ನಗುವಿನ ಕಚಗುಳಿಯಿಟ್ಟು ಜೀವನೋತ್ಸಾಹ ತುಂಬುವುದೇ ಹಾಸ್ಯ

ಕನ್ನಡ ಭಾಷೆ ಅತ್ಯಂತ ಸಶಕ್ತವಾಗಿ ತಮ್ಮ ಬರವಣಿಗೆಯನ್ನು ತೋರಿದ್ದಾರೆ.

Team Udayavani, Dec 25, 2021, 6:03 PM IST

Udayavani Kannada Newspaper

ಗದಗ: ಜಂಜಡದ ಬದುಕಿನಲ್ಲಿ ಮನುಷ್ಯನ ಮನಸ್ಸು ಖನ್ನತೆಗೆ ಒಳಗಾಗಿ ಬದುಕಿನಲ್ಲಿ ಉಲ್ಲಾಸ, ಉತ್ಸಾಹ ಕಳೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಹಾಸ್ಯ ನಗುವಿನ ಕಚಗುಳಿಯನ್ನಿಟ್ಟು ಜೀವನೋತ್ಸಾಹ ತುಂಬುತ್ತದೆ ಎಂದು ಡಾ|ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.

ಲಿಂಗಾಯತ ಪ್ರಗತಿಶೀಲ ಸಂಘದ ಆಶ್ರಯದಲ್ಲಿ ತೋಂಟದಾರ್ಯ ಮಠದಲ್ಲಿ ಜರುಗಿದ ಶಿವಾನುಭವದಲ್ಲಿ ಮಾತನಾಡಿದ ಅವರು, ಬೀಚಿ ತಮ್ಮ ಹಾಸ್ಯ ಬರಹಗಳ ಮೂಲಕ ಕನ್ನಡಿಗರ ಮನೆ ಮಾತಾಗಿದ್ದಾರೆ. ಕನ್ನಡ ಸಾಹಿತ್ಯಕ್ಕೊಂದು ಸೊಗಸನ್ನು ತಂದು ಕೊಟ್ಟಿದ್ದಾರೆ. ಹಾಸ್ಯ ಪ್ರಸಂಗಗಳ ಮೂಲಕ ಸಮಾಜದ ಓರೆಕೋರೆಗಳನ್ನು ತಿದ್ದುವ ಕಾರ್ಯವನ್ನು ಬೀಚಿ ಮಾಡಿದ್ದಾರೆ. ಅವರ ಕೃತಿಗಳನ್ನು ಓದುವ ಮೂಲಕ ಅವರನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ಬೀಚಿ ಮತ್ತು ಹಾಸ್ಯ ವಿಷಯವಾಗಿ ಟಿ.ವಿ. ಹಾಸ್ಯ ಕಲಾವಿದ ಅರುಣ ಕುಲಕರ್ಣಿ ಉಪನ್ಯಾಸ ನೀಡಿ, ಜೀವನದ ಸಣ್ಣ ಸಣ್ಣ ಸಂಗತಿಗಳನ್ನು ಹೇಗೆ ಆಸ್ವಾದಿಸಬೇಕೆಂಬುದನ್ನು ಸರಳವಾಗಿ ತಮ್ಮ ಬರವಣಿಗೆ ಮೂಲಕ ಕನ್ನಡ ಸಾಹಿತ್ಯಕ್ಕೆ ಹೊಸ ಹೊಳಪನ್ನು ನೀಡಿದ್ದಾರೆ. ಹುಡುಕುವ ಕಣ್ಣು, ಛಾಡಿಸುವ ಮನೋಭಾವ, ಚುಚ್ಚು ಮಾತುಗಳ ಮೂಲಕ ಸಮಾಜಕ್ಕೆ ಸಂದೇಶ ನೀಡುವ ಪ್ರಯತ್ನವನ್ನು ಸಾಹಿತ್ಯದ ಮೂಲಕ ಮಾಡಿದ್ದಾರೆ.

