ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆ, ಸಿಡಿಲಿಗೆ ಐದು ಆಡುಗಳು ಬಲಿ
Team Udayavani, May 20, 2020, 5:11 AM IST
ಗದಗ: ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದೆ. ಕಳೆದ ಎರಡ್ಮೂರು ದಿನಗಳಿಂದ ಆಗೊಮ್ಮೆ ಈಗೊಮ್ಮೆ ಸುರಿಯುತ್ತಿದ್ದ ಮಳೆ, ಮಂಗಳವಾರ ಸಂಜೆ ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಬಿರುಸಾಗಿ ಸುರಿಯಿತು.
ಗದಗ-ಬೆಟಗೇರಿ ಅವಳಿ ನಗರ, ಹರ್ತಿ, ಮುಂಡರಗಿ ತಾಲೂಕಿನ ಡಂಬಳ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಆರಂಭಗೊಂಡ ಮಳೆ ರಭಸವಾಗಿ ಸುರಿಯಿತು. ಅವಳಿ ನಗರದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಏಕಾಏಕಿ ಮಳೆ ಆರಂಭಗೊಂಡಿತು. ಇದರಿಂದಾಗಿ ಹಳೇ ಡಿಸಿ ಆಫೀಸ್ ಸರ್ಕಲ್, ಗಾಂಧಿ ವೃತ್ತ ಹಾಗೂ ತೋಂಟದಾರ್ಯ ಮಠದ ಹೆಬ್ಟಾಗಿಲು ಬಳಿ ಎರಡು ಅಡಿ ಎತ್ತರದಷ್ಟು ನೀರು ಹರಿಯಿತು. ಮಳೆ ನೀರಿನಿಂದಾಗಿ ಚರಂಡಿಗಳು ತುಂಬಿ ಹರಿದವು. ಹೊಂಬಳ ನಾಕಾ ಜನತಾ ಕಾಲೋನಿ ಸೇರಿದಂತೆ ಅವಳಿ ನಗರದ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ಮಳೆ ನೀರು ನುಗ್ಗಿತ್ತು. ಬಿರುಗಾಳಿ ಸಹಿತ ಸುರಿದ ಮಳೆಗೆ ಅಲ್ಲಲ್ಲಿ ಮರಗಳು ವಿದ್ಯುತ್ ತಂತಿಗಳ ಮೇಲೆ ಒರಗಿದ್ದರಿಂದ ನಗರದಲ್ಲಿ ಕೆಲಕಾಲ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
ಸಿಡಿಲಿಗೆ 5 ಆಡುಗಳು ಸಾವು: ಮಂಗಳವಾರ ಗುಡುಗು-ಸಿಡಿಲು ಸಹಿತ ಮಳೆಗೆ ಐದು ಆಡುಗಳು ಸಾವನ್ನಪ್ಪಿರುವ ಘಟನೆ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ಗ್ರಾಮದಲ್ಲಿ ನಡೆದಿದೆ. ಇವು ಚನ್ನಪ್ಪ ವಡ್ಡಟ್ಟಿ ಎಂಬುವವರಿಗೆ ಸೇರಿದ್ದು, ಹುಲ್ಲು ಮೇಯಿಸಲು ಗ್ರಾಮದ ಹೊರವಲಯಕ್ಕೆ ತೆರಳಿದ್ದಾಗ ಈ ಘಟನ ಸಂಭವಿಸಿದೆ. ಸ್ಥಳಕ್ಕೆ ಕಂದಾಯ ನಿರೀಕ್ಷಕರು ಹಾಗೂ ಸ್ಥಳೀಯ ಗ್ರಾ.ಪಂ. ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?