ಹರಣಶಿಕಾರಿ ಸೂರಿನ ಕನಸು ಹರೋಹರ!

ಅಪೂರ್ಣ ಮನೆಗಳ ಹಕ್ಕುಪತ್ರ ವಿತರಣೆ ಜವಾಬ್ದಾರಿಯಿಂದ ನುಣುಚಿಕೊಂಡರಾ ಅಧಿಕಾರಿಗಳು?

Team Udayavani, Feb 25, 2021, 4:26 PM IST

New house

ಗದಗ: ರಾಜ್ಯದಲ್ಲೇ ಮೊದಲ ಬಾರಿಗೆ ಹರಣಶಿಕಾರಿ ಸಮುದಾಯದ ಬಡ ಕುಟುಂಬಗಳಿಗಾಗಿ “ಪ್ರಗತಿ ಬಡಾವಣೆ’ ನಿರ್ಮಿಸಲಾಗಿದೆ. ಆದರೆ, ಮನೆಗಳ ನಿರ್ಮಾಣ ಅಪೂರ್ಣಗೊಂಡಿದ್ದರೂ, ಪರಿಪೂರ್ಣತೆ ಪ್ರಮಾಣಪತ್ರ ಹಾಗೂ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ.

ಆದರೆ ಮನೆ ನಿರ್ಮಾಣ ಪೂರ್ಣಗೊಳ್ಳುವವರೆಗೆ ಗೃಹ ಪ್ರವೇಶ ಮಾಡುವುದಿಲ್ಲವೆಂದು ಫಲಾನುಭವಿಗಳು ಪಟ್ಟು ಹಿಡಿದಿದ್ದಾರೆ. ಪರಿಣಾಮ ಮನೆಗಳು ಪಾಳು ಬಿದ್ದಿವೆ. ಕಣ್ಮುಂದೆ ಕನಸಿನ ಮನೆಗಳು ತಲೆ ಎತ್ತಿದ್ದರೂ ಅವುಗಳಲ್ಲಿ ವಾಸಿಸುವ ಭಾಗ್ಯ ಇಲ್ಲದಂತಾಗಿದೆ. ಅಲೆಮಾರಿ ಸಮುದಾಯಕ್ಕೆ ಸೇರಿದ ಹರಣಶಿಕಾರಿ ಜನರನ್ನು ಬ್ರಿಟಿಷ್‌ ಅವ ಧಿಯಲ್ಲೇ ಬೆಟಗೇರಿ ಗಾಂಧಿ  ನಗರದಲ್ಲಿ ನೆಲೆಗೊಳಿಸಿತ್ತು. ಅವರಿಗೆ ವಸತಿಗಾಗಿ ಜಮೀನನ್ನೂ ನೀಡಿತ್ತು. ಆದರೆ, ಹೊಟ್ಟೆ, ಬಟ್ಟೆಗೆ ಸಾಕಾಗುತ್ತಿದ್ದು, ಸ್ವಂತ ಸೂರು ಎಂಬುದು ಕನಸಿನ ಮಾತಾಗಿತ್ತು. ಇವರ ದಯನೀಯ ಸ್ಥಿತಿ ಕಂಡು ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಚ್‌.ಕೆ. ಪಾಟೀಲ ಪ್ರಯತ್ನದಿಂದ ವಿಶೇಷ ವಸತಿ ಯೋಜನೆ ಜಾರಿಗೆ ಬಂದಿತ್ತು.

ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮ ಯೋಜನೆಯಡಿ ಗದಗ- ಬೆಟಗೇರಿ ಅವಳಿ ನಗರದ ವಸತಿ ರಹಿತರಿಗೆ ಸೂರು ಕಲ್ಪಿಸುವ ಯೋಜನೆ ಇದಾಗಿದೆ. ಅದಕ್ಕಾಗಿ ಬೆಟಗೇರಿಯ 5.10 ಎಕರೆ ಒಪ್ರದೇಶದಲ್ಲಿ ಒಟ್ಟು 143 ನಿವೇಶನ ರಚಿಸಿ, ಅದರಲ್ಲಿ 109 ಹರಣಶಿಕಾರಿ ಸಮುದಾಯವರಿಗೆ ಹಾಗೂ 34 ಖಂಜರಭಾಟ ಸಮುದಾಯದವರಿಗೆ ಮನೆ ಒದಗಿಸುವುದು ಇದರ ಉದ್ದೇಶ. ಅಲ್ಲದೇ,ಹರಣಶಿಕಾರಿ ಸಮುದಾಯದವರಿಗಾಗಿ ನಿರ್ಮಿಸಿದ ಮೊದಲ ಬಡಾವಣೆ ಎನ್ನಲಾಗಿದೆ.

