ಗ್ರಾಮೀಣ ಜನರಿಗೆ ಆರೋಗ್ಯ ಶಿಬಿರ ಸಹಕಾರಿ: ಡಾ| ಸವಡಿ
Team Udayavani, Jun 15, 2019, 10:28 AM IST
ಮುಳಗುಂದ: ನೀಲಗುಂದ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ವೈದ್ಯಾಧಿಕಾರಿಗಳಿಂದ ಆರೋಗ್ಯ ತಪಾಸಣೆ ಮತ್ತು ಔಷಧಿ ವಿತರಿಸಲಾಯಿತು.
ಮುಳಗುಂದ: ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಗ್ರಾಮಗಳಲ್ಲಿ ಆಯೋಜಿಸುವ ಇಂತಹ ಶಿಬಿರಗಳು ಪ್ರಯೋಜನವನ್ನು ಪ್ರತಿಯೊಬ್ಬ ಕೂಲಿ ಕಾರ್ಮಿಕರು ಪಡೆದುಕೊಳ್ಳಬೇಕು ಎಂದು ಚಿಂಚಲಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಎ.ಎಸ್. ಸವಡಿ ಹೇಳಿದರು.
ಸಮೀಪದ ನೀಲಗುಂದ ಗ್ರಾಮದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಬದುವು ನಿರ್ಮಾಣ ಮಾಡುತ್ತಿರುವ 400 ಕೂಲಿ ಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮತ್ತು ಔಷಧಿ ವಿತರಿಸಿ ಮಾತನಾಡಿ, ಕೆಲವೊಂದು ಕಾಯಿಲೆಗಳು ಮಾನವನಿಗೆ ಮಾರಕವಾಗಿದ್ದು, ಈಗಿನ ಪರಿಸ್ಥಿತಿಯಲ್ಲಿ ಸಣ್ಣ ಜ್ವರವನ್ನು ನಿರ್ಲಕ್ಷ್ಯ ಮಾಡಬಾರದು. ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು ಎಂದರು. ಮುಳಗುಂದ ಕೃಷಿ ಸಹಾಯಕ ಅಧಿಕಾರಿ ಎಂ.ಎಸ್. ಸುಂಕಾಪುರ ಮಾತನಾಡಿ, ಇಂತಹ ಶಿಬಿರ ಬಹಳ ಸಹಕಾರಿಯಾಗಿದ್ದು, ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ರವಿ ವಗ್ಗನವರ ಮಾತನಾಡಿ, ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಬಡ ಜನರ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದರು.
ಚಿಂಚಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಕ ಎಕನಾಥ ಪಾಟೀಲ, ಲಕ್ಷ್ಮೀ ಎಸ್, ಕಮಲಾಕ್ಷಿ ಹಳ್ಳಿ, ಲಲಿತಾ ತಿರ್ಲಾಪುರ, ನೀಲಮ್ಮಾ ಕಾಳೆ, ಪ್ರತಿಭಾ ಬಾಲರೆಡ್ಡಿ, ಯಮನೂರಪ್ಪ ನದಾಫ್, ಈ ವೇಳೆ ನರೇಗಾ ಯೋಜನೆಯಲ್ಲಿ ಪಾಲ್ಗೊಂಡ ಸುಮಾರು 400 ಕೂಲಿ ಕಾರ್ಮಿಕರು ಈ ಶಿಬಿರದಲ್ಲಿ ಆರೋಗ್ಯ ತಪಾಸಣಾ ಜತೆಗೆ ಔಷಧಿ ವಿತರಣೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು