ನೂರಾರು ಹೆಕ್ಟೇರ್‌ನಲ್ಲಿ ನಳನಳಿಸುತ್ತಿದೆ ಹುರಳಿ

ರೈತರ ತಾತ್ಸಾರದ ಮಧ್ಯೆಯೂ ಹಸುವಿನ ಆಹಾರವೆಂದೇ ಪರಿಗಣಿಸಲ್ಪಟ್ಟ ಅತ್ಯುತ್ತಮ ಬೆಳೆ

Team Udayavani, Nov 9, 2020, 6:58 PM IST

ನೂರಾರು ಹೆಕ್ಟೇರ್‌ನಲ್ಲಿ ನಳನಳಿಸುತ್ತಿದೆ ಹುರಳಿ

ಗಜೇಂದ್ರಗಡ: ರೈತರ ತಾತ್ಸಾರದ ಬೆಳೆ ಜೊತೆ ಹಸುವಿನ ಆಹಾರವೆಂದೇ ಪರಿಗಣಿಸಲ್ಪಟ್ಟ ಹುರಳಿ ಫಸಲು ತಾಲೂಕಿನಾದ್ಯಂತ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ನಳನಳಿಸುತ್ತಿದೆ.

ಸದಾ ಶೇಂಗಾ, ಸೂರ್ಯಕಾಂತಿ, ಗೋವಿನ ಜೋಳ ಹಾಗೂ ಹತ್ತಿಯಂತಹ ವಾಣಿಜ್ಯ ಬೆಳೆ ಬೆಳೆದು ನಷ್ಟ ಅನುಭವಿಸಿ ಸಾಲಕ್ಕೆ ತುತ್ತಾದ ರೈತರು ಇನ್ನೇನು ಭೂಮಿ ಬಂಜರು ಗೆಡುವಬಾರದು. ಕೊನೆಗೆ ಹಸುವಿಗೆ ಆಹಾರವಾದರೂ ಆಗಲಿ ಎಂದು ಬೇಕಾಬಿಟ್ಟಿಯಾಗಿ ಬೆಳೆಯುತ್ತಿದ್ದ ಹುರಳಿ ಬೆಳೆಗೆ ಈಗ ಬೇಡಿಕೆ ಬಂದಿದೆ. ಹಾಗಾಗಿ, ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ ಎನ್ನುವ ಮಾತು ಅಕ್ಷರ ಸಹ ಸತ್ಯವಾಗಿದೆ ಎನ್ನುವುದಕ್ಕೆ ಹುರಳಿ ಬೆಳೆ ಸಾಕ್ಷಿಯಾಗಿದೆ.

ಅತ್ಯಂತ ಕಡಿಮೆ ಖರ್ಚಿನ ಜತೆ ಬಿತ್ತಿದ 90 ದಿನದಲ್ಲಿ ಕೇವಲ ತಂಪು ವಾತಾವರಣದಲ್ಲಿ ಬೆಳೆಯುವ ಹುರಳಿ ಎಕರೆ ಒಂದಕ್ಕೆ 2ರಿಂದ 3ಕ್ವಿಂಟಲ್‌ ಬೆಳೆ ಬರುತ್ತದೆ. ಮಾರುಕಟ್ಟೆಯಲ್ಲಿ ಕೇವಲ 1200 ಇದ್ದ ಹುರಳಿ ಬೆಲೆ ಪ್ರಸ್ತುತ ದಿನಗಳಲ್ಲಿ ಕ್ವಿಂಟಲ್‌ ಒಂದಕ್ಕೆ 1,800 ರಿಂದ 2,000ರೂ. ವರೆಗೆ ಬೆಲೆ ಇದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 75 ರೂ. ಇದೆ. ಹೀಗಾಗಿ, ಹುರಳಿ ಬೆಳೆಗೆ ಉತ್ತಮ ಬೆಲೆ ದೊರೆಯುತ್ತಿದೆ.

ಕುಂಟೋಜಿ, ಕಾಲಕಾಲೇಶ್ವರ, ಬೆಣಚಮಟ್ಟಿ, ಗೊಗೇರಿ, ಬೈರಾಪೂರ, ಮುಶಿಗೇರಿ, ನೆಲ್ಲೂರ, ಮಾಟರಂಗಿ, ನಾಗರಸಕೊಪ್ಪ, ಮ್ಯಾಕಲಝರಿ, ರಾಜೂರು, ದಿಂಡೂರ, ರಾಮಾಪೂರ, ವೀರಾಪೂರ, ಲಕ್ಕಲಕಟ್ಟಿ, ಜಿಗೇರಿ ಸೇರಿದಂತೆ ತಾಲೂಕಿನ ಹಲವಾರು ಗ್ರಾಮದ ರೈತರು ಕೆಂಪು ಮಿಶ್ರಿತ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ಹುರಳಿ ಬೆಳೆ ಕಂಗೊಳಿಸುತ್ತಿದೆ. ಪೌಷ್ಟಿಕಾಂಶವುಳ್ಳ ಹುರಳಿ: ಇಂದಿನ ತಾಂತ್ರಿಕ ಯುಗದಲ್ಲಿ ಆಧುನಿಕ ಆಹಾರ ಪದ್ಧತಿಗೆ ಮಾರು ಹೋಗಿ ಸದಾ ಆರೋಗ್ಯದ ಮೇಲೆ ಒಂದಿಲ್ಲೊಂದು ರೀತಿಯಲ್ಲಿ ದುಷ್ಪರಿಣಾಮ ಬೀರಿ ಮನುಷ್ಯನನ್ನು ರೋಗ ಗ್ರಸ್ತನನ್ನಾಗಿಸುವ ಆಹಾರಕ್ಕೆ ತದ್ವಿರುದ್ಧವಾಗಿ ಜತೆಗೆ ಉತ್ತಮ ಆರೋಗ್ಯಕ್ಕೆ ಅತ್ಯಂತ ಅವಶ್ಯ ಹಾಗೂ ಪೌಷ್ಟಿಕಾಂಶ ಗುಣವುಳ್ಳ ರಾಗಿ, ನವಣಿ ಹೊರತುಪಡಿಸಿದರೆ ಹುರಳಿ ಕಾಳು ಆರೋಗ್ಯಕ್ಕೆ ಹೇಳಿ ಮಾಡಿಸಿದ ಆಹಾರವಾಗಿದೆ. ಹೀಗಾಗಿ, ಮಾರುಕಟ್ಟೆಯಲ್ಲಿ ಅತ್ಯಂತ ಬೇಡಿಕೆಯುಳ್ಳ ಬೆಳೆ ಇದಾಗಿದೆ. ರೈತರ ಬದುಕಿಗೆ ಸಹಕಾರಿಯಾಗಿದೆ.

