ಕನ್ನಡ ಧ್ವಜಾರೋಹಣ ನಿಷೇಧಕ್ಕೆ ಎಚ್.ಕೆ.ಪಾಟೀಲ ಆಕ್ರೋಶ
Team Udayavani, Nov 1, 2019, 6:36 PM IST
ಗದಗ: ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ಧ್ವಜಾರೋಹಣ ನಿಷೇಧಿಸಿರುವ ರಾಜ್ಯ ಸರ್ಕಾರ ಆದೇಶ ಅಪ್ರಬುದ್ಧತೆಯಿಂದ ಕೂಡಿದೆ. ಸರಕಾರದ ಈ ನಡೆ ನಾಡಿನ ಸಮಸ್ತ ಕನ್ನಡ ಅಭಿಮಾನಿಗಳ ಮನಸ್ಸು ಘಾಸಿಪಡಿಸಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಶಾಸಕ ಎಚ್.ಕೆ.ಪಾಟೀಲ ಕಿಡಿ ಕಾರಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಏಕೀಕರಣದ ಬಳಿಕ ಪ್ರತೀ ವರ್ಷ ಕನ್ನಡ ಬಾವುಟ ಹಾರಿಸಲಾಗುತ್ತದೆ. ಆದರೆ, ಈ ಬಾರಿ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ಧ್ವಜರೋಹಣ ಮಾಡಬಾರದು ಎಂಬ ರಾಜ್ಯ ಸರಕಾರದ ಆದೇಶ ಅಪಹಾಸ್ಯಕ್ಕೀಡು ಮಾಡಿದೆ. ರಾಜ್ಯ ಸರಕಾರ ಪೂರ್ವ ಪರ ಚಿಂತಿಸದೇ, ರಾತ್ರೋರಾತ್ರಿ ಈ ನಿರ್ಣಯ ಕೈಗೊಂಡಿದೆ. ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿ ನೆನಪಿಸಿ, ಅಭಿಮಾನ ಪಡುವ ಈ ದಿನದಂದು ಪ್ರಜಾಪ್ರಭುತ್ವ ಪದ್ಧತಿಯನ್ನು ಗಾಳಿಗೆ ತೂರಿರುವುದು ಖಂಡನೀಯ.
ನಾಡಿನ ಜನರ ಭಾವನಾತ್ಮಕ ವಿಚಾರಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಬೇಕಿತ್ತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಕ್ಷಣವೇ ಈ ನಿರ್ಧಾರ ಹಿಂಪಡೆಯಬೇಕು. ಇಲ್ಲವೇ ಮುಂದಿನ ದಿನಗಳಲ್ಲಿ ಜನರು ತಕ್ಕಪಾಠ ಕಲಿಸುತ್ತಾರೆ ಎಂದು ಎಚ್.ಕೆ ಪಾಟೀಲ್ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಅಧ್ಯಕ್ಷ ಸಿದ್ದು ಪಾಟೀಲ, ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ಕೆ.ಬಿ.ತಳಗೇರಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