ಮಾನವೀಯತೆ ಮೆರೆದ ಪೊಲೀಸರು


Team Udayavani, Apr 20, 2020, 6:07 PM IST

ಮಾನವೀಯತೆ ಮೆರೆದ ಪೊಲೀಸರು

ಸಾಂದರ್ಭಿಕ ಚಿತ್ರ

ಮುಂಡರಗಿ: ಮಾನಸಿಕವಾಗಿ ಖನ್ನತೆಗೆ ಒಳಗಾದ ವ್ಯಕ್ತಿಯೋರ್ವನನ್ನು ಪೊಲೀಸರು ಸರಕಾರಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ರವಿವಾರ ಪಟ್ಟಣದಲ್ಲಿ ಜರುಗಿದ್ದು, ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.

ಬೆಂಗಳೂರಿನ ರಾಜಾಜಿನಗರದ ಕಂಫರ್ಟ್ ಜೋನ್‌ ಪಿಜಿಯಿಂದ ಮಲ್ಲಿಕಾರ್ಜುನ ಮಹಾಂತಯ್ಯ ಗುರುಮಠದ ವ್ಯಕ್ತಿಯು ಕಾಣೆಯಾಗಿರುವ ಬಗ್ಗೆ ಸುಬ್ರಮಣ್ಯ ನಗರ ಠಾಣೆಯಲ್ಲಿ ವಾರದ ಹಿಂದೆಯಷ್ಟೇ ಪ್ರಕರಣ ದಾಖಲಾಗಿತ್ತು. ಆದರೆ ಪಟ್ಟಣದ ಕೊಪ್ಪಳ ರಸ್ತೆಯಲ್ಲಿ ಪೊಲೀಸರು ಬೆಳಗ್ಗೆ ಗಸ್ತು ತಿರುಗುವಾಗ ಮಲ್ಲಿಕಾರ್ಜುನ ಗುರುಮಠನನ್ನು ಮಾತನಾಡಿಸಿದಾಗ ಮೇಲ್ನೋಟಕ್ಕೆ ಮಾನಸಿಕವಾಗಿ ಖನ್ನತೆಗೆ ಒಳಗಾಗಿರುವ ಬಗ್ಗೆ ಮನಗಂಡು ಸರಕಾರಿ ತಾಲೂಕಾಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಸುಸ್ತು ಮತ್ತು ಖನ್ನತೆಯಿಂದ ಬಳಲಿರುವ ಮಲ್ಲಿಕಾರ್ಜುನ ಗುರುಮಠದ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಸ್ತು ತಿರುಗುವಾಗ ಸಿಪಿಐ ಸುಧೀರಕುಮಾರ ಬೆಂಕಿ, ಪಿಎಸ್‌ಐ ಚಂದ್ರಪ್ಪ ಈಟಿ ಮತ್ತು ಸಿಬ್ಬಂದಿಯು ಮಲ್ಲಿಕಾರ್ಜುನ ಗುರುಮಠದ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆಯಲ್ಲಿ ಕೊಡಿಸಿದ್ದಾರೆ.

ಮೂಲತಃ ವಿಜಯಪುರದ ರಾಮದೇವ್‌ ನಗರದ ನಿವಾಸಿ ಸಾಫ್ಟ್‌ವೇರ್‌ ಇಂಜನಿಯರ್‌ ಆಗಿದ್ದ ಮಲ್ಲಿಕಾರ್ಜುನ ಗುರುಮಠದ ಎಂ.ಟೆಕ್‌ ಅಧ್ಯಯನ ಮಾಡಿ, ಬೆಂಗಳೂರು ಖಾಸಗಿ ಸಾಫ್ಟ್‌ವೇರ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಾರದಿಂದ ಮಲ್ಲಿಕಾರ್ಜುನ ಗುರುಮಠದ ತಾವು ವಾಸವಾಗಿದ್ದ ಕಂಫರ್ಟ್ ಜೋನ್‌ ಪಿಜಿಯಿಂದ ಕಾಣೆಯಾಗಿದ್ದರು. ಮಲ್ಲಿಕಾರ್ಜುನ ಗುರುಮಠದ ಕಾಣೆಯಾಗಿರುವ ಬಗ್ಗೆ ಕುಟುಂಬಸ್ಥರು ಆತಂಕಗೊಂಡು ಬೆಂಗಳೂರಿನ ಸುಬ್ರಮಣ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಲ್ಲಿಕಾರ್ಜುನ ಗುರುಮಠದರ ತಾಯಿ ಮಗನ ಚಿಂತೆಯಲ್ಲಿ ಹಾಸಿಗೆ ಹಿಡಿದಿದ್ದರು. ಮಲ್ಲಿಕಾರ್ಜುನ ಸಿಕ್ಕಿರುವ ಕಾರಣಕ್ಕೆ ಕುಟುಂಬಸ್ಥರು ನಿರಾಳರಾಗಿ ಕುಟುಂಬದಲ್ಲಿ ನೆಮ್ಮದಿ ಮೂಡಿದೆ.

ಮಾನವೀಯತೆ ದೃಷ್ಟಿಯಿಂದ ಮುಂಡರಗಿ ಪೊಲೀಸರು ಮಲ್ಲಿಕಾರ್ಜುನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯ ಕಳಕಳಿಯಿಂದ ನಡೆದುಕೊಂಡಿರುವುದಕ್ಕೆ ಎಷ್ಟು ಧನ್ಯವಾದ ಹೇಳಿದರೂ ಕಡಿಮೆಯೇ. ಬೆಂಗಳೂರಿನ ಪಿಜಿಯಿಂದ ಮುಂಡರಗಿಯವರೆಗೂ ಹೇಗೆ ಇಲ್ಲಿಯವರೆಗೆ ಬಂದ ಎನ್ನುವುದರ ಬಗ್ಗೆ ಮಲ್ಲಿಕಾರ್ಜುನ ಗುಣಮುಖನಾದ ನಂತರ ಹೇಳಬೇಕಿದೆ. -ಶಶಿಧರ ಗುರುಮಠದ, ಮಲ್ಲಿಕಾರ್ಜುನ ಸಹೋದರ, ವಿಜಯಪುರ.

 

-ಹು.ಬಾ.ವಡ್ಡಟ್ಟಿ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.