ಶಿರಹಟ್ಟಿಯಲ್ಲಿ ಮಾನವೀಯತೆ ಗೋಡೆ!

•ಬೇಡವಾಗಿದ್ದು ಇಲ್ಲಿಡಿ, ಬೇಕಾಗಿದ್ದು ಕೊಂಡೊಯ್ಯಿರಿ •ಇಲ್ಲದವರ ನೆರವಿಗಾಗಿ ತಲೆ ಎತ್ತಿರುವ ವ್ಯವಸ್ಥೆ

Team Udayavani, Aug 28, 2019, 11:14 AM IST

gadada-tdy-3

ಗದಗ: ಉಳ್ಳವರಿಗೆ ಬೇಡವಾದ ವಸ್ತುಗಳನ್ನು ಇಲ್ಲದವರಿಗೆ ತಲುಪಿಸುವ ನಿಟ್ಟಿನಲ್ಲಿ ಇಲ್ಲೊಂದು ‘ಮಾನವೀಯತೆಯ ಗೋಡೆ’ ಸದ್ದಿಲ್ಲದೇ ನಿರ್ಮಾಣವಾಗಿದೆ. ಯಾರು ಬೇಕಾದರೂ ತಮಗೆ ಬೇಡವಾದ ವಸ್ತುಗಳನ್ನು ಇಲ್ಲಿ ತಂದಿಡಬಹುದು. ಬೇಕಾದವರು ಅವುಗಳನ್ನು ಯಾರ ಹಂಗಿಲ್ಲದೇ ಉಚಿತವಾಗಿ ಕೊಂಡೊಯ್ಯಬಹುದು.

ಇಂಥಹದೊಂದು ವ್ಯವಸ್ಥೆ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿದೆ. ಕೆಲವರಿಗೆ ಮನೆಯಲ್ಲಿ ಯಾವುದೋ ವಸ್ತು ಬೇಡವಾಗಿ, ಹೆಚ್ಚುವರಿಯಾಗಿ ಮೂಲೆ ಸೇರುತ್ತಿರುತ್ತದೆ. ಅದನ್ನು ಯಾರಿಗಾದರೂ ನೀಡಬೇಕೆಂದರೂ ಹಿಂಜರಿಕೆ ಕಾಡುತ್ತಿರುತ್ತದೆ. ಅದರಂತೆ ಅದೆಷ್ಟೋ ಜನ ತಮಗೆ ಬೇಕಾದ ವಸ್ತು ಖರೀದಿಸುವಷ್ಟು ಆರ್ಥಿಕವಾಗಿ ಸದೃಢವಾಗಿರದೇ ಕೊರಗುತ್ತಿರುತ್ತಾರೆ. ಧರಿಸುವ ಬಟ್ಟೆ, ಹೊದಿಕೆ ಇಲ್ಲದೆ ಪರದಾಡುತ್ತಿರುತ್ತಾರೆ. ಇವರೆಲ್ಲ ಮತ್ತೂಬ್ಬರ ಬಳಿಯಿರುವ ನಿರುಪಯುಕ್ತ ವಸ್ತುವಿಗಾಗಿ ಕೈಚಾಚುವುದು ಹೇಗೆ ಎಂಬ ಕೊರಗು ಇರುತ್ತದೆ. ಅಂತವರಿಗಾಗಿ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಶಿರಹಟ್ಟಿ ತಹಶೀಲ್ದಾರ್‌ ಯಲ್ಲಪ್ಪ ಗೋಣೆಣ್ಣನವರ ನೆರವಾಗಿದ್ದಾರೆ.

