ಎಲ್ಲೆಡೆ ಹನುಮ ಜಯಂತಿ ಸಂಭ್ರಮ

ಸಿಂಗಾರಗೊಂಡ ಆಂಜನೇಯ ಸ್ವಾಮಿ ದೇವಸ್ಥಾನಗಳು

Team Udayavani, Apr 17, 2022, 3:10 PM IST

20

ಗದಗ: ಕೋವಿಡ್‌-19ರ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಸಾಂಕೇತಿಕ ಆಚರಣೆಗೆ ಸೀಮಿತವಾಗಿದ್ದ ಪವನ ಪುತ್ರ ಹನುಮ ಜಯಂತಿಯನ್ನು ಈ ಬಾರಿ ಎಲ್ಲೆಡೆ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.

ಹನುಮ ಜಯಂತಿ ನಿಮಿತ್ತ ಅವಳಿ ನಗರ ಸೇರಿದಂತೆ ಜಿಲ್ಲಾದ್ಯಂತ ಮಾರುತಿ ಮಂದಿರಗಳಲ್ಲಿ ಶನಿವಾರ ಶ್ರದ್ಧಾ-ಭಕ್ತಿಯಿಂದ ಪೂಜೆ, ಪುನಸ್ಕಾರ ನೆರವೇರಿಸಲಾಯಿತು.

ಗದಗ-ಬೆಟಗೇರಿ ಅವಳಿ ನಗರದ ವಿವಿಧೆಡೆಯಿರುವ ಆಂಜನೇಯ ಸ್ವಾಮಿ ದೇವಸ್ಥಾನಗಳನ್ನು ಬಣ್ಣ ಬಣ್ಣದ ರಂಗೋಲಿ, ತಳಿರು-ತೋರಣ, ವಿದ್ಯುತ್‌ ದೀಪಗಳಿಂದ ಸಿಂಗರಿಸಲಾಗಿತ್ತು. ಬೆಳಗ್ಗೆಯಿಂದಲೇ ಧಾರ್ಮಿಕ ವಿವಿಧಾನಗಳೊಂದಿಗೆ ಅಭಿಷೇಕ ಹಾಗೂ ಪೂಜಾ ಕೈಂಕರ್ಯಗಳು ಆರಂಭಗೊಂಡಿದ್ದವು.

ವಿಶೇಷ ಪೂಜೆ: ನಗರದ ಪುರಾತನ ಕಿಲ್ಲಾದ ಜೋಡ ಮಾರುತಿ ದೇವಸ್ಥಾನ, ವಿವೇಕಾನಂದ ನಗರದ ವೀರಾಂಜನೇಯ ದೇವಸ್ಥಾನ, ನರಸಾಪುರದ ಗುಂಡದ ಮಾರುತಿ ಗುಡಿ, ಬಸವೇಶ್ವರ ನಗರದ ಜೋಡ ಹನುಂತದೇವರ ಗುಡಿ, ಗಂಗಾಪುರ ಪೇಟೆಯ ಮಾರುತಿ ಮಂದಿರ, ಹೆಲ್ತ್‌ಕ್ಯಾಂಪ್‌ನ ಮಾರುತಿ ದೇವಸ್ಥಾನ, ರೈಲ್ವೆ ನಿಲ್ದಾಣ ಸಮೀಪದ ಮಾರುತಿ ಮಂದಿರ, ಹುಡ್ಕೊà ಕಾಲೋನಿಯ ಬಯಲು ಆಂಜನೇಯ ದೇವಸ್ಥಾನ, ಶರಣಬಸವೇಶ್ವರ ನಗರದ ಆಂಜನೇಯ ಗುಡಿ, ಸೆಟ್ಲಮೆಂಟ್‌ ಬಡಾವಣೆಯ ಮಾರುತಿ ದೇವಸ್ಥಾನಗಳಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು.

ಬೆಳಗ್ಗೆಯಿಂದಲೇ ವಾಯು ಪುತ್ರನಿಗೆ ಮಹಾಭಿಷೇಕ, ರುದ್ರಾಭಿಷೇಕ ನೆರವೇರಿಸಲಾಯಿತು. ಹೋಮ-ಹವನದ ಮೂಲಕ ಪ್ರಾರ್ಥನೆ ಸಲ್ಲಿಸಲಾಯಿತು. ತುಳಸಿ ಅರ್ಚನೆ ಹಾಗೂ ಮಹಾಮಂಗಳಾರತಿ ಬೆಳಗಿ ಇಷ್ಟಾರ್ಥಗಳೊಂದಿಗೆ ನಾಡಿನ ಸಮೃದ್ಧಿಗೆ ಪ್ರಾರ್ಥಿಸಲಾಯಿತು.

ತೊಟ್ಟಿಲೋತ್ಸವ: ಗಂಗಾಪುರ ಪೇಟೆಯ ಬಾಲ ಮಾರುತಿ ದೇವಸ್ಥಾನದಲ್ಲಿ ಮಹಿಳಾ ಮಂಡಳದ ಸದಸ್ಯರು ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು. ಬಾಲ ಮಾರುತಿಯನ್ನು ತೊಟ್ಟಿಲಿಗೆ ಹಾಕಿ, ಜೋಗುಳ ಗೀತೆಗಳನ್ನು ಹಾಡಿದರು. ಉತ್ಸಾಹದಿಂದ ತೊಟ್ಟಿಲು ತೂಗಿ ಕೃತಾರ್ಥರಾದರು. ಅದರಂತೆ ಬೆಳಗ್ಗೆಯಿಂದಲೇ ಭಕ್ತರು ಕುಟುಂಬ ಸಮೇತರಾಗಿ ದೇವಸ್ಥಾನಗಳಿಗೆ ತೆರಳಿ ಹೂ-ಹಣ್ಣು, ಕಾಯಿ ಅರ್ಪಿಸಿದರು. ಸುಮಂಗಲೆಯರು, ಭಕ್ತರು ಬಾಲ ಹನುಮನನ್ನು ತೊಟ್ಟಿಲಿಗೆ ಹಾಕಿ ತೂಗಿದರು. ನಾಮಕರಣ ಮಾಡಿ ಸಂಭ್ರಮಿಸಿದರು.

ವಿವಿಧೆಡೆ ಅನ್ನಸಂತರ್ಪಣೆ: ಸ್ವಾಮಿ ವಿವೇಕಾನಂದ ನಗರದ ವೀರಾಂಜನೇಯ ದೇವಸ್ಥಾನದಲ್ಲಿ ಹನುಮ ಜಯಂತಿ ಹಾಗೂ ಗಣ್ಯರಿಗೆ ಸನ್ಮಾನ ಸಮಾರಂಭ ನಡೆಯಿತು. ಪಂಚಾಕ್ಷರಿ ನಗರದ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ನಗರದ ಜೋಡ ಮಾರುತಿ ದೇವಸ್ಥಾನ, ಕೆ.ಎಚ್‌.ಪಾಟೀಲ ಬಡಾವಣೆ, ಬಯಲು ಆಂಜನೇಯ ಸ್ವಾಮಿ ಸೇರಿದಂತೆ ಅವಳಿ ನಗರದ ಅನೇಕ ಮಾರುತಿ ಮಂದಿರಗಳಲ್ಲಿ ಭಕ್ತರಿಗೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.