ತಕ್ಷಣ ಗಡಿ ಉಸ್ತುವಾರಿಗೆ ಸಚಿವರ ನೇಮಿಸಿ: ಎಚ್‌.ಕೆ. ಪಾಟೀಲ್

ಯಥಾಸ್ಥಿತಿ ಇಲ್ಲವೇ ಮಹಾಜನ ವರದಿಯೇ ಅಂತಿಮ 

Team Udayavani, Nov 30, 2022, 9:45 PM IST

ತಕ್ಷಣ ಗಡಿ ಉಸ್ತುವಾರಿಗೆ ಸಚಿವರ ನೇಮಿಸಿ: ಎಚ್‌.ಕೆ. ಪಾಟೀಲ್

ಗದಗ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೆ ಕ್ಯಾತೆ ತೆಗೆದಿದೆ. ಮುಖ್ಯಮಂತ್ರಿಗಳು ಕೂಡಲೇ ಗಡಿ ಉಸ್ತುವಾರಿಗೆ ಸಚಿವರನ್ನು ನೇಮಿಸಬೇಕು ಎಂದು ಮಹಾರಾಷ್ಟ್ರ ಕಾಂಗ್ರೆಸ್‌ ಉಸ್ತುವಾರಿಯೂ ಆಗಿರುವ ಕಾಂಗ್ರೆಸ್‌ ಹಿರಿಯ ಮುಖಂಡ ಎಚ್‌.ಕೆ. ಪಾಟೀಲ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿಚಾರದಲ್ಲಿ ಯಥಾಸ್ಥಿತಿ ಇಲ್ಲವೇ ಮಹಾಜನ ವರದಿಯೇ ಅಂತಿಮ. ಈ ನಿಟ್ಟಿನಲ್ಲಿ ಕರ್ನಾಟಕದ ನಿಲುವು ಸ್ಪಷ್ಟವಾಗಿದೆ.

ಮಾತುಕತೆ ಸಾಧ್ಯವೇ ಇಲ್ಲ. ಸದ್ಯಕ್ಕೆ ಮತ್ತೆ ಚರ್ಚೆಯಾಗುತ್ತಿರುವ ಗಡಿ ಕ್ಯಾತೆ ವಿವಾದ ಎದ್ದ ಸಂದರ್ಭದಲ್ಲಿ ಸರ್ಕಾರದವರು ನಿರ್ಧಾರ ತೆಗೆದುಕೊಳ್ಳಲಿ. ಸರ್ಕಾರದ ಬದಲಾಗಿ ಎರಡೂ ರಾಜ್ಯಗಳ ರಾಜ್ಯಪಾಲರು ಮಾತನಾಡಲು ಅನುಮತಿ ನೀಡಿದವರಾರು? ಉಭಯ ರಾಜ್ಯಪಾಲರ ಮಧ್ಯೆ ಗಡಿ ಕುರಿತು ನಡೆದ ಮಾತುಕತೆಯನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂದರು.

ಗಡಿ ವಿಷಯವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವಿದೆ. ಆದರೆ, ಅದನ್ನು ವಿಚಾರಣೆಗೆ ತೆಗೆದುಕೊಳ್ಳಬೇಕೋ ಅಥವಾ ಬಿಡಬೇಕೋ ಎಂಬುದೇ ಚರ್ಚೆ ನಡೆಯುತ್ತಿದೆ. ಅಂತಹ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರದ ಕೆಲವರು ಖ್ಯಾತೆ ತೆಗೆದಿದ್ದಾರೆ. ಗಡಿಗೆ ಸಂಬಂಧಿಸಿದಂತೆ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಒಟ್ಟು ನಿರ್ಣಯ ಮಾಡಿದ್ದೇವೆ.

ಯಥಾಸ್ಥಿತಿ ಇಲ್ಲವೇ ಮಹಾಜನ ವರದಿ ಎಂಬುದು ಸರ್ವಾನುಮತದ ನಿರ್ಣಯವಾಗಿದೆ. ಅದನ್ನು ಬಿಟ್ಟು ಯಾವುದೋ ಒಂದು ಹಳ್ಳಿಯಲ್ಲಿ ಠರಾವ್‌ ಅಥವಾ ಪ್ರತಿಭಟನೆ ಮೂಲಕ ಮತ್ತೊಂದು ರಾಜ್ಯ ಸೇರುತ್ತೇವೆ ಎಂಬುದರ ಬಗ್ಗೆ ಮಾತುಕತೆ ನಡೆಸುತ್ತೇವೆ ಎಂಬ ಸಿಎಂ ಹೇಳಿಕೆ ಸಲ್ಲದು. ಈ ರೀತಿಯ ಮಾತುಕತೆ ಸದನದಲ್ಲಿ ಕೈಗೊಂಡ ನಿರ್ಣಯಕ್ಕೆ ವಿರುದ್ಧವಾದುದು.

ಮಹಾಜನ್‌ ವರದಿಯಿಂದ ನಮಗೂ ಕೆಲವು ನಷ್ಟವಾದರೂ ಅಂತಿಮವಾಗಿ ಒಪ್ಪಿಕೊಳ್ಳುತ್ತೇವೆ. ಇಲ್ಲದಿದ್ದರೆ ಯಥಾಸ್ಥಿತಿ. ಅದನ್ನು ಬಿಟ್ಟು ಚರ್ಚೆ, ಮಾತುಕತೆ ಸಾಧ್ಯವೇ ಇಲ್ಲ ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.