ತಹಶೀಲ್ದಾರ್‌ ಕಚೇರಿ ಮುಂಭಾಗದಲ್ಲಿ ಸುಮಾರು 6 ಅಡಿ ಎತ್ತರ ಹಾಗೂ 7 ಅಡಿ ಅಗಲದಷ್ಟು ಗೋಡೆ ಹಾಗೂ ಅದರಲ್ಲಿ 2*2 ಅಳತೆಯ 14 ಗೂಡುಗಳನ್ನು ನಿರ್ಮಿಸಿ, ‘ಮಾನವೀಯತೆ ಗೋಡೆ’ ‘ನಿಮ್ಮಲ್ಲಿರುವ ಹೆಚ್ಚಾದ ಉಪಯುಕ್ತ ವಸ್ತುಗಳನ್ನು ಇಲ್ಲಿ ಇಡಿರಿ. ಇಲ್ಲಿರುವ ನಿಮಗೆ ಅವಶ್ಯವಿರುವ ವಸ್ತುಗಳನ್ನು ಒಯ್ಯಿರಿ’ ಎಂಬ ಫ್ಲೆಕ್ಸ್‌ನ್ನೂ ತೂಗು ಹಾಕಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಆ. 15ರಂದು ಆರಂಭಗೊಂಡಿರುವ ‘ಮಾನವೀಯತೆಯ ಗೋಡೆ’ ಪ್ರಯತ್ನಕ್ಕೆ ಪಟ್ಟಣದ ಸಾರ್ವಜನಿಕರು ಹಾಗೂ ವರ್ತಕರು, ಬಡವರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಾರ್ವಜನಿಕರು ತಾವು ಬಳಸಿರುವ ಹೊಸ-ಹಳೆ ಬಟ್ಟೆ, ಚಳಿ ಮತ್ತು ಮಳೆಗಾಲದ ಉಡುಪುಗಳು, ಹೊದಿಕೆ, ಚಾಪೆ, ಪಾತ್ರೆ, ಹಳೆಯ ಪಠ್ಯ ಪುಸ್ತಕ, ಭಾಗಶಃ ಖಾಲಿ ಉಳಿದಿರುವ ನೋಟ್ಬುಕ್‌ಗಳು ಸೇರಿದಂತೆ ಹಲವು ವಸ್ತುಗಳನ್ನು ಸ್ವಚ್ಛಗೊಳಿಸಿಯೇ ತಂದು ಇಡುತ್ತಿದ್ದಾರೆ.

ಜೊತೆಗೆ ಸ್ಥಳೀಯ ಬಟ್ಟೆ ವ್ಯಾಪಾರಿಗಳು, ಟೇಲರ್‌ಗಳು ತಮ್ಮ ಬಳಿ ಗ್ರಾಹಕರು ಕೊಂಡೊಯ್ಯದ ಹೊಸ ಅಂಗಿ, ಪ್ಯಾಂಟ್‌ಗಳನ್ನೂ ತಂದಿಡುತ್ತಿದ್ದಾರೆ. ಅವು ದಿನವಿಡೀ ಮಾನವೀಯತೆ ಗೋಡೆಯ ಕಪಾಟುಗಳಲ್ಲಿದ್ದರೂ ಬೆಳಗಾಗುವುದರೊಳಗೆ ಖಾಲಿಯಾಗಿರುತ್ತವೆ ಎಂಬುದು ಗಮನಾರ್ಹ. ಬೆಳಗಿನ ಸಮಯದಲ್ಲಿ ಈ ವಸ್ತುಗಳನ್ನು ಕೊಂಡೊಯ್ಯಲು ಕೆಲವರಿಗೆ ಮುಜುಗರ ಎನಿಸಬಹುದು. ಆದರೆ, ತಮಗೆ ಬೇಡವಾದ ವಸ್ತುಗಳನ್ನು ಅಲ್ಲೇ ಬಿಟ್ಟಿರುತ್ತಾರೆ ಎನ್ನುತ್ತಾರೆ ಸ್ಥಳೀಯ ವರ್ತಕರಾದ ಶೇಖಣ್ಣ ಶಿರಹಟ್ಟಿ ಹಾಗೂ ಅಜಾರುದ್ದೀನ್‌ ಹೆಸರೂರು. ಇದು ಬಹುತೇಕರಿಗೆ ಉಪಯುಕ್ತವಾಗಿದೆ. ಅದರಲ್ಲೂ ಬಟ್ಟೆ ಹಾಗೂ ಹಳೆ ಪುಸ್ತಕಗಳನ್ನು ತಂದಿಡುವವರೇ ಹೆಚ್ಚು ಎನ್ನಲಾಗುತ್ತದೆ. ಒಟ್ಟಾರೆ, ತಹಶೀಲ್ದಾರ್‌ ಅವರ ಸಾಮಾಜಿಕ ಕಳಕಳಿಯಿಂದ ತಲೆ ಎತ್ತಿರುವ ಮಾನವೀಯತೆ ಗೋಡೆ ಹಲವರಿಗೆ ನೆರವಾಗುತ್ತಿದೆ.

 

•ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.