
ತಕ್ಷಣ ಗಡಿ ಉಸ್ತುವಾರಿಗೆ ಸಚಿವರ ನೇಮಿಸಿ: ಎಚ್.ಕೆ. ಪಾಟೀಲ್
ಯಥಾಸ್ಥಿತಿ ಇಲ್ಲವೇ ಮಹಾಜನ ವರದಿಯೇ ಅಂತಿಮ
Team Udayavani, Nov 30, 2022, 9:45 PM IST

ಗದಗ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೆ ಕ್ಯಾತೆ ತೆಗೆದಿದೆ. ಮುಖ್ಯಮಂತ್ರಿಗಳು ಕೂಡಲೇ ಗಡಿ ಉಸ್ತುವಾರಿಗೆ ಸಚಿವರನ್ನು ನೇಮಿಸಬೇಕು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಕೆ. ಪಾಟೀಲ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿಚಾರದಲ್ಲಿ ಯಥಾಸ್ಥಿತಿ ಇಲ್ಲವೇ ಮಹಾಜನ ವರದಿಯೇ ಅಂತಿಮ. ಈ ನಿಟ್ಟಿನಲ್ಲಿ ಕರ್ನಾಟಕದ ನಿಲುವು ಸ್ಪಷ್ಟವಾಗಿದೆ.
ಮಾತುಕತೆ ಸಾಧ್ಯವೇ ಇಲ್ಲ. ಸದ್ಯಕ್ಕೆ ಮತ್ತೆ ಚರ್ಚೆಯಾಗುತ್ತಿರುವ ಗಡಿ ಕ್ಯಾತೆ ವಿವಾದ ಎದ್ದ ಸಂದರ್ಭದಲ್ಲಿ ಸರ್ಕಾರದವರು ನಿರ್ಧಾರ ತೆಗೆದುಕೊಳ್ಳಲಿ. ಸರ್ಕಾರದ ಬದಲಾಗಿ ಎರಡೂ ರಾಜ್ಯಗಳ ರಾಜ್ಯಪಾಲರು ಮಾತನಾಡಲು ಅನುಮತಿ ನೀಡಿದವರಾರು? ಉಭಯ ರಾಜ್ಯಪಾಲರ ಮಧ್ಯೆ ಗಡಿ ಕುರಿತು ನಡೆದ ಮಾತುಕತೆಯನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂದರು.
ಗಡಿ ವಿಷಯವಾಗಿ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣವಿದೆ. ಆದರೆ, ಅದನ್ನು ವಿಚಾರಣೆಗೆ ತೆಗೆದುಕೊಳ್ಳಬೇಕೋ ಅಥವಾ ಬಿಡಬೇಕೋ ಎಂಬುದೇ ಚರ್ಚೆ ನಡೆಯುತ್ತಿದೆ. ಅಂತಹ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರದ ಕೆಲವರು ಖ್ಯಾತೆ ತೆಗೆದಿದ್ದಾರೆ. ಗಡಿಗೆ ಸಂಬಂಧಿಸಿದಂತೆ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಒಟ್ಟು ನಿರ್ಣಯ ಮಾಡಿದ್ದೇವೆ.
ಯಥಾಸ್ಥಿತಿ ಇಲ್ಲವೇ ಮಹಾಜನ ವರದಿ ಎಂಬುದು ಸರ್ವಾನುಮತದ ನಿರ್ಣಯವಾಗಿದೆ. ಅದನ್ನು ಬಿಟ್ಟು ಯಾವುದೋ ಒಂದು ಹಳ್ಳಿಯಲ್ಲಿ ಠರಾವ್ ಅಥವಾ ಪ್ರತಿಭಟನೆ ಮೂಲಕ ಮತ್ತೊಂದು ರಾಜ್ಯ ಸೇರುತ್ತೇವೆ ಎಂಬುದರ ಬಗ್ಗೆ ಮಾತುಕತೆ ನಡೆಸುತ್ತೇವೆ ಎಂಬ ಸಿಎಂ ಹೇಳಿಕೆ ಸಲ್ಲದು. ಈ ರೀತಿಯ ಮಾತುಕತೆ ಸದನದಲ್ಲಿ ಕೈಗೊಂಡ ನಿರ್ಣಯಕ್ಕೆ ವಿರುದ್ಧವಾದುದು.
ಮಹಾಜನ್ ವರದಿಯಿಂದ ನಮಗೂ ಕೆಲವು ನಷ್ಟವಾದರೂ ಅಂತಿಮವಾಗಿ ಒಪ್ಪಿಕೊಳ್ಳುತ್ತೇವೆ. ಇಲ್ಲದಿದ್ದರೆ ಯಥಾಸ್ಥಿತಿ. ಅದನ್ನು ಬಿಟ್ಟು ಚರ್ಚೆ, ಮಾತುಕತೆ ಸಾಧ್ಯವೇ ಇಲ್ಲ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೆಯೂರಿನಲ್ಲಿ ವಿಜೃಂಭಣೆಯ ಸೋಮೇಶ್ವರ ರಥೋತ್ಸವ

ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ: 7 ಮಂದಿಗೆ 10 ವರ್ಷ ಶಿಕ್ಷೆ

ಡಿಕೆಶಿ, ರಮೇಶ್, ಲಕ್ಷ್ಮೀ ವೈಯಕ್ತಿಕ ನಿಂದನೆ ಬಿಡಲಿ: ಬಾಲಚಂದ್ರ ಜಾರಕಿಹೊಳಿ ಮನವಿ

ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿಯಲ್ಲಿ ರಾತ್ರೋ ರಾತ್ರಿ ಹೈಡ್ರಾಮಾ: ಪಿಡಿಓ ಎತ್ತಂಗಡಿ, ಆದೇಶ ವಾಪಾಸ್

ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