ಬೇಸಾಯವೇ ಮೂಲ ವೃತ್ತಿ: ಮೈ ಮುರಿದು ದುಡಿದರೆ ಭೂತಾಯಿ ಕೈ ಬಿಡುವದಿಲ್ಲ ಎನ್ನುವ ನಂಬಿಕೆ ಜತೆ ವ್ಯವಸಾಯ ನಮ್ಮ ಉಸಿರು ಎಂದು ಬದುಕು ಸಾಗಿಸುತ್ತ ಬಂದಿರುವ ರೈತರು, ಪೂರ್ವಜರ ಮೂಲ ವೃತ್ತಿ ಬೇಸಾಯವನ್ನೇ ನಂಬಿ ಬದುಕು ಸಾಗಿಸುತ್ತಿದ್ದಾರೆ. ಆದರೆ, ಇತ್ತೀಚಿನ ವರ್ಷದಲ್ಲಿ ಹವಾಮಾನ ವೈಪರೀತ್ಯ ಹಾಗೂ ಸಕಾಲಕ್ಕೆ ಬಾರದ ಮಳೆಯಿಂದಾಗಿ ರೈತಾಪಿ ಬದುಕು ಸದಾ ನಷ್ಟದ ಗುಡ್ಡೆಯಾಗಿದೆ. ಬೇಸಾಯ ಮಾಡಬೇಕೋ ಬೇಡವೊ ಎನ್ನುವ ಸಂದಿಗ್ಧ ಪರಿಸ್ಥಿತಿ ಎದುರಾದ ಪರಿಣಾಮ ಹಿರಿಯರು ಉಳಿಸಿಕೊಂಡು ಬಂದ ಬೇಸಾಯ ಮೂಲ ವೃತ್ತಿ ಉಳಿಸುವುದು ಹೇಗೆ ಎನ್ನುವ ಪ್ರಶ್ನೆ ರೈತರನ್ನು ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ಭೂತಾಯಿ ನಂಬಿದವರನ್ನು ಕೈಬಿಡುವುದಿಲ್ಲ. ವಾಣಿಜ್ಯ ಬೆಳೆಗಳು ಕೈಕೊಟ್ಟರೂ ನಿರ್ಲಕ್ಷಿತ ಬೆಳೆಗಳು ರೈತರನ್ನು ಕೈಹಿಡಿಯುತ್ತವೆ ಎನ್ನುವುದಕ್ಕೆ ಹುರಳಿ ಬೆಳೆ ನಿದರ್ಶನವಾಗಿದೆ.

ಪ್ರತಿ ವರ್ಷ ಶೇಂಗಾ ಬೆಳೆದು ಸಾಲ ಮಾಡಿ, ಸಾಕಾಗೈತ್ರೀ. ಇನ್ನೇನು ಭೂಮಿ ಹಂಗ ಬಿಟ್ರ ಕಸ ಬೆಳೆದ ಭೂಮಿ ಹಾಳಾಕೈತಿ. ಬೆಳದ್ರ ಎತ್ತಿಗೆ ಹೊಟ್ಟು ಆಗತೈತಿ ಅಂತ ಹುಳ್ಳಿ ಬಿತ್ತೀವ್ರಿ. ಆದ್ರ ಈಗ ಬಜಾರದಾಗ ಹುಳ್ಳಿಗೆ ಚಲೋ ರೇಟ್‌ ಐತ್ರಿ. ಬಿತ್ತಿದ ಹುಳ್ಳಿ ಭಾರೀ ಚೋಲೋ ಐತ್ರಿ. ಭೂಮಿ ತಾಯಿ ಈ ಬೆಳ್ಯಾಗರ ಲಾಭ ಕೊಡ್ತಾಳ ಅನ್ನೋ ಆಸೆ ಹುಟೈತ್ರಿ.  ಅಮರಪ್ಪ ಬೆನಹಾಳ, ಹುರಳಿ ಬೆಳದ ರೈತ

 

ಡಿ.ಜಿ ಮೋಮಿನ್‌

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.