ಹಳ್ಳಹಿಡಿದಿದೆ ರಾಜ್ಯದ ಮೊಲದ ಯೋಜನೆ: ಯೋಜನೆಯಡಿ ಸರ್ಕಾರದಿಂದ 5.50 ಲಕ್ಷ ರೂ. ಮೊತ್ತದಲ್ಲಿ ಮೊದಲ ಹಂತದಲ್ಲಿ 40 ಮನೆ ನಿರ್ಮಿಸಲಾಗಿದೆ. ಆದರೆ, ಕೆಲ ಮನೆಗಳಿಗೆ ಅಂತಿಮ ಹಂತದ ಸಣ್ಣ, ಪುಟ್ಟ ಕಾಮಗಾರಿಗಳು ಬಾಕಿ ಇದ್ದರೂ, ಕಳೆದ 2020ರ ಜ.5ರಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮೂಲಕ ಲೋಕಾರ್ಪಣೆಗೊಳಿಸಲಾಗಿದೆ. ಮನೆಗಳು ಉದ್ಘಾಟನೆ ಗೊಂಡು ವರ್ಷ ಕಳೆದರೂ, ಅಡುಗೆ ಮನೆಯಲ್ಲಿ ಸಿಂಕ್‌, ಕೆಲ ಮನೆಗಳಿಗೆ ಬಾಗಿಲುಗಳನ್ನೇ ಕೂರಿಸಿಲ್ಲ. ಒಳಚರಂಡಿ ಸಂಪರ್ಕ ಕಲ್ಪಿಸಿಲ್ಲ. ರಸ್ತೆ, ಕುಡಿವ ನೀರು ಮತ್ತು ಚರಂಡಿ ಎಂಬುದು ಮರೀಚಿಕೆಯಾಗಿವೆ. ಬಡಾವಣೆಯಲ್ಲಿ ಯಾವುದೇ ಸೌಲಭ್ಯಗಳಿಲ್ಲ. ಆದರೂ, ಅಧಿಕಾರಿಗಳು ಮಾತ್ರ ಮನೆಗಳಿಗೆ ಪೂರ್ಣ ಪ್ರಮಾಣಪತ್ರ ಮತ್ತು ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಕೈತೊಳೆದುಕೊಳ್ಳುತ್ತಿದ್ದಾರೆ. ಬಾಕಿ ಇರುವ ಅಲ್ಪಸ್ವಲ್ಪ ಕಾಮಗಾರಿಗಳನ್ನು ತಮ್ಮ ಖರ್ಚಿನಲ್ಲೇ ಮಾಡಿಕೊಳ್ಳುವಂತೆ ಸೂಚಿಸುತ್ತಿದ್ದಾರೆ. ಮನೆಗಳು ಹೊರಗೆ ಅಂದ, ಒಳಗೆ ಏನೂ ಇಲ್ಲ ಎಂಬುದು ಫಲಾನುಭವಿಗಳ ಆರೋಪ.

ಸೌಲಭ್ಯಗಳ ಕೊರತೆ ಹಾಗೂ ಕಾಮಗಾರಿ ಅರ್ಧಂಬರ್ಧ ಆಗಿದ್ದರಿಂದ ಫಲಾನುಭವಿಗಳು ಗೃಹ ಪ್ರವೇಶಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮ ಮನೆಗಳು ವರ್ಷದಿಂದ ಪಾಳು ಬಿದ್ದಿದ್ದು, ಹುಳು-ಹುಪ್ಪಡಿ ಆವಾಸ ತಾಣವಾಗುತ್ತಿವೆ ಎನ್ನಲಾಗಿದೆ. ಅಲ್ಲದೇ, ಶೋಷಿತ ಜನರ ಪರವಾಗಿ ಹೊಸ ಯೋಜನೆಗೆ ಕಾರಣರಾದ ಶಾಸಕ ಎಚ್‌.ಕೆ. ಪಾಟೀಲ ಆಗಿರುವ ಲೋಪದೋಷ ಸರಿಪಡಿಸಬೇಕು. ಬಡ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂಬುದು ಫಲಾನುಭವಿಗಳಾದ ಶಾರವ್ವ, ನೀಲವ್ವ ಹಳ್ಳಿಗುಡಿ, ಲಕ್ಷ್ಮಣ ದೊಡ್ಡಮನಿ, ಗೋಪಿ ಚವ್ಹಾಣ ಒತ್ತಾಯ.

ವೀರೇಂದ್ರ ನಾಗಲದಿನ್ನಿ

 

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.