ಹುಮನಾಬಾದ: ಮನೆ ಕಟ್ಟಲು ಸಿಗುತ್ತಿಲ್ಲ ಪರವಾನಗೆ


Team Udayavani, Feb 6, 2021, 1:08 PM IST

Humanaabad: No license to build a house

ಹುಮನಾಬಾದ: ಲಕ್ಷಾಂತರ ರೂ. ನೀಡಿ ಹಳೇ ಬಡಾವಣೆಗಳಲ್ಲಿ ಖರೀದಿಸಿದ ನಿವೇಶನದಲ್ಲಿ ಹೊಸ ಮನೆ ಕಟ್ಟಲು ಇಲ್ಲಿನ ಪುರಸಭೆ ಪರವಾನಗಿ ನೀಡುತ್ತಿಲ್ಲ. ಇದರಿಂದ ಪಟ್ಟಣದ ನಿವಾಸಿಗಳು ಪುರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣದಲ್ಲಿ ಪುರಸಭೆಯಿಂದ ಅಧಿಕೃತಗೊಂಡ ಬಡಾವಣೆಗಳು ಇವೆ. ಆ ಬಡಾವಣೆಗಳಲ್ಲಿ ಮನೆ ನಿರ್ಮಾಣಕ್ಕೆ ಈಗ ಪರವಾನಗಿ ದೊರೆಯುತ್ತಿಲ್ಲ. ನಗರಾಭಿವೃದ್ಧಿ ಇಲಾಖೆಯಿಂದ ಪರವಾನಗಿ ಪಡೆಯದ ಹಿನ್ನೆಲೆಯಲ್ಲಿ ಪುರಸಭೆ ತಂತ್ರಾಂಶದಲ್ಲಿ ಆ ದಾಖಲೆಗಳು ತೆಗೆದುಕೊಳ್ಳುತ್ತಿಲ್ಲ. ನಗರಾಭಿವೃದ್ಧಿ ಇಲಾಖೆಯಿಂದ ಪರವಾನಗಿ ಪಡೆದ ಬಡಾವಣೆಗಳಲ್ಲಿ ಪರವಾನಗಿ ದೊರೆಯುತ್ತಿವೆ ಎಂದು ಹೇಳುತ್ತಾರೆ ಪುರಸಭೆ ಸಿಬ್ಬಂದಿ.

ಸಾರ್ವಜನಿಕರ ದೂರು: ಲಕ್ಷಾಂತರ ರೂ. ಖರ್ಚು ಮಾಡಿ ಖರೀದಿಸಿದ ನಿವೇಶನಕ್ಕೆ ಸ್ವಂತ ಹೆಸರಿಗೆ ಮಾಡಿಕೊಳ್ಳಲು, ಮುಟೇಶನ್‌ ಸೇರಿದಂತೆ ಇತರೆ ತೆರಿಗೆಗಳು ಪುರಸಭೆಗೆ ಪಾವತಿಸಲಾಗಿದೆ. ಪರವಾನಗಿದೊರೆಯುವುದಿಲ್ಲ ಎಂದಾದರೆ  ಯಾವ ಕಾರಣಕ್ಕೆ ವಿವಿಧ ತೆರಿಗೆಗಳು ಪುರಸಭೆ ಪಡೆದಿದೆ. ಅಲ್ಲದೆ, ಎಲ್ಲಾ ದಾಖಲೆಗಳು ಕೂಡ ಇದ್ದರು ಯಾವ ಕಾರಣಕ್ಕೆ ಪರವಾನಗಿ ನೀಡುತ್ತಿಲ್ಲ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಇದಕ್ಕೆ ಉತ್ತರಿಸುತ್ತಿರುವ ಅ ಧಿಕಾರಿಗಳು, ಪುರಸಭೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಈ ವಿಷಯ ಸರ್ಕಾರ ಮಟ್ಟದಲ್ಲಿದ್ದು, ಸರ್ಕಾರವೇ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಬೇಕಾದರೆ ಮೇಲಧಿ ಕಾರಿಗಳಿಗೆ ಮನವಿ ಸಲ್ಲಿಸಿ ಎಂದು ಹೇಳುತ್ತಿದ್ದಾರೆ.

116 ಕಟ್ಟಡ ಕಾಮಗಾರಿ ಸ್ಥಗಿತ: ಕಳೆದ ತಿಂಗಳು ಪುರಸಭೆಯಲ್ಲಿ ನಡೆದ ಪ್ರಥಮ ಸಾಮಾನ್ಯ ಸಭೆಯಲ್ಲಿ ಶಾಸಕ ರಾಜಶೇಖರ ಪಾಟೀಲ ಸೇರಿದಂತೆ ಪುರಸಭೆ ಸದಸ್ಯರು ಪಟ್ಟಣದಲ್ಲಿನ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್‌ ಹಾಕಬೇಕು ಎಂದು ತೀರ್ಮಾನಿಸಿ ಠರಾವು ಪಾಸ್‌ ಮಾಡಿದರು. ಈ ಹಿನ್ನೆಲೆಯಲ್ಲಿ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಪರವಾನಗಿ ರಹಿತ ಕಟ್ಟಡ ಕಾಮಗಾರಿಗಳನ್ನು ಪುರಸಭೆ ಸಿಬ್ಬಂದಿ ಸ್ಥಗಿತಗೊಳಿಸುವ ಕಾರ್ಯ ನಡೆಸಿದ್ದಾರೆ. ಈವರೆಗೆ 116 ಕಟ್ಟಡ ಕಾಮಗಾರಿಯ ಕೆಲಸ ಬಂದ್‌ ಮಾಡಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ:ಎಸ್‌ಟಿ ಘೋಷಣೆ ಸಿಎಂನಿಂದ ಸಾಧ್ಯವಿಲ್ಲ: ಈಶ್ವರಪ್ಪ

ಕಟ್ಟಡ ಮಾಲೀಕರ ಆಕ್ರೋಶ: ಪುರಸಭೆ ವಿರುದ್ಧ ಕಟ್ಟಡ ಮಾಲೀಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕಟ್ಟಡ ಪರವಾನಗಿ ಇಲ್ಲದೆ ಮನೆ ಕಟ್ಟಲು ಯಾರು ಬಯಸೋದಿಲ್ಲ. ಪುರಸಭೆಯಲ್ಲಿ ಸೂಕ್ತ ಸಮಯಕ್ಕೆ ಪರವಾನಗಿ ನೀಡುತ್ತಿಲ್ಲ. ಪರವಾನಗಿಗಾಗಿ ಅರ್ಜಿ ಸಲ್ಲಿಸಿದ ಕೆಲವರ ಅರ್ಜಿಗಳು ತಿರಸ್ಕಾರಗೊಂಡಿವೆ. ಪ್ರಭಾವಿಗಳು ಸರ್ಕಾರಿ ಭೂಮಿಯಲ್ಲಿ ಕಟ್ಟಡ ಕಾಮಗಾರಿ ನಡೆಸಿದರು ಪರವಾಗಿಲ್ಲ. ಆ ಕಡೆ ಪುರಸಭೆ ಅಧಿ  ಕಾರಿಗಳು ನೋಡೊದಿಲ್ಲ. ಆದರೆ, ಬಡವರನ್ನು ಮಾತ್ರ ಬಿಡುವುದಿಲ್ಲ. ಎಲ್ಲರೂ ಬಡವರ ಹಿಟ್ಟೆಗೆ ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಹೆಸರು ಹೇಳದ ಕಟ್ಟಡ ಮಾಲೀಕರು ಅಳಲು ತೋಡಿಕೊಂಡರು.

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.