ತಾಪಂ-ಜಿಪಂ ಚುನಾವಣೆ ಮುಂದೂಡಿಕೆ ಸರಿಯಲ್ಲ
ರಾಜ್ಯ ಬಿಜೆಪಿ ಸರ್ಕಾರದಿಂದ ತಾಪಂ ವ್ಯವಸ್ಥೆ ರದ್ದು ಮಾಡುವ ಹುನ್ನಾರ-ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಶಾಸಕ ಎಚ್ಕೆ ಆಗ್ರಹ
Team Udayavani, Feb 11, 2021, 1:42 PM IST
ಗದಗ: ಬರುವ ತಾಪಂ-ಜಿಪಂ ಸಾರ್ವತ್ರಿಕ ಚುನಾವಣೆ ಮುಂದೂಡುವ ಹುನ್ನಾರದಿಂದ ತಾಪಂ ವ್ಯವಸ್ಥೆ ರದ್ದು ಮಾಡುವ ಚರ್ಚೆ ರಾಜ್ಯ ಬಿಜೆಪಿ ಸರ್ಕಾರ ಹರಿಬಿಟ್ಟಿದೆ ಎಂದು ಶಾಸಕ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಕೆ. ಪಾಟೀಲ ಸರ್ಕಾರದ ವಿರುದ್ಧ ಹರಿಹಾಯ್ದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಪಂ ವ್ಯವಸ್ಥೆ ರದ್ದುಗೊಳಿಸುವ ನೆಪದಲ್ಲಿ ಬರುವ ಜಿಪಂ, ತಾಪಂ ಚುನಾವಣೆ ಮುಂದೂಡುವ ಪ್ರಯತ್ನ ಸಲ್ಲದು. ತಾಪಂಗಳನ್ನು ರದ್ದುಗೊಳಿಸುವುದರಿಂದ ಪಂಚಾಯತ್ ಹಾಗೂ ಗ್ರಾಮ ಸ್ವರಾಜ್ ವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಈಗಾಗಲೇ ಗ್ರಾಪಂ ಚುನಾವಣೆ ವಿಚಾರದಲ್ಲಿ ನ್ಯಾಯಾಲಯದಲ್ಲಿ ರಾಜ್ಯ ಸರ್ಕಾರಕ್ಕೆ ಮಂಗಳಾರತಿಯಾಗಿದೆ. ಇದೀಗ ತಾಪಂ ರದ್ದುಗೊಳಿಸುವ ವಿಚಾಲರದಲ್ಲೂ ಸರ್ಕಾರದ ತನ್ನ ಉದ್ಧಟತನ ಮುಂದುವರಿಸಿದರೆ, ಕೋರ್ಟ್ನಲ್ಲಿ ಮತ್ತೂಮ್ಮೆ ಅವಮಾನ ಎದುರಿಸಬೇಕಾಗುತ್ತದೆ. ಹೀಗಾಗಿ ಇಂತಹ ಕೆಟ್ಟ ಸಾಹಸ ಸರ್ಕಾರ ಮಾಡಬಾರದು ಎಂದು ಎಚ್ಚರಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾಯ್ದೆಯ 73ನೇ ತಿದ್ದುಪಡಿಯಿಂದ ತಾಪಂ ವ್ಯವಸ್ಥೆ ಬದಲಾಗಿದೆ. ಹೀಗಾಗಿ ತಾಪಂ ವ್ಯವಸ್ಥೆ ರದ್ದುಪಡಿಸಲು ಸಾಧ್ಯವೇ ಇಲ್ಲ. ಸಂವಿಧಾನದಲ್ಲಿ ತಿದ್ದುಪಡಿಯಾಗಿದ್ದನ್ನು ರಾಜ್ಯ ಸರ್ಕಾರದಿಂದ ರದ್ದುಪಡಿಸಲು ಸಾಧ್ಯವಿಲ್ಲ. ಇಂತಹ ಮಹತ್ವದ ವಿಚಾರ ಕೇವಲ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿದರೆ ಸಾಲದು. ಶಾಸನ ಸಭೆಗಳಲ್ಲಿ ಪ್ರಸ್ತಾಪಿಸಬೇಕು ಎಂದು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಮೂರು ಹಂತದ ಪಂಚಾಯತ್ ವ್ಯವಸ್ಥೆಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ ಕ್ಷೇತ್ರಗಳಲ್ಲಿ ತಾಪಂ ಮಹತ್ವದ ಪಾತ್ರವಹಿಸುತ್ತದೆ. ಗ್ರಾಮೀಣ ಭಾಗದಲ್ಲಿ ಹಲವು ರಚನಾತ್ಮಕ ಹಾಗೂ ರಾಷ್ಟ್ರ ಕಟ್ಟುವ ಕೆಲಸದಲ್ಲಿ ತಾಪಂ ಪರಿಣಾಮಕಾರಿಯಾಗಿವೆ. ಇಂತಹ ತಾಪಂ ವ್ಯವಸ್ಥೆ ಮತ್ತಷ್ಟು ಬಲಪಡಿಸಲು ಅಧಿ ಕಾರಿಶಾಹಿ ಹಾಗೂ ರಾಜಕೀಯ ಇಚ್ಛಾಶಕ್ತಿ ಕೊರತೆ ಇಲ್ಲಿ ಎದ್ದು ಕಾಣುತ್ತಿದೆ. ಈ ನಿಟ್ಟಿನಲ್ಲಿ ಪಂಚಾಯತ್ ವ್ಯವಸ್ಥೆ ಗಟ್ಟಿಗೊಳಿಸಲು ಅಗತ್ಯ ಆರ್ಥಿಕ ನೆರವು, ಅನುದಾನ ಹಾಗೂ ಅಧಿ ಕಾರ ನೀಡಬೇಕು. ಜೊತೆಗೆ ಬರುವ ಮೇ ತಿಂಗಳಲ್ಲಿ ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಪಂಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.
ಇದನ್ನೂ ಓದಿ :ಗೈರಾದವರಿಗೆ ನೋಟಿಸ್ ನೀಡಿ
ಭಾರತರತ್ನ ಭೀಮಸೇನ ಜೋಶಿ ಜನ್ಮ ಶತಮಾನೋತ್ಸವ ನಿಮಿತ್ತ ಗದಗನಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಂಗಮಂದಿರಕ್ಕೆ ಪಂ| ಭೀಮಸೇನ್ ಜೋಶಿ ಹೆಸರು ನಾಮಕರಣ ಮಾಡಲು ಸರ್ಕಾರ ಆದೇಶಿದೆ. ಇದು ಗದುಗಿನ ಜನತೆಗೆ ಹೆಮ್ಮೆಯ ವಿಚಾರ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಅಧ್ಯಕ್ಷರಾದ ವಾಸಣ್ಣ ಕುರಡಗಿ, ಸಿದ್ದು ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