ಕಲಿತಿರುವದು ಕಡಿಮೆಯಾದರೂ ಕನ್ನಡ ಭಾಷೆ ಅತ್ಯಂತ ಸಶಕ್ತವಾಗಿ ತಮ್ಮ ಬರವಣಿಗೆಯನ್ನು ತೋರಿದ್ದಾರೆ. ಅವರ ಬರವಣಿಗೆಗೆ ಮೂಲ ಪ್ರೇರಣೆ ಅ.ನ.ಕೃಷ್ಣರಾಯರ ಸಂಧ್ಯಾರಾಗ ಕಾದಂಬರಿಯಾಗಿದೆ. ಏಕಾಂಕ, ರೇಡಿಯೋ ನಾಟಕ, ವಿನೋದ ಬರಹಗಳು, ಸಣ್ಣ ಕತೆಗಳ ಪ್ರಕಾರಗಳಲ್ಲಿ 66 ಪುಸ್ತಕಗಳನ್ನು ಬರೆದಿದ್ದಾರೆ. ವಿಡಂಬನೆಯ ಮೂಲಕ ಪ್ರಸ್ತುತ ಸಮಾಜದ ಸ್ಥಿತಿಗತಿಗಳನ್ನು ಸಮಾಜದ ಮುಂದಿರಿಸಿ ಹಾಸ್ಯದ ಜೊತೆಗೆ ಜಾಗೃತಿಯುಂಟು ಮಾಡುವ
ಕಾರ್ಯವನ್ನು ಬೀಚಿಯವರು ಮಾಡಿದ್ದಾರೆ ಎಂದು ಅನೇಕ ಹಾಸ್ಯ ಪ್ರಸಂಗಗಳನ್ನು ಪ್ರಸ್ತುತಪಡಿಸಿದರು.

ಇದೇ ಸಂದರ್ಭದಲ್ಲಿ ಸೃಷ್ಟಿ ಮೀಡಿಯಾ ಪ್ರತಿಷ್ಠಾನದಿಂದ ಕವಿತಾ ಕಾಶಪ್ಪನವರು ಹಾಗೂ ಬಳಗದವರು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅವರನ್ನು ಸನ್ಮಾನಿಸಿದರು. ಸೌಮ್ಯ ಜಾನ ಪಟ್ಟದಕಲ್ಲು ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು. ಧರ್ಮಗ್ರಂಥ ಪಠಣವನ್ನು ಮಹಾಂತಮ್ಮ ಬಸಮ್ಮ ಚಿತಾಪೂರ, ವಚನ ಚಿಂತನವನ್ನು ನೀಲಮ್ಮ ಬಸಪ್ಪ ಚಿತಾಪೂರ ನೆರವೇರಿಸಿದರು.

ನರೇಗಲ್‌ ಬೀಚಿ ಬಳಗದ ಅಧ್ಯಕ್ಷ ಡಾ.ಆರ್‌.ಕೆ. ಗಚ್ಚಿನಮಠ, ಶಿವಾನುಭವ ಸಮಿತಿ ಚೇರ್ಮನ್‌ ವಿವೇಕಾನಂದಗೌಡ ಪಾಟೀಲ, ಮುರುಘರಾಜೇಂದ್ರ ಬಡ್ನಿ, ರತ್ನಕ್ಕ ಪಾಟೀಲ, ವೀರೇಶ ಬುಳ್ಳಾ, ಶಿವಬಸಪ್ಪ ಯಂಡಿಗೇರಿ, ಸೋಮಶೇಖರ ಪುರಾಣಿಕ ವೇದಿಕೆ ಮೇಲೆ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ದಾನಯ್ಯ ಗಣಾಚಾರಿ ಸ್ವಾಗತಿಸಿ, ರತ್ನಕ್ಕ ಪಾಟೀಲ ನಿರೂಪಿಸಿದರು.

ಟಾಪ್ ನ್ಯೂಸ್

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.