ಉಕ್ಕಿದ ಬೆಣ್ಣೆಹಳ್ಳ; ಹೊಳೆಆಲೂರು- ಮೆಣಸಗಿ ಸಂಪರ್ಕ ಕಡಿತ
Team Udayavani, Jul 25, 2021, 11:41 AM IST
ಗದಗ: ಕಳೆದೊಂದು ವಾರದಿಂದ ಬಿಟ್ಟು ಬಿಡದೆ ಮಳೆಯಾಗಿದ್ದರಿಂದ ಜಿಲ್ಲೆಯ ಮಲಪ್ರಭ, ಬೆಣ್ಣೆಹಳ್ಳ ಹಾಗೂ ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಬೆಣ್ಣೆಹಳ್ಳ ಉಕ್ಕಿ ಹರಿದಿದ್ದರಿಂದ ಹೊಳೆಆಲೂರು- ಮೆಣಸಗಿ ಸೇತುವೆ ಜಲಾವೃತಗೊಂಡಿದ್ದು, ಸಂಪರ್ಕ ಕಡಿತಗೊಂಡಿದೆ.
ಜಿಲ್ಲೆಯ ನರಗುಂದ, ರೋಣ ಹಾಗೂ ಮುಂಡರಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನೆರೆ ಆತಂಕ ಆವರಿಸಿದೆ. ಕಳೆದ ಎರಡು ದಿನಗಳಿಂದ ಬೆಣ್ಣೆಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿದೆ. ಇದೇ ವೇಳೆ ನವಿಲುತೀರ್ಥ ಜಲಾಶಯದಲ್ಲಿ ಒಳ ಹರಿವು ಹೆಚ್ಚಿದ್ದರಿಂದ ಸುಮಾರು 18 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಹೀಗಾಗಿ ಬೆಣ್ಣೆಹಳ್ಳದ ನೀರು ನದಿಗೆ ಸೇರಲಾಗದೇ ಹಿಮ್ಮುಖವಾಗುತ್ತಿದೆ. ಪರಿಣಾಮ ಹೊಳೆಆಲೂರು- ಮೆಣಸಗಿ ಸೇತುವೆ ಜಲಾವೃತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಅಕ್ಕಪಕ್ಕದ ಜಮೀನುಗಳಿಗೂ ಹಳ್ಳ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಗೀಡಗಿದೆ.
ಮತ್ತೊಂದೆಡೆ ತುಂಗಭದ್ರಾ ನದಿಯಲ್ಲೂ ನೀರಿನ ಪ್ರಮಾಣ ಹೆಚ್ಚಾಗಿದ್ದು, ಮುಂಡರಗಿ ತಾಲೂಕಿನ ವಿಠಲಾಪೂರ ಗ್ರಾಮಕ್ಕೆ ನೀರು ನುಗ್ಗುತ್ತಿವೆ.
ಇದನ್ನೂ ಓದಿ:39,742 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆ; 535 ಸೋಂಕಿತರು ಸಾವು
ಗುಮ್ಮಗೋಳ ಗ್ರಾಮದ ಗೋಣಿಬಸವೇಶ್ವರ ದೇವಸ್ಥಾನದ ಸಮೀಪದ ವರೆಗೆ ನೀರು ಆವರಿಸಿದೆ. ಪ್ರವಾಹಕ್ಕೆ ಒಳಗಾಗಬಹುದಾದ ಗ್ರಾಮಗಳಿಗೆ ಭೇಟಿ ನೀಡಿರುವ ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಗ್ರಾಮಸ್ಥರಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