ಹೇಳಹೆಸರಿಲ್ಲದಂತಾದ ಬೆಳೆ

•ಬೆಳೆಗೆ ತಗುಲಿದ ಹಳದಿ-ಮಂಕು ರೋಗ•ತೇವಾಂಶ ಹೆಚ್ಚಳ-ಇಳುವರಿ ಕುಂಠಿತ

Team Udayavani, Aug 28, 2019, 11:05 AM IST

gadaga-tdy-1

ಗಜೇಂದ್ರಗಡ: ಜಮೀನೊಂದರದಲ್ಲಿ ಬೆಳೆದ ಹೆಸರು ಬುಡ್ಡಿ ಬಿಡಿಸುತ್ತಿರುವ ರೈತ ಮಹಿಳೆಯರು.

ಗಜೇಂದ್ರಗಡ: ಈ ಬಾರಿ ನಿರೀಕ್ಷೆಗೂ ಮೀರಿ ಮಳೆ ಸುರಿದ ಪರಿಣಾಮ ತೇವಾಂಶ ಹೆಚ್ಚಾಗಿ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ಹೆಸರು ಇಳುವರಿ ಕುಂಠಿತಗೊಂಡಿದ್ದು, ಅನ್ನದಾತರಲ್ಲಿ ಆತಂಕ ಮನೆಮಾಡಿದೆ.

ಮುಂಗಾರು ಹಂಗಾಮಿನ ಮಳೆ ಮೊದಲು ಉತ್ತಮವಾಗಿ ಸುರಿಯಿತು. ಇದರಿಂದ ಹರ್ಷಿತರಾದ ಅನ್ನದಾತ ಗಜೇಂದ್ರಗಡ, ರಾಜೂರು, ಕಾಲಕಾಲೇಶ್ವರ, ದಿಂಡೂರ, ಲಕ್ಕಲಕಟ್ಟಿ, ಸೂಡಿ, ಮುಶಿಗೇರಿ, ಇಟಗಿ ಸೇರಿದಂತೆ ಸುತ್ತಲಿನ ನೂರಾರು ಗ್ರಾಮಗಳಲ್ಲಿ ಈ ಬಾರಿ 20,989 ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು ಬಿತ್ತನೆ ಮಾಡಿದ್ದ. ಆದರೆ ಈ ಬಾರಿ ನಿರೀಕ್ಷೆಗೂ ಮೀರಿ ಮಳೆ ಸುರಿದಿದ್ದರಿಂದ ತೇವಾಂಶ ಹೆಚ್ಚಾಗಿ, ಬೆಳೆಗೆ ಹಳದಿ ರೋಗ ಮತ್ತು ಕಾಯಿ ಕಟ್ಟಿದ ನಂತರ ಮಂಕು ರೋಗ ತಗುಲಿದ ಪರಿಣಾಮ ಇಳುವರಿಯಲ್ಲಿ ಕುಂಠಿತವಾಗಿದೆ.

ಕಳೆದ ಎರಡು ವರ್ಷ ಬರಗಾಲ ಬವಣೆಗೆ ಸಿಲುಕಿ ನಲುಗಿರುವ ರೈತರು ಸಾಲ, ಸೂಲ ಮಾಡಿ ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ ಇನ್ನಿತರ ಕೃಷಿ ಕಾರ್ಯಗಳಿಗೆ ಕ್ಕೆ ಅಪಾರ ಪ್ರಮಾಣದ ಹಣ ವೆಚ್ಚ ಮಾಡಿದ್ದರು. ಆದರೆ ಪ್ರಸ್ತುತ ನಿರೀಕ್ಷಿತ ಮಟ್ಟದಲ್ಲಿ ಬೆಳೆ ಬಾರದಿರುವುದು ಚಿಂತೆಗೀಡು ಮಾಡಿದೆ. ಹೆಸರು ಬುಡ್ಡಿ ಬಿಡಿಸಲು ದಿನಕ್ಕೆ 200 ರೂ. ದುಬಾರಿ ವೆಚ್ಚದ ಕೂಲಿ ನೀಡಬೇಕಿದೆ. ಎಲ್ಲವನ್ನೂ ಲೆಕ್ಕ ಹಾಕಿ ನೋಡಿದಾಗ ಆದಾಯಕ್ಕಿಂತ ಖರ್ಚೇ ಅಧಿಕವಾಗುತ್ತಿದೆ.

ಒಂದು ಎಕರೆಗೆ ಕನಿಷ್ಟ 2 ರಿಂದ 3 ಕ್ವಿಂಟಲ್ ಇಳುವರಿ ಬಂದರೆ ಲಾಭ. ಆದರೆ ಈಗ ಎಕರೆಗೆ 1 ರಿಂದ 2 ಕ್ವಿಂಟಲ್ ಸಹ ಇಳುವರಿ ಬರದಂತಾಗಿದೆ. ಇನ್ನು ಮಾರುಕಟ್ಟೆಯಲ್ಲಿ ಕ್ವಿಂಟಲ್ಗೆ 1500 ರೂ. ನೀಡಲಾಗುತ್ತಿದೆ. ಜತೆಗೆ ಬೆಳೆಯ ಗುಣಮಟ್ಟದ ನೆಪದಿಂದ ಕಡಿಮೆ ಬೆಲೆ ನಿಗದಿಯಾಗುತ್ತಿರುವುದು ರೈತ ಸಮೂಹಕ್ಕೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ ಎಂದು ರೈತರು ನೊಂದು ಹೇಳುತ್ತಾರೆ.ಗಜೇಂದ್ರಗಡ ಮತ್ತು ರೋಣ ತಾಲೂಕಿನಲ್ಲಿ ಬೆಳೆದ ಹೆಸರು ಕೃಷಿ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇದೆ. ಇಲ್ಲಿ ಉತ್ಕೃಷ್ಟ ಗುಣಮಟ್ಟದ ಹೆಸರು ಬೆಳೆಯಲಾಗುತ್ತದೆ. ಆದರೆ ವಿವಿಧ ಕಾರಣಗಳಿಂದ ಇಳುವರಿ ಕುಂಠಿವಾಗುತ್ತಿದೆ. ಬೆಲೆಯೂ ಪಾತಾಳಕ್ಕಿಳಿಯುತ್ತಿರುವುದು ಅನ್ನದಾತನಲ್ಲಿ ಆತಂಕ ಮನೆ ಮಾಡಿದೆ.

 

•ಡಿ.ಜಿ ಮೋಮಿನ್‌

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.