ಇದ್ದೂ ಇಲ್ಲದಂತಾದ ಹೈಮಾಸ್ಟ್‌ ವಿದ್ಯುದ್ದೀಪ

ರೋಪ್‌ ಕಟ್‌ ಆಗಿ ಅರ್ಧಕ್ಕೆ ನಿಂತ 25 ಹೈಮಾಸ್ಟ್‌ ವಿದ್ಯುದ್ದೀಪಗಳು ; ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೈಗನ್ನಡಿ

Team Udayavani, Nov 29, 2022, 4:58 PM IST

22

ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ಸಾರ್ವಜನಿಕರಿಗೆ ಉಪಯೋಗವಾಗಲೆಂದು ಕೋಟ್ಯಂತರ ರೂ. ಖರ್ಚು ಮಾಡಿ ಸ್ಥಾಪಿಸಿರುವ ಹೈಮಾಸ್ಟ್‌ ವಿದ್ಯುದ್ದೀಪಗಳು ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿರುಪಯುಕ್ತವಾಗಿ ನಿಂತಿವೆ. ಕಳೆದ ಒಂದು ವರ್ಷದಿಂದ ಕೆಟ್ಟು ನಿಂತಿದ್ದರೂ, ದುರಸ್ತಿ ಭಾಗ್ಯ ದೊರೆತಿಲ್ಲ.

ನಗರದ ಹೃದಯ ಭಾಗವಾದ ಸಾಯಿಬಾಬಾ ದೇವಸ್ಥಾನದ ಮುಂಭಾಗ ಹಾಗೂ ಜೋಡ ಮಾರುತಿ ದೇವಸ್ಥಾನದ ಹತ್ತಿರ, ನಗರದ ಮಹೇಂದ್ರಕರ್‌ ಸರ್ಕಲ್‌, ಬೆಟಗೇರಿ ಬಸ್‌ ನಿಲ್ದಾಣ ಸೇರಿದಂತೆ ಅವಳಿ ನಗರದ 98 ಕಡೆಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಹೈಮಾಸ್ಟ್‌ ವಿದ್ಯುದ್ದೀಪಗಳನ್ನು ಸ್ಥಾಪನೆ ಮಾಡಲಾಗಿದೆ. ಆರಂಭದಲ್ಲಿ ಸರಿಯಾಗಿ ಬೆಳಗಿದ ದೀಪಗಳು ನಂತರ ಕೆಟ್ಟು ನಿಂತಿವೆ. ಅದನ್ನು ದುರಸ್ತಿ ಮಾಡಲು ಅರ್ಧಕ್ಕೆ ಇಳಿಸಲಾಗಿದೆ. ಆದರೆ, ಇದುವರೆಗೂ ಅದನ್ನು ರಿಪೇರಿ ಮಾಡಿಸಲು ನಗರಸಭೆ ಮುಂದಾಗಿಲ್ಲ. ಹೀಗಾಗಿ, ನಿತ್ಯ ಅಲ್ಲಿ ಓಡಾಡುವ ಸಾರ್ವಜನಿಕರು ನಗರಸಭೆ ಕಾರ್ಯವೈಖರಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಹಾಳಾದ ವಿದ್ಯುದ್ದೀಪಗಳು:

ನಗರದ ಮಾರುಕಟ್ಟೆ, ಜೋಡ ಮಾರುತಿ ದೇವಸ್ಥಾನದ ಬಳಿ, ಹುಬ್ಬಳ್ಳಿ ರೋಡ್‌, ಜಿಲ್ಲಾಡಳಿತ ಭವನದ ಮುಂಭಾಗ, ಮಹಾತ್ಮ ಗಾಂಧಿ ವೃತ್ತ, ಮಹೇಂದ್ರಕರ್‌ ಸರ್ಕಲ್‌, ಶಿವಾನಂದ ನಗರ, ಸಿದ್ಧಲಿಂಗ ನಗರ, ಕಳಸಾಪುರ ರಸ್ತೆ ಸೇರಿದಂತೆ ಅವಳಿ ನಗರದಲ್ಲಿ ವಿದ್ಯುದ್ದೀಪಗಳು ಕೆಟ್ಟು ನಿಂತಿವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಅವಳಿ ನಗರದ ವಿದ್ಯುದ್ದೀಪಗಳನ್ನು ದುರಸ್ತಿ ಮಾಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಇದ್ದೂ ಇಲ್ಲದಂತಾದ ವಿದ್ಯುದ್ದೀಪ:

ಅವಳಿ ನಗರದಲ್ಲಿರುವ ಹೈಮಾಸ್ಟ್‌ ವಿದ್ಯುದ್ದೀಪಗಳು ಇದ್ದೂ ಇಲ್ಲದಂತಾಗಿವೆ. ಜನರು ಕತ್ತಲೆಯಲ್ಲಿ ಸಂಚಾರ ಮಾಡುವಂತಾಗಿದೆ. ನಗರದ ವಿವಿಧ ಭಾಗಗಳಲ್ಲಿ ಅಳವಡಿಸಿರುವ ಹೈಮಾಸ್ಟ್‌ ವಿದ್ಯುದ್ದೀಪಗಳು ಸಮರ್ಪಕ ನಿರ್ವಹಣೆ ಇಲ್ಲದ ಕಾರಣ ಕಳೆದ ಒಂದು ವರ್ಷದಿಂದ ದೀಪ ಉರಿಯುತ್ತಿಲ್ಲ. ಜನನಿಬಿಡ ಸ್ಥಳವಾದ ಸಾಯಿಬಾಬಾ ದೇವಸ್ಥಾನ, ಹೊಸ ಬಸ್‌ ನಿಲ್ದಾಣ ರಸ್ತೆಯಲ್ಲಿ ಅಳವಡಿಸಿರುವ ವಿದ್ಯುದ್ದೀಪ ಉರಿಯದ ಕಾರಣ ಜನರು ತೊಂದರೆ ಪಡುವಂತಾಗಿದೆ. ಲಕ್ಷಗಟ್ಟಲೆ ಹಣ ವಿನಿಯೊಗಿಸಿ ಅಳವಡಿಸಿರುವ ದೀಪಗಳು ಶೋಕಿಗಾಗಿ ಮಾತ್ರ ಇದ್ದಂತೆ ಕಂಡುಬರುತ್ತಿವೆ. ಬೆಳಗಿನ ಸಮಯ ಹಾಗೂ ಸಂಜೆ ವೇಳೆ ದೀಪ ಉರಿಯದ ಕಾರಣ ಪಾದಚಾರಿಗಳು ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ, ಕೂಡಲೇ ಹೈಮಾಸ್ಟ್‌ ವಿದ್ಯುದ್ದೀಪಗಳ ವ್ಯವಸ್ಥೆ ಸರಿಪಡಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ಮನವಿ ಸಲ್ಲಿಸಿದರೂ ಪ್ರಯೋಜನವಿಲ್ಲ:

ಹೈಮಾಸ್ಟ್‌ ವಿದ್ಯುದ್ದೀಪ ಸ್ಥಗಿತಗೊಂಡಿದ್ದರ ಬಗ್ಗೆ ನಗರಸಭೆ ಸಹಾಯಕ ಅಭಿಯಂತರರು, ನಗರಸಭೆ ಆಯುಕ್ತರಿಗೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ, ಇದುವರೆಗೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ಆರೋಪ. ಇದರಿಂದ ರಾತ್ರಿ ವೇಳೆ ಪಾದಚರಿಗಳಿಗೆ ಸಮಸ್ಯೆ ಉಂಟಾಗುತ್ತಿದೆ. ವಾಹನ ಸವಾರರು ಏಕಾಏಕಿ ರಸ್ತೆ ಬದಿಯಲ್ಲಿ ಬರುವುದರಿಂದ ಹಿರಿಯ ನಾಗರಿಕರಿಗೆ ರಸ್ತೆ ದಾಟುವುದು ಕಷ್ಟವಾಗಿದೆ.

