ತದಲ್ಲಿ ಜಿ.ಎಸ್‌. ಪಾಟೀಲ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಿ.ಎಸ್‌.ಪಾಟೀಲ ಅವರ 74ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ರಾಜಕೀಯ ಕ್ಷೇತ್ರದ ಜನರ ವಿಶ್ವಾಸ ಕಳೆದುಕೊಂಡಿರಬಹುದು.

ಆದರೆ, ರಾಜಕೀಯದಲ್ಲಿಯೇ ಸಮಾಜ ಮುಖೀ ಕಾರ್ಯಗಳನ್ನು ಮಾಡುವ ಮಹಾನ್‌ ನಾಯಕರು ಇನ್ನೂ ನಮ್ಮ ಕಣ್ಮುಂದೆ ಇದ್ದಾರೆ. ಅವರ ಸಾಲಿನಲ್ಲಿ ಜಿ.ಎಸ್‌. ಪಾಟೀಲ ಅವರೂ ನಿಲ್ಲುತ್ತಾರೆ ಎಂದರು. ಪುರಸಭೆ ವಿರೋಧ ಪಕ್ಷದ ನಾಯಕ ಮುರ್ತುಜಾ ಡಾಲಾಯತ್‌ ಮಾತನಾಡಿ, ತಮ್ಮ ಇಳಿವಯಸ್ಸಿನಲ್ಲೂ ಜನಪರ ಕಾರ್ಯ ಕ್ಕಾಗಿ ಅತ್ಯುತ್ಸಾಹದಿಂದ ಶ್ರಮಿಸುವ ಮೂಲಕ ಬಡವರಿಗಾಗಿ ತಮ್ಮನ್ನು ಸಮರ್ಪಿಸಿಕೊಂಡು ಜನಸೇವೆಯಲ್ಲಿದ್ದಾರೆ. ಜಿ.ಎಸ್‌. ಪಾಟೀಲ
ಅವರ ರಾಜಕೀಯ ಮುತ್ಸದ್ದಿತನ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರು ಕೈಗೊಳ್ಳುವ ನಿರ್ಣಯಗಳು, ಯೋಜನೆಗಳಲ್ಲಿ ಮತ ಕ್ಷೇತ್ರದ ಅಭ್ಯುದಯ ಅಡಗಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಜಿ.ಎಸ್‌. ಪಾಟೀಲ ಅವರ ಸೇವೆ ಮತಕ್ಷೇತ್ರಕ್ಕೆ ಅಗತ್ಯವಾಗಿದೆ ಎಂದರು.

ಕಾಂಗ್ರೆಸ್‌ ಹಿರಿಯ ಮುಖಂಡ ಅಶೋಕ ಬಾಗಮಾರ ಮಾತನಾಡಿ, ಮಾಜಿ ಶಾಸಕ ಜಿ.ಎಸ್‌. ಪಾಟೀಲ ಅವರ ಜನ್ಮದಿನಾಚರಣೆ ಪ್ರಯುಕ್ತ ಹಸಿದವರಿಗೆ ಅನ್ನ ನೀಡುವುದು, ದಣಿದವರ ಬಾಯಾರಿಸುವ ಅನ್ನದಾಸೋಹ ಕಾರ್ಯಕ್ರಮ ಸಮಾಜಮುಖೀ ಕಾರ್ಯವಾಗಿದೆ. ಇಂತಹ ಕಾರ್ಯಗಳು ಮೇಲಿಂದ ಮೇಲೆ ನಡೆಯಬೇಕೆಂದರು.

ಇದೇ ಸಂದರ್ಭದಲ್ಲಿ ಉಪಹಾರ ಮತ್ತು ಮಜ್ಜಿಗೆ ವಿತರಣೆ ಮಾಡಲಾಯಿತು. ಬಳಿಕ ಸರ್ಕಾರಿ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮಾಡಲಾಯಿತು. ಪುರಸಭೆ ಸದಸ್ಯರಾದ  ರಾಜು ಸಾಂಗ್ಲಿಕಾರ, ವೆಂಕಟೇಶ ಮುದಗಲ್‌, ಬಸವರಾಜ ಚನ್ನಿ, ಬಿ.ಎಸ್‌. ಶೀಲವಂತರ, ಶ್ರೀಧರ
ಬಿದರಳ್ಳಿ, ಅಪ್ಪು ಮತ್ತಿಕಟ್ಟಿ, ಯಲ್ಲಪ್ಪ ಬಂಕದ, ಮಹಾದೇವಪ್ಪ ಪವಾರ, ಉಮೇಶ ರಾಠೊಡ, ಶ್ರೀಧರ ಗಂಜಿಗೌಡರ, ಬಾಷಾ ಮುದಗಲ್ಲ, ಶರಣು ಪೂಜಾರ, ಎಚ್‌.ಎಸ್‌.ಸೋಂಪೂರ ಇತರರಿದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.