ಆಲಿಕಲ್ಲು ಮಳೆ: 9 ಕುರಿ ಸಾವು, 4 ಎಕರೆ ಪಪ್ಪಾಯಿ ಹಾನಿ
Team Udayavani, May 25, 2019, 12:24 PM IST
ಲಕ್ಷ್ಮೇಶ್ವರ: ತಾಲೂಕಿನ ಯಳವತ್ತಿ ಗ್ರಾಮದಲ್ಲಿ ಗುರುವಾರ ರಾತ್ರಿ ಸುರಿದ ಆಲಿಕಲ್ಲು ಮಳೆಗೆ 3 ಕುರಿ ಮತ್ತು 6 ಮರಿಗಳು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುರಿಗಳ ಮಾಲೀಕ ಶಿರಹಟ್ಟಿಯ ಮೈಲಾರಪ್ಪ ಅಂಕಲಿ ಎಂಬುದಾಗಿ ತಿಳಿದು ಬಂದಿದೆ.
ಗುರುವಾರ ತಡರಾತ್ರಿ ಯಳವತ್ತಿ ಗ್ರಾಮದ ಹೊರವಲಯದಲ್ಲಿ ಬೀಡು ಬಿಟ್ಟದ್ದ ವೇಳೆಯಲ್ಲಿ ಸುರಿದ ಅಕಾಲಿಕ ಆಲಿಕಲ್ಲು ಮಳೆಯ ಹೊಡೆತಕ್ಕೆ ಸಿಕ್ಕಿ 3 ದೊಡ್ಡ ಮತ್ತು 6 ಸಣ್ಣ ಮರಿಗಳು ಸತ್ತಿವೆ. ಯಳವತ್ತಿ ಗ್ರಾಮದಿಂದ 4-5 ಕಿಮೀ. ದೂರದ ಜಮೀನೊಂದರಲ್ಲಿ ಘಟನೆ ನಡೆದಿದ್ದರಿಂದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪಶು ವೈದ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸತ್ತ ಕುರಿಗಳ ಪರಿಶೀಲನೆ ಮಾಡಿದ್ದಾರೆ.
ಈ ಕುರಿತಂತೆ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಇದೇ ಗ್ರಾಮದ ವಿಶ್ವನಾಥ ಚಿಂಚಲಿ ಎಂಬುವರ 4 ಎಕರೆ ಪಪ್ಪಾಯಿ ಬೆಳೆ ಆಲಿಕಲ್ಲು ಮಳೆಗೆ ಹಾಳಾಗಿದೆ. ಗ್ರಾಮದಲ್ಲಿ ಬೀಸಿದ ಬಿರುಗಾಳಿಗೆ ಕೆಲವು ತಗಡಿನ ಶೆಡ್ಡುಗಳು ಕಿತ್ತಿವೆ. ಮಳೆಗಿಂತ ಗಾಳಿ, ಗುಡುಗು ಸಿಡಿನ ಅಬ್ಬರವೇ ಹೆಚ್ಚಾಗಿದ್ದು ಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು