ಸೂಡಿಯಲ್ಲಿ ಅರ್ಧಕ್ಕೆ ನಿಂತಿದೆ ಗ್ರಂಥಾಲಯ


Team Udayavani, Nov 11, 2019, 12:58 PM IST

gadaga-tdy-1

ಗಜೇಂದ್ರಗಡ: ಸೂಡಿ ಗ್ರಾಮದ ಜನತೆಯ ಜ್ಞಾನದೇಗುಲವಾದ ಗ್ರಂಥಾಲಯ ಕಟ್ಟಡ ಕಾಮಗಾರಿ ದಶಕ ಕಳೆದರೂ ಗ್ರಾಪಂ ಆಡಳಿತ ನಿರ್ಲಕ್ಷದಿಂದ ಅರ್ಧಕ್ಕೆ ನಿಂತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ 15 ವರ್ಷಗಳ ಹಿಂದೆ ಗ್ರಾಪಂ ಆಡಳಿತ ಶಾಸಕರ ಅನುದಾನ ಮತ್ತು ತಾಪಂ ಅನುದಾನದಡಿ 1.50ಲಕ್ಷ ರೂ. ವೆಚ್ಚದಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಆದರೆ ಅನುದಾನ ಕೊರತೆಯಿಂದ ಗ್ರಂಥಾಲಯ ಕಟ್ಟಡ ಮಾತ್ರ ಪೂರ್ಣಗೊಳ್ಳದೇ ಈವರೆಗೂ ಅರ್ಧಕ್ಕೆ ನಿಂತಿದೆ. ಗ್ರಾಪಂ ಕಾರ್ಯಾಲಯ ಪಕ್ಕದಲ್ಲೇ ಇರುವ ಗ್ರಂಥಾಲಯ ಕಟ್ಟಡಕ್ಕೆ ಅಡಿಪಾಯ ಹಾಕಿ ಅರ್ಧ ಗೋಡೆ ಕಟ್ಟಿದ್ದು ಬಿಟ್ಟರೆ ಇನ್ಯಾವ ಕೆಲಸವೂ ನಡೆದಿಲ್ಲ.

ಗ್ರಾಮದಲ್ಲಿ 1988ರಲ್ಲಿ ಆರಂಭವಾಗಿರುವ ಗ್ರಂಥಾಲಯದಲ್ಲಿ ಸದ್ಯ 215 ಜನ ಸದಸ್ಯತ್ವ ಪಡೆದಿದ್ದು, ಸಾಹಿತ್ಯ, ಕಾದಂಬರಿ, ಕಥೆ, ಹನಿಗವನ ಸೇರಿದಂತೆ 4300ಕ್ಕೂ ಅಧಿ ಕ ಅಮೂಲ್ಯ ಪುಸ್ತಕಗಳಿವೆ. ಗ್ರಾಪಂನ ಓಬೇರಾಯನ ಕಾಲದ ಕಟ್ಟಡದಲ್ಲೇ ಕಾರ್ಯ ನಿರ್ವಹಿಸುತ್ತಿರುವುದರಿಂದ ಗ್ರಂಥಾಲಯದಲ್ಲಿ ಪುಸ್ತಕಗಳನ್ನು ಜೋಡಿಸಲು ಸರಿಯಾದ ಸ್ಥಳಾವಕಾಶವಿಲ್ಲ. ವಿಶಾಲ ಗಾಳಿ-ಬೆಳಕಿನ ವ್ಯವಸ್ಥೆ ಇಲ್ಲದೇ ಗೋದಾಮಿನಂತಿರುವ ಕೊಠಡಿಯಲ್ಲಿ ಗ್ರಂಥಾಲಯ ನಡೆಸುವ ಸ್ಥಿತಿ ಎದುರಾಗಿದೆ ಎನ್ನುತ್ತಾರೆ ಓದುಗರು. ಗ್ರಾಮ ಪಂಚಾಯತಿಗಳು ಸಾರ್ವಜನಿಕರಿಗೆ ಊರಿಗೆ ಮೂಲ ಸೌಲಭ್ಯ ಕೊಡುವುದರ ಜತೆಗೆ ಗ್ರಾಮದ ಯುವಕರು, ಓದುಗರು, ಸಾಹಿತ್ಯಾಸಕ್ತರು ಮತ್ತು ಹಿರಿಯ ಜೀವಿಗಳ ಮುಖ್ಯ ಕೇಂದ್ರವಾಗಿರುವ ಗ್ರಂಥಾಲಯ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮುಂದಾಗಬೇಕಿದೆ. ಇಲ್ಲದಿದ್ದರೆ ಸಾರ್ವಜನಿಕರು ತರಾಟೆ ತೆಗೆದುಕೊಳ್ಳುವುದರಲ್ಲಿ ಸಂದೇಹವೇ ಇಲ್ಲ.

ಅರ್ಧಕ್ಕೆ ನಿಂತಿರುವ ಸೂಡಿ ಗ್ರಾಮದ ಗ್ರಂಥಾಲಯ ಕಟ್ಟಡ ಪೂರ್ಣಗೊಳಿಸಲು ಅನುದಾನ ಕೊರತೆಯಿದೆ. ಹೀಗಾಗಿ ಶಾಸಕರ ವಿಶೇಷ ಅನುದಾನದಲ್ಲಿ ಕಟ್ಟಡಕ್ಕೆ ಹಣ ಮಂಜೂರು ಮಾಡಲು ಸೂಡಿ ಗ್ರಾಪಂ ಆಡಳಿತ ವತಿಯಿಂದ ಶೀಘ್ರವೇ ಶಾಸಕ ಕಳಕಪ್ಪ ಬಂಡಿ ಅವರಿಗೆ ಮನವಿ ಮಾಡಲಾಗುವುದು. ರೇಣುಕಾ ಕಾಶಪ್ಪನವರ, ಗ್ರಾಪಂ ಅಧ್ಯಕ್ಷೆ.

 

-ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.