ರೋಪ್‌ ಕಟ್‌-ಅರ್ಧಕ್ಕೆ ನಿಂತ ವಿದ್ಯುದ್ದೀಪ:

ಗದಗ-ಬೆಟಗೇರಿ ಅವಳಿ ನಗರದ 98 ಕಡೆಗಳಲ್ಲಿ ಹೈಮಾಸ್ಟ್‌ ವಿದ್ಯುದ್ದೀಪಗಳನ್ನು ಅಳವಡಿಸಲಾಗಿದೆ. ಅವುಗಳಲ್ಲಿ ರೋಪ್‌(ಗಯಿ) ಕಟ್‌ ಆಗಿ ಅರ್ಧಕ್ಕೆ ನಿಂತಿದ್ದು, ವಿದ್ಯುತ್‌ ಪೂರೈಕೆ ಸಂಪೂರ್ಣ ಬಂದ್‌ ಆಗಿದೆ. ಉಳಿದ ಕಡೆಗಳಲ್ಲಿ ಕೇಬಲ್‌ ಕಟ್‌ ಆಗಿ ವಿದ್ಯುತ್‌ ಸರಬರಾಜು ಬಂದ್‌ ಆಗಿದೆ. ಈ ಕುರಿತು ನಗರಸಭೆ ಅಧಿಕಾರಿಗಳು, ಟೆಂಡರ್‌ ಕರೆಯಲಾಗಿದೆ. ಕೂಡಲೇ ಹೈಮಾಸ್ಟ್‌ ವಿದ್ಯುದ್ದೀಪಗಳನ್ನು ಸರಿಪಡಿಸಲಾಗುವುದು ಎಂಬ ಉತ್ತರ ನೀಡುತ್ತಿದ್ದಾರೆ.

ತುಕ್ಕು ಹಿಡಿದ ಸ್ವಿಚ್‌ ಬಾಕ್ಸ್‌

ಹೈಮಾಸ್ಟ್‌ ವಿದ್ಯುದ್ದೀಪಗಳ ಕಂಬ ಹಾಗೂ ಸ್ವಿಚ್‌ ಬಾಕ್ಸ್‌ಗಳು ಮಳೆ ನೀರಿಗೆ ತುಕ್ಕು ಹಿಡಿಯುತ್ತಿವೆ. ಕಂಬಕ್ಕೆ 5 ಅಡಿ ಎತ್ತರಕ್ಕಿದ್ದ ಸ್ವಿಚ್‌ ಬಾಕ್ಸ್‌ಗಳು ಕೆಲವೊಂದು ಕಡೆಗಳಲ್ಲಿ ನೆಲಕ್ಕುರುಳಿ ಬಿದ್ದಿವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಕೆಳಗಡೆ ಬಿದ್ದ ಸ್ವಿಚ್‌ ಬಾಕ್ಸ್‌ಗಳಲ್ಲಿ ವಿದ್ಯುತ್‌ ಹರಿದ ಕಾರಣ ನಗರಸಭೆ ನೌಕರರು ಅವುಗಳ ವಿದ್ಯುತ್‌ ಲೈನ್‌ ಕಟ್‌ ಮಾಡಿ ಶಾಶ್ವತ ಬಂದ್‌ ಮಾಡಿ ಕೈತೊಳೆದುಕೊಂಡಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ಗದಗ-ಬೆಟಗೇರಿ ಅವಳಿ ನಗರದ ವಿವಿಧ ಕಡೆ ವಿದ್ಯುದ್ದೀಪಗಳು ಬಂದ್‌ ಆಗಿವೆ. ಕೂಡಲೇ ಅ ಧಿಕಾರಿಗಳು ಇಲ್ಲಿನ ಹೈಮಾಸ್ಟ್‌ ದೀಪಗಳ ದುರಸ್ತಿಗೆ ಮುಂದಾಗಬೇಕು. –ಮಲ್ಲಿಕಾರ್ಜುನ ಬಾವಿಕಟ್ಟಿ, ಬೆಟಗೇರಿ ನಿವಾಸಿ

ಪ್ರತಿ ವಾರ್ಡ್‌ನಲ್ಲಿ ಹೈಮಾಸ್ಟ್‌ ವಿದ್ಯುದ್ದೀಪಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಹಂತಹಂತವಾಗಿ ಗದಗ-ಬೆಟಗೇರಿ ಅವಳಿ ನಗರದಲ್ಲಿನ ಹೈಮಾಸ್ಟ್‌ ವಿದ್ಯುದ್ದೀಪಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು.  -ಉಷಾ ದಾಸರ, ಅಧ್ಯಕ್ಷರು, ಗದಗ-ಬೆಟಗೇರಿ ನಗರಸಭೆ

ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